ಬೆಂಗಳೂರು ಮತ್ತು ಧಾರವಾಡ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್ಪ್ರೆಸ್ 20661/62 ರಲ್ಲಿ ಕನ್ನಡ ಮಾಯ..! ಯಾವುದೇ ಕನ್ನಡ ಚಲನಚಿತ್ರಗಳು ಅಥವಾ ಕನ್ನಡ ಕಾರ್ಯಕ್ರಮಗಳ ಪಟ್ಟಿ ಇಲ್ಲದೇ ಇರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಕರ್ನಾಟಕದಲ್ಲಿ ಸಂಚರಿಸುವ ರೈಲಿನಲ್ಲಿ ಕನ್ನಡ ಭಾಷೆಯ ಚಲನಚಿತ್ರ, ಕನ್ನಡ ಕಾರ್ಯಕ್ರಮಗಳಿಗೆ ಮಾನ್ಯತೆ ನೀಡದೇ ತೆಲುಗು, ತಮಿಳು, ಹಿಂದಿ, ಇಂಗ್ಲಿಷ್ ಭಾಷೆಯ ಚಲನಚಿತ್ರಗಳ ಆಯ್ಕೆ ಪಟ್ಟಿ ಇದೆ.
ಕೇಂದ್ರ ರೈಲ್ವೆ ಮಂತ್ರಿಗಳಾದ ಅಶ್ವಿನಿ ವೈಷ್ಣವ್ ಅವರೇ ಬೆಂಗಳೂರು ಮತ್ತು ಧಾರವಾಡ ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ 20661/62 ರಲ್ಲಿ ಯಾವುದೇ ಕನ್ನಡ ಚಲನಚಿತ್ರಗಳು ಅಥವಾ ಕನ್ನಡ ಕಾರ್ಯಕ್ರಮಗಳು ಇಲ್ಲವೇ ಇಲ್ಲ. ಇದನ್ನು ತಕ್ಷಣ ಸರಿ ಮಾಡಬೇಕಾಗಿ ಕನ್ನಡಿಗರ ಆಗ್ರಹ ಎಂದು ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಅವರು ಟ್ವೀಟ್ ಮಾಡಿದ್ದಾರೆ.
ಈ ಒಂದು ಬೆಂಗಳೂರು–ಧಾರವಾಡ ಮಧ್ಯೆ ಸಂಚರಿಸುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಂಚಾರಕ್ಕೆ ಜೂನ್.27ರಂದು ಪ್ರಧಾನಿ ನರೇಂದ್ರ ಮೋದಿ ಅವರು ಭೋಪಾಲ್ ನ ರಾಣಿ ಕಮಲಪತಿ ನಿಲ್ದಾಣದಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದರು.
ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…