ಬೆಂಗಳೂರು ಗ್ರಾಮಾಂತರ ಜೆಡಿಎಸ್ ಜಿಲ್ಲಾ ಅಧ್ಯಕ್ಷರಾಗಿ ಮಂಜುನಾಥ್ ಕೆ.ವಿ ನೇಮಕ

ಬೆಂಗಳೂರು:ಬೆಂಗಳೂರು ಗ್ರಾಮಾಂತರ ಜಿಲ್ಲಾ ಜನತಾದಳ (ಜಾತ್ಯತೀತ) ಪಕ್ಷದ ಅಧ್ಯಕ್ಷರಾಗಿ ಮಂಜುನಾಥ್ ಕೆ.ವಿ ಅವರನ್ನು ನೇಮಕ ಮಾಡಲಾಗಿದೆ.

ಈ ಕುರಿತು ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ನೇಮಕಾತಿ ಆದೇಶ ಹೊರಡಿಸಿದ್ದು, ಈ ನೇಮಕಾತಿ ತಕ್ಷಣದಿಂದಲೇ ಜಾರಿಗೆ ಬಂದಿದೆ.

ಪಕ್ಷದ ತತ್ವ, ಸಿದ್ಧಾಂತಗಳಿಗೆ ಬದ್ಧರಾಗಿ ಕಾರ್ಯನಿರ್ವಹಿಸಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜನತಾದಳ (ಜಾತ್ಯತೀತ) ಪಕ್ಷವನ್ನು ಸಂಘಟಿಸಿ ಬಲಿಷ್ಠಗೊಳಿಸುವ ಜವಾಬ್ದಾರಿಯನ್ನು ಮಂಜುನಾಥ್ ಕೆ.ವಿ ಅವರು ಸಮರ್ಥವಾಗಿ ನಿಭಾಯಿಸುವ ವಿಶ್ವಾಸವನ್ನು ಹೆಚ್.ಡಿ. ದೇವೇಗೌಡ ಅವರು ವ್ಯಕ್ತಪಡಿಸಿದ್ದಾರೆ.

ನೂತನ ಅಧ್ಯಕ್ಷರಿಗೆ ಪಕ್ಷದ ಹಿರಿಯ ನಾಯಕರು, ಕಾರ್ಯಕರ್ತರು ಹಾಗೂ ಬೆಂಬಲಿಗರು ಶುಭಾಶಯಗಳನ್ನು ಸಲ್ಲಿಸಿದ್ದಾರೆ.

ಬೆಂಗಳೂರು: ಪಕ್ಷದ ತತ್ವ–ಸಿದ್ಧಾಂತಗಳಿಗೆ ನಿಷ್ಠರಾಗಿರುವ, ಸಹಕಾರಿ ಕ್ಷೇತ್ರದಲ್ಲಿ ದೀರ್ಘ ಅನುಭವ ಹೊಂದಿರುವ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಶ್ರೀ ಮಂಜುನಾಥ್ ಕೆ.ವಿ., ಮುಂದಿನ ದಿನಗಳಲ್ಲಿ ಗ್ರಾಮಾಂತರ ಜೆಡಿಎಸ್ ಪಕ್ಷದ ಅಧ್ಯಕ್ಷರಾಗಿ ಸಮರ್ಥವಾಗಿ ಕರ್ತವ್ಯ ನಿರ್ವಹಿಸುವ ವಿಶ್ವಾಸವನ್ನು ಪಕ್ಷದ ಕಾರ್ಯಕರ್ತರು ವ್ಯಕ್ತಪಡಿಸಿದ್ದಾರೆ.

ರೈತ ಕುಟುಂಬದ ಹಿನ್ನೆಲೆಯಿರುವ ಶ್ರೀ ಮಂಜುನಾಥ್ ಕೆ.ವಿ. ಅವರು ದೇವನಹಳ್ಳಿ ಎಪಿಎಂಸಿ ಅಧ್ಯಕ್ಷರಾಗಿ ಹಾಗೂ ಬಿದಲೂರು ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿ, ರೈತರು, ಗ್ರಾಮಾಂತರ ಜನತೆ ಮತ್ತು ಸಹಕಾರಿ ವಲಯದಲ್ಲಿ ಜನಪರ ಆಡಳಿತದ ಮೂಲಕ ತಮ್ಮದೇ ಆದ ಗುರುತನ್ನು ಮೂಡಿಸಿದ್ದಾರೆ. ಪಾರದರ್ಶಕತೆ, ಶಿಸ್ತು ಮತ್ತು ಸೇವಾಭಾವನೆ ಇವರ ಕಾರ್ಯಶೈಲಿಯ ಪ್ರಮುಖ ಲಕ್ಷಣಗಳಾಗಿವೆ.

ಗ್ರಾಮೀಣ ಪ್ರದೇಶದ ಸಮಸ್ಯೆಗಳ ಬಗ್ಗೆ ಅರಿವು ಹೊಂದಿರುವ ಅವರು, ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ಜೊತೆಗೆ ಯುವಕರು, ರೈತರು ಹಾಗೂ ಮಹಿಳೆಯರನ್ನು ಜೆಡಿಎಸ್ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಮಾಡುವಲ್ಲಿ ಮಹತ್ವದ ಪಾತ್ರ ವಹಿಸುವ ನಿರೀಕ್ಷೆಯಿದೆ.

ಗ್ರಾಮಾಂತರ ಭಾಗದಲ್ಲಿ ಜೆಡಿಎಸ್ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ, ಕಾರ್ಯಕರ್ತರೊಂದಿಗೆ ನಿರಂತರ ಸಂವಾದ ನಡೆಸಿ, ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಪರಿಣಾಮಕಾರಿ ನಾಯಕತ್ವವನ್ನು ಅವರು ನೀಡಲಿದ್ದಾರೆ ಎಂದು ಪಕ್ಷದ ಯುವ ಮುಖಂಡ ಉದಯ ಆರಾಧ್ಯ ಅಭಿಪ್ರಾಯಪಟ್ಟಿದ್ದಾರೆ.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

8 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

9 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

5 days ago