2022-23 ನೇ ಸಾಲಿನಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯ ಅನುಷ್ಠಾನದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿಯು ರಾಜ್ಯದ ಅತ್ಯುತ್ತಮ ಜಿಲ್ಲಾ ಪಂಚಯತಿ ಪ್ರಶಸ್ತಿ ಸೇರಿ ಒಟ್ಟು ಆರು ಪ್ರಶಸ್ತಿಗಳಿಗೆ ಭಾಜನವಾಗಿದೆ.
ಮಾರ್ಚ್ 24ರಂದು ಬೆಂಗಳೂರಿನಲ್ಲಿ ನಡೆಯುವ ಗಾಂಧಿ ಗ್ರಾಮ ಪುರಸ್ಕಾರ ಹಾಗೂ ನರೇಗಾ ಹಬ್ಬ ಕಾರ್ಯಕ್ರಮದಲ್ಲಿ ಪ್ರಶಸ್ತಿಗಳ ಪ್ರದಾನವಾಗಲಿದೆ ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರವಿ.ಎಂ.ತಿರ್ಲಾಪುರ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಬೆಂಗಳೂರು ಜಿಲ್ಲಾ ಪಂಚಾಯತಿಯು ಅತ್ಯುತ್ತಮ ಜಿಪಂ ಪ್ರಶಸ್ತಿ ಹಾಗೂ 15 ಲಕ್ಷ ನಗದು ಪುರಸ್ಕಾರ, ದೊಡ್ಡಬಳ್ಳಾಪುರ ತಾ.ಪಂ ಅತ್ಯುತ್ತಮ ತಾ.ಪಂ ಪ್ರಶಸ್ತಿ ಹಾಗೂ 10 ಲಕ್ಷ ಪುರಸ್ಕಾರ, ತೂಬಗೆರೆ ಗ್ರಾಮ ಪಂಚಾಯತಿಯು ಅತ್ಯುತ್ತಮ ಗ್ರಾ.ಪಂ ಪ್ರಶಸ್ತಿ ಹಾಗೂ 5 ಲಕ್ಷ ನಗದು ಪುರಸ್ಕಾರಕ್ಕೆ ಆಯ್ಕೆಯಾಗಿವೆ.
ಜೊತೆಗೆ ಅತ್ಯುತ್ತಮ ಆಡಳಿತ ವಿಭಾಗದಲ್ಲಿ ಬೆಂಗಳೂರು ಜಿ.ಪಂ, ಅತ್ಯುತ್ತಮ ತಾಲೂಕು ಮಟ್ಟದ ರೇಷ್ಮೆ ಇಲಾಖೆ ವಿಭಾಗದಲ್ಲಿ ದೇವನಹಳ್ಳಿ ರೇಷ್ಮೆ ಇಲಾಖೆ ಹಾಗೂ ಜಲ ಸಂಜೀವಿನಿ ಪಂಚಾಯತಿ ವಿಭಾಗದಲ್ಲಿ ಸಾಸಲು ಗ್ರಾ.ಪಂ ಪ್ರಶಸ್ತಿ ಪಡೆದಿವೆ.
ಪ್ರಶಸ್ತಿಗೆ ನಿಗದಿಪಡಿಸಲಾದ ಮಾನದಂಡಗಳಿಗೆ ಅನುಗುಣವಾಗಿ ಜಿಲ್ಲಾ ಪಂಚಾಯತಿಗಳು ಸಲ್ಲಿಸಿದ ಪುಸ್ತಾವನೆಗಳನ್ನು ರಾಜ್ಯ ಮಟ್ಟದ ಆಯ್ಕೆ ಸಮಿತಿಯು ಮೌಲ್ಯಮಾಪನ ಮಾಡಿ ವಿವಿಧ ಪ್ರಶಸ್ತಿಗಳಿಗೆ ಆಯ್ಕೆ ಮಾಡಿದೆ.
ಜಿಲ್ಲೆಯು ನರೇಗಾ ಯೋಜನೆಯಡಿ ಉತ್ತಮ ಪ್ರಗತಿ ಸಾಧಿಸಲು ಶ್ರಮಿಸಿದ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಈ ಪ್ರಶಸ್ತಿಯು ಹೊಸ ಸಂತಸ, ಉತ್ಸಾಹ ಮೂಡಿದೆ ಎಂದು ಸಾಧನೆಗೆ ಕಾರಣವಾದ ತಂಡಕ್ಕೆ ಅಭಿನಂದನೆಗಳನ್ನು ತಿಳಿಸಿದ ಉಪ ಕಾರ್ಯದರ್ಶಿ ಜಿ.ಪಂ ಹಾಗೂ ನರೇಗಾ ನೋಡಲ್ ಅಧಿಕಾರಿ ಡಾ.ನಾಗರಾಜ
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…