ಬೆಂಗಳೂರು:ಬೆಂಗಳೂರು ಗ್ರಾಮಾಂತರ ಜಿಲ್ಲಾ ಜನತಾದಳ (ಜಾತ್ಯತೀತ) ಪಕ್ಷದ ಅಧ್ಯಕ್ಷರಾಗಿ ಮಂಜುನಾಥ್ ಕೆ.ವಿ ಅವರನ್ನು ನೇಮಕ ಮಾಡಲಾಗಿದೆ.
ಈ ಕುರಿತು ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ನೇಮಕಾತಿ ಆದೇಶ ಹೊರಡಿಸಿದ್ದು, ಈ ನೇಮಕಾತಿ ತಕ್ಷಣದಿಂದಲೇ ಜಾರಿಗೆ ಬಂದಿದೆ.
ಪಕ್ಷದ ತತ್ವ, ಸಿದ್ಧಾಂತಗಳಿಗೆ ಬದ್ಧರಾಗಿ ಕಾರ್ಯನಿರ್ವಹಿಸಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜನತಾದಳ (ಜಾತ್ಯತೀತ) ಪಕ್ಷವನ್ನು ಸಂಘಟಿಸಿ ಬಲಿಷ್ಠಗೊಳಿಸುವ ಜವಾಬ್ದಾರಿಯನ್ನು ಮಂಜುನಾಥ್ ಕೆ.ವಿ ಅವರು ಸಮರ್ಥವಾಗಿ ನಿಭಾಯಿಸುವ ವಿಶ್ವಾಸವನ್ನು ಹೆಚ್.ಡಿ. ದೇವೇಗೌಡ ಅವರು ವ್ಯಕ್ತಪಡಿಸಿದ್ದಾರೆ.
ನೂತನ ಅಧ್ಯಕ್ಷರಿಗೆ ಪಕ್ಷದ ಹಿರಿಯ ನಾಯಕರು, ಕಾರ್ಯಕರ್ತರು ಹಾಗೂ ಬೆಂಬಲಿಗರು ಶುಭಾಶಯಗಳನ್ನು ಸಲ್ಲಿಸಿದ್ದಾರೆ.
ಬೆಂಗಳೂರು: ಪಕ್ಷದ ತತ್ವ–ಸಿದ್ಧಾಂತಗಳಿಗೆ ನಿಷ್ಠರಾಗಿರುವ, ಸಹಕಾರಿ ಕ್ಷೇತ್ರದಲ್ಲಿ ದೀರ್ಘ ಅನುಭವ ಹೊಂದಿರುವ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಶ್ರೀ ಮಂಜುನಾಥ್ ಕೆ.ವಿ., ಮುಂದಿನ ದಿನಗಳಲ್ಲಿ ಗ್ರಾಮಾಂತರ ಜೆಡಿಎಸ್ ಪಕ್ಷದ ಅಧ್ಯಕ್ಷರಾಗಿ ಸಮರ್ಥವಾಗಿ ಕರ್ತವ್ಯ ನಿರ್ವಹಿಸುವ ವಿಶ್ವಾಸವನ್ನು ಪಕ್ಷದ ಕಾರ್ಯಕರ್ತರು ವ್ಯಕ್ತಪಡಿಸಿದ್ದಾರೆ.
ರೈತ ಕುಟುಂಬದ ಹಿನ್ನೆಲೆಯಿರುವ ಶ್ರೀ ಮಂಜುನಾಥ್ ಕೆ.ವಿ. ಅವರು ದೇವನಹಳ್ಳಿ ಎಪಿಎಂಸಿ ಅಧ್ಯಕ್ಷರಾಗಿ ಹಾಗೂ ಬಿದಲೂರು ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿ, ರೈತರು, ಗ್ರಾಮಾಂತರ ಜನತೆ ಮತ್ತು ಸಹಕಾರಿ ವಲಯದಲ್ಲಿ ಜನಪರ ಆಡಳಿತದ ಮೂಲಕ ತಮ್ಮದೇ ಆದ ಗುರುತನ್ನು ಮೂಡಿಸಿದ್ದಾರೆ. ಪಾರದರ್ಶಕತೆ, ಶಿಸ್ತು ಮತ್ತು ಸೇವಾಭಾವನೆ ಇವರ ಕಾರ್ಯಶೈಲಿಯ ಪ್ರಮುಖ ಲಕ್ಷಣಗಳಾಗಿವೆ.
ಗ್ರಾಮೀಣ ಪ್ರದೇಶದ ಸಮಸ್ಯೆಗಳ ಬಗ್ಗೆ ಅರಿವು ಹೊಂದಿರುವ ಅವರು, ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ಜೊತೆಗೆ ಯುವಕರು, ರೈತರು ಹಾಗೂ ಮಹಿಳೆಯರನ್ನು ಜೆಡಿಎಸ್ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಮಾಡುವಲ್ಲಿ ಮಹತ್ವದ ಪಾತ್ರ ವಹಿಸುವ ನಿರೀಕ್ಷೆಯಿದೆ.
ಗ್ರಾಮಾಂತರ ಭಾಗದಲ್ಲಿ ಜೆಡಿಎಸ್ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ, ಕಾರ್ಯಕರ್ತರೊಂದಿಗೆ ನಿರಂತರ ಸಂವಾದ ನಡೆಸಿ, ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಪರಿಣಾಮಕಾರಿ ನಾಯಕತ್ವವನ್ನು ಅವರು ನೀಡಲಿದ್ದಾರೆ ಎಂದು ಪಕ್ಷದ ಯುವ ಮುಖಂಡ ಉದಯ ಆರಾಧ್ಯ ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…