ಬೆಂಗಳೂರು ಗ್ರಾಮಾಂತರ ಜಿ.ಪಂಗೆ ಅತ್ಯುತ್ತಮ ಜಿ.ಪಂ ಸೇರಿ ಆರು ಪ್ರಶಸ್ತಿ ಗರಿ

2022-23 ನೇ ಸಾಲಿನಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯ ಅನುಷ್ಠಾನದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿಯು ರಾಜ್ಯದ ಅತ್ಯುತ್ತಮ ಜಿಲ್ಲಾ ಪಂಚಯತಿ ಪ್ರಶಸ್ತಿ ಸೇರಿ ಒಟ್ಟು ಆರು ಪ್ರಶಸ್ತಿಗಳಿಗೆ ಭಾಜನವಾಗಿದೆ.

ಮಾರ್ಚ್ 24ರಂದು ಬೆಂಗಳೂರಿನಲ್ಲಿ ನಡೆಯುವ ಗಾಂಧಿ ಗ್ರಾಮ ಪುರಸ್ಕಾರ ಹಾಗೂ ನರೇಗಾ ಹಬ್ಬ ಕಾರ್ಯಕ್ರಮದಲ್ಲಿ ಪ್ರಶಸ್ತಿಗಳ ಪ್ರದಾನವಾಗಲಿದೆ ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರವಿ.ಎಂ.ತಿರ್ಲಾಪುರ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಬೆಂಗಳೂರು ಜಿಲ್ಲಾ ಪಂಚಾಯತಿಯು ಅತ್ಯುತ್ತಮ ಜಿಪಂ ಪ್ರಶಸ್ತಿ ಹಾಗೂ 15 ಲಕ್ಷ ನಗದು ಪುರಸ್ಕಾರ, ದೊಡ್ಡಬಳ್ಳಾಪುರ ತಾ.ಪಂ ಅತ್ಯುತ್ತಮ ತಾ.ಪಂ ಪ್ರಶಸ್ತಿ ಹಾಗೂ 10 ಲಕ್ಷ ಪುರಸ್ಕಾರ, ತೂಬಗೆರೆ ಗ್ರಾಮ ಪಂಚಾಯತಿಯು ಅತ್ಯುತ್ತಮ ಗ್ರಾ.ಪಂ ಪ್ರಶಸ್ತಿ ಹಾಗೂ 5 ಲಕ್ಷ ನಗದು ಪುರಸ್ಕಾರಕ್ಕೆ ಆಯ್ಕೆಯಾಗಿವೆ.

ಜೊತೆಗೆ ಅತ್ಯುತ್ತಮ ಆಡಳಿತ ವಿಭಾಗದಲ್ಲಿ ಬೆಂಗಳೂರು ಜಿ.ಪಂ, ಅತ್ಯುತ್ತಮ ತಾಲೂಕು ಮಟ್ಟದ ರೇಷ್ಮೆ ಇಲಾಖೆ ವಿಭಾಗದಲ್ಲಿ ದೇವನಹಳ್ಳಿ ರೇಷ್ಮೆ ಇಲಾಖೆ ಹಾಗೂ ಜಲ ಸಂಜೀವಿನಿ ಪಂಚಾಯತಿ ವಿಭಾಗದಲ್ಲಿ ಸಾಸಲು ಗ್ರಾ.ಪಂ ಪ್ರಶಸ್ತಿ ಪಡೆದಿವೆ‌.

ಪ್ರಶಸ್ತಿಗೆ ನಿಗದಿಪಡಿಸಲಾದ ಮಾನದಂಡಗಳಿಗೆ ಅನುಗುಣವಾಗಿ ಜಿಲ್ಲಾ ಪಂಚಾಯತಿಗಳು ಸಲ್ಲಿಸಿದ ಪುಸ್ತಾವನೆಗಳನ್ನು ರಾಜ್ಯ ಮಟ್ಟದ ಆಯ್ಕೆ ಸಮಿತಿಯು ಮೌಲ್ಯಮಾಪನ ಮಾಡಿ ವಿವಿಧ ಪ್ರಶಸ್ತಿಗಳಿಗೆ ಆಯ್ಕೆ ಮಾಡಿದೆ.

ಜಿಲ್ಲೆಯು ನರೇಗಾ ಯೋಜನೆಯಡಿ ಉತ್ತಮ ಪ್ರಗತಿ ಸಾಧಿಸಲು ಶ್ರಮಿಸಿದ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಈ ಪ್ರಶಸ್ತಿಯು ಹೊಸ ಸಂತಸ, ಉತ್ಸಾಹ ಮೂಡಿದೆ ಎಂದು ಸಾಧನೆಗೆ ಕಾರಣವಾದ ತಂಡಕ್ಕೆ ಅಭಿನಂದನೆಗಳನ್ನು ತಿಳಿಸಿದ ಉಪ ಕಾರ್ಯದರ್ಶಿ ಜಿ.ಪಂ ಹಾಗೂ ನರೇಗಾ ನೋಡಲ್ ಅಧಿಕಾರಿ ಡಾ.ನಾಗರಾಜ

Ramesh Babu

Journalist

Recent Posts

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

10 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

19 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

23 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

2 days ago