ಬೆಂಗಳೂರು ಗ್ರಾಮಾಂತರ ಜಿ.ಪಂಗೆ ಅತ್ಯುತ್ತಮ ಜಿ.ಪಂ ಸೇರಿ ಆರು ಪ್ರಶಸ್ತಿ ಗರಿ

2022-23 ನೇ ಸಾಲಿನಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯ ಅನುಷ್ಠಾನದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿಯು ರಾಜ್ಯದ ಅತ್ಯುತ್ತಮ ಜಿಲ್ಲಾ ಪಂಚಯತಿ ಪ್ರಶಸ್ತಿ ಸೇರಿ ಒಟ್ಟು ಆರು ಪ್ರಶಸ್ತಿಗಳಿಗೆ ಭಾಜನವಾಗಿದೆ.

ಮಾರ್ಚ್ 24ರಂದು ಬೆಂಗಳೂರಿನಲ್ಲಿ ನಡೆಯುವ ಗಾಂಧಿ ಗ್ರಾಮ ಪುರಸ್ಕಾರ ಹಾಗೂ ನರೇಗಾ ಹಬ್ಬ ಕಾರ್ಯಕ್ರಮದಲ್ಲಿ ಪ್ರಶಸ್ತಿಗಳ ಪ್ರದಾನವಾಗಲಿದೆ ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರವಿ.ಎಂ.ತಿರ್ಲಾಪುರ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಬೆಂಗಳೂರು ಜಿಲ್ಲಾ ಪಂಚಾಯತಿಯು ಅತ್ಯುತ್ತಮ ಜಿಪಂ ಪ್ರಶಸ್ತಿ ಹಾಗೂ 15 ಲಕ್ಷ ನಗದು ಪುರಸ್ಕಾರ, ದೊಡ್ಡಬಳ್ಳಾಪುರ ತಾ.ಪಂ ಅತ್ಯುತ್ತಮ ತಾ.ಪಂ ಪ್ರಶಸ್ತಿ ಹಾಗೂ 10 ಲಕ್ಷ ಪುರಸ್ಕಾರ, ತೂಬಗೆರೆ ಗ್ರಾಮ ಪಂಚಾಯತಿಯು ಅತ್ಯುತ್ತಮ ಗ್ರಾ.ಪಂ ಪ್ರಶಸ್ತಿ ಹಾಗೂ 5 ಲಕ್ಷ ನಗದು ಪುರಸ್ಕಾರಕ್ಕೆ ಆಯ್ಕೆಯಾಗಿವೆ.

ಜೊತೆಗೆ ಅತ್ಯುತ್ತಮ ಆಡಳಿತ ವಿಭಾಗದಲ್ಲಿ ಬೆಂಗಳೂರು ಜಿ.ಪಂ, ಅತ್ಯುತ್ತಮ ತಾಲೂಕು ಮಟ್ಟದ ರೇಷ್ಮೆ ಇಲಾಖೆ ವಿಭಾಗದಲ್ಲಿ ದೇವನಹಳ್ಳಿ ರೇಷ್ಮೆ ಇಲಾಖೆ ಹಾಗೂ ಜಲ ಸಂಜೀವಿನಿ ಪಂಚಾಯತಿ ವಿಭಾಗದಲ್ಲಿ ಸಾಸಲು ಗ್ರಾ.ಪಂ ಪ್ರಶಸ್ತಿ ಪಡೆದಿವೆ‌.

ಪ್ರಶಸ್ತಿಗೆ ನಿಗದಿಪಡಿಸಲಾದ ಮಾನದಂಡಗಳಿಗೆ ಅನುಗುಣವಾಗಿ ಜಿಲ್ಲಾ ಪಂಚಾಯತಿಗಳು ಸಲ್ಲಿಸಿದ ಪುಸ್ತಾವನೆಗಳನ್ನು ರಾಜ್ಯ ಮಟ್ಟದ ಆಯ್ಕೆ ಸಮಿತಿಯು ಮೌಲ್ಯಮಾಪನ ಮಾಡಿ ವಿವಿಧ ಪ್ರಶಸ್ತಿಗಳಿಗೆ ಆಯ್ಕೆ ಮಾಡಿದೆ.

ಜಿಲ್ಲೆಯು ನರೇಗಾ ಯೋಜನೆಯಡಿ ಉತ್ತಮ ಪ್ರಗತಿ ಸಾಧಿಸಲು ಶ್ರಮಿಸಿದ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಈ ಪ್ರಶಸ್ತಿಯು ಹೊಸ ಸಂತಸ, ಉತ್ಸಾಹ ಮೂಡಿದೆ ಎಂದು ಸಾಧನೆಗೆ ಕಾರಣವಾದ ತಂಡಕ್ಕೆ ಅಭಿನಂದನೆಗಳನ್ನು ತಿಳಿಸಿದ ಉಪ ಕಾರ್ಯದರ್ಶಿ ಜಿ.ಪಂ ಹಾಗೂ ನರೇಗಾ ನೋಡಲ್ ಅಧಿಕಾರಿ ಡಾ.ನಾಗರಾಜ

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

8 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

8 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

9 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

10 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

13 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

13 hours ago