2022-23 ನೇ ಸಾಲಿನಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯ ಅನುಷ್ಠಾನದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿಯು ರಾಜ್ಯದ ಅತ್ಯುತ್ತಮ ಜಿಲ್ಲಾ ಪಂಚಯತಿ ಪ್ರಶಸ್ತಿ ಸೇರಿ ಒಟ್ಟು ಆರು ಪ್ರಶಸ್ತಿಗಳಿಗೆ ಭಾಜನವಾಗಿದೆ.
ಮಾರ್ಚ್ 24ರಂದು ಬೆಂಗಳೂರಿನಲ್ಲಿ ನಡೆಯುವ ಗಾಂಧಿ ಗ್ರಾಮ ಪುರಸ್ಕಾರ ಹಾಗೂ ನರೇಗಾ ಹಬ್ಬ ಕಾರ್ಯಕ್ರಮದಲ್ಲಿ ಪ್ರಶಸ್ತಿಗಳ ಪ್ರದಾನವಾಗಲಿದೆ ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರವಿ.ಎಂ.ತಿರ್ಲಾಪುರ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಬೆಂಗಳೂರು ಜಿಲ್ಲಾ ಪಂಚಾಯತಿಯು ಅತ್ಯುತ್ತಮ ಜಿಪಂ ಪ್ರಶಸ್ತಿ ಹಾಗೂ 15 ಲಕ್ಷ ನಗದು ಪುರಸ್ಕಾರ, ದೊಡ್ಡಬಳ್ಳಾಪುರ ತಾ.ಪಂ ಅತ್ಯುತ್ತಮ ತಾ.ಪಂ ಪ್ರಶಸ್ತಿ ಹಾಗೂ 10 ಲಕ್ಷ ಪುರಸ್ಕಾರ, ತೂಬಗೆರೆ ಗ್ರಾಮ ಪಂಚಾಯತಿಯು ಅತ್ಯುತ್ತಮ ಗ್ರಾ.ಪಂ ಪ್ರಶಸ್ತಿ ಹಾಗೂ 5 ಲಕ್ಷ ನಗದು ಪುರಸ್ಕಾರಕ್ಕೆ ಆಯ್ಕೆಯಾಗಿವೆ.
ಜೊತೆಗೆ ಅತ್ಯುತ್ತಮ ಆಡಳಿತ ವಿಭಾಗದಲ್ಲಿ ಬೆಂಗಳೂರು ಜಿ.ಪಂ, ಅತ್ಯುತ್ತಮ ತಾಲೂಕು ಮಟ್ಟದ ರೇಷ್ಮೆ ಇಲಾಖೆ ವಿಭಾಗದಲ್ಲಿ ದೇವನಹಳ್ಳಿ ರೇಷ್ಮೆ ಇಲಾಖೆ ಹಾಗೂ ಜಲ ಸಂಜೀವಿನಿ ಪಂಚಾಯತಿ ವಿಭಾಗದಲ್ಲಿ ಸಾಸಲು ಗ್ರಾ.ಪಂ ಪ್ರಶಸ್ತಿ ಪಡೆದಿವೆ.
ಪ್ರಶಸ್ತಿಗೆ ನಿಗದಿಪಡಿಸಲಾದ ಮಾನದಂಡಗಳಿಗೆ ಅನುಗುಣವಾಗಿ ಜಿಲ್ಲಾ ಪಂಚಾಯತಿಗಳು ಸಲ್ಲಿಸಿದ ಪುಸ್ತಾವನೆಗಳನ್ನು ರಾಜ್ಯ ಮಟ್ಟದ ಆಯ್ಕೆ ಸಮಿತಿಯು ಮೌಲ್ಯಮಾಪನ ಮಾಡಿ ವಿವಿಧ ಪ್ರಶಸ್ತಿಗಳಿಗೆ ಆಯ್ಕೆ ಮಾಡಿದೆ.
ಜಿಲ್ಲೆಯು ನರೇಗಾ ಯೋಜನೆಯಡಿ ಉತ್ತಮ ಪ್ರಗತಿ ಸಾಧಿಸಲು ಶ್ರಮಿಸಿದ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಈ ಪ್ರಶಸ್ತಿಯು ಹೊಸ ಸಂತಸ, ಉತ್ಸಾಹ ಮೂಡಿದೆ ಎಂದು ಸಾಧನೆಗೆ ಕಾರಣವಾದ ತಂಡಕ್ಕೆ ಅಭಿನಂದನೆಗಳನ್ನು ತಿಳಿಸಿದ ಉಪ ಕಾರ್ಯದರ್ಶಿ ಜಿ.ಪಂ ಹಾಗೂ ನರೇಗಾ ನೋಡಲ್ ಅಧಿಕಾರಿ ಡಾ.ನಾಗರಾಜ
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…