ಬೆಂಗಳೂರು ಗ್ರಾಮಾಂತರ ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ ಸ್ಥಾನಕ್ಕೆ ಉಪ ಚುನಾವಣೆ

ಭಾರತ ಚುನಾವಣಾ ಆಯೋಗವು, ಬೆಂಗಳೂರು ಗ್ರಾಮಾಂತರ ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ ಸ್ಥಾನಕ್ಕೆ ಉಪ ಚುನಾವಣೆಯ ಅಧಿಸೂಚನೆಯನ್ನು ಹೊರಡಿಸಿದ್ದು, ಬೆಂಗಳೂರು ಗ್ರಾಮಾಂತರ ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಉಪ ಚುನಾವಣೆಯು ಫೆಬ್ರವರಿ 16 ರಂದು ಮತದಾನ ನಡೆಯಲಿದೆ. ಫೆಬ್ರವರಿ 20 ರಂದು ಮತ ಎಣಿಕೆ ನಡೆಯಲಿದೆ.

ಚುನಾವಣೆಯ ಮಾದರಿ ಚುನಾವಣಾ ನೀತಿ ಸಂಹಿತೆಯು ದಿನಾಂಕ 16.01.2024 ರಿಂದಲೇ ಚುನಾವಣೆ ನಡೆಯುವ ಕ್ಷೇತ್ರ ವ್ಯಾಪ್ತಿಯಲ್ಲಿ ಜಾರಿಯಲ್ಲಿರುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಶಿಕ್ಷಕರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಡಾ.ಶಿವಶಂಕರ. ಎನ್ ತಿಳಿಸಿದ್ದಾರೆ.

ಭಾರತ ಚುನಾವಣಾ ಆಯೋಗದ ಚುನಾವಣಾ ವೇಳಾ ಪಟ್ಟಿಯಂತೆ ಚುನಾವಣಾ ಅಧಿಸೂಚನೆ ಜ. 23 (ಮಂಗಳವಾರ), ನಾಮಪತ್ರ ಸಲ್ಲಿಸಲು ಕೊನೆಯ ದಿನ 30 ಜನವರಿ 2024 (ಮಂಗಳವಾರ), ನಾಮಪತ್ರಗಳ ಪರಿಶೀಲನೆ ಜ. 31  (ಬುಧವಾರ), ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನಾಂಕ – 02 ಫೆಬ್ರವರಿ 2024 (ಶುಕ್ರವಾರ), ಮತದಾನದ ದಿನಾಂಕ -16 ಫೆಬ್ರವರಿ 2024 (ಶುಕ್ರವಾರ), ಮತದಾನದ ಸಮಯ- ಬೆಳಿಗ್ಗೆ 8:00 ರಿಂದ ಸಂಜೆ 4:00 ಗಂಟೆ, ಮತ ಎಣಿಕೆ ದಿನಾಂಕ- 20 ಫೆಬ್ರವರಿ 2024 (ಮಂಗಳವಾರ), ಚುನಾವಣಾ ಪ್ರಕ್ರಿಯೆ ಕೊನೆಗೊಳ್ಳುವ ದಿನಾಂಕ- 23 ಫೆಬ್ರವರಿ 2024 (ಶುಕ್ರವಾರ).

ಭಾರತದ ಚುನಾವಣಾ ಆಯೋಗವು 16.01.2024 ರಂದು ಹೊರಡಿಸಲಾದ ಚುನಾವಣಾ ವೇಳಾ ಪಟ್ಟಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ 178-ಹೊಸಕೋಟೆ, 179-ದೇವನಹಳ್ಳಿ, 180-ದೊಡ್ಡಬಳ್ಳಾಪುರ, 181-ನೆಲಮಂಗಲ ನಾಲ್ಕು ವಿಧಾನಸಭಾ ಕ್ಷೇತ್ರಗಳು ಒಳಗೊಂಡಿರುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಬೆಂಗಳೂರು ಗ್ರಾಮಾಂತರ ಶಿಕ್ಷಕರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಡಾ.ಶಿವಶಂಕರ.ಎನ್ ಅವರು ತಿಳಿಸಿದ್ದಾರೆ.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

2 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

7 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

16 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

22 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

23 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago