Categories: ರಾಜ್ಯ

ಬೆಂಗಳೂರು- ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಕನ್ನಡ ಮಾಯ..!: ಕನ್ನಡ ಭಾಷೆಯ ಚಲನಚಿತ್ರ, ಕಾರ್ಯಕ್ರಮಗಳಿಗೆ ಮಾನ್ಯತೆ ನೀಡದ ರೈಲ್ವೆ ಸಚಿವಾಲಯ: ಕನ್ನಡಿಗರ ಆಕ್ರೋಶ

ಬೆಂಗಳೂರು ಮತ್ತು ಧಾರವಾಡ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ 20661/62 ರಲ್ಲಿ ಕನ್ನಡ ಮಾಯ..! ಯಾವುದೇ ಕನ್ನಡ ಚಲನಚಿತ್ರಗಳು ಅಥವಾ ಕನ್ನಡ ಕಾರ್ಯಕ್ರಮಗಳ ಪಟ್ಟಿ ಇಲ್ಲದೇ ಇರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಕರ್ನಾಟಕದಲ್ಲಿ ಸಂಚರಿಸುವ ರೈಲಿನಲ್ಲಿ ಕನ್ನಡ ಭಾಷೆಯ ಚಲನಚಿತ್ರ, ಕನ್ನಡ ಕಾರ್ಯಕ್ರಮಗಳಿಗೆ ಮಾನ್ಯತೆ ನೀಡದೇ ತೆಲುಗು, ತಮಿಳು, ಹಿಂದಿ, ಇಂಗ್ಲಿಷ್ ಭಾಷೆಯ ಚಲನಚಿತ್ರಗಳ ಆಯ್ಕೆ ಪಟ್ಟಿ ಇದೆ.

ಕೇಂದ್ರ ರೈಲ್ವೆ ಮಂತ್ರಿಗಳಾದ ಅಶ್ವಿನಿ ವೈಷ್ಣವ್ ಅವರೇ ಬೆಂಗಳೂರು ಮತ್ತು ಧಾರವಾಡ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ 20661/62 ರಲ್ಲಿ ಯಾವುದೇ ಕನ್ನಡ ಚಲನಚಿತ್ರಗಳು ಅಥವಾ ಕನ್ನಡ ಕಾರ್ಯಕ್ರಮಗಳು ಇಲ್ಲವೇ ಇಲ್ಲ. ಇದನ್ನು ತಕ್ಷಣ ಸರಿ ಮಾಡಬೇಕಾಗಿ ಕನ್ನಡಿಗರ ಆಗ್ರಹ ಎಂದು ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಅವರು ಟ್ವೀಟ್ ಮಾಡಿದ್ದಾರೆ.

ಈ ಒಂದು ಬೆಂಗಳೂರು–ಧಾರವಾಡ ಮಧ್ಯೆ ಸಂಚರಿಸುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಂಚಾರಕ್ಕೆ ಜೂನ್.27ರಂದು ಪ್ರಧಾನಿ ನರೇಂದ್ರ ಮೋದಿ ಅವರು ಭೋಪಾಲ್ ನ ರಾಣಿ ಕಮಲಪತಿ ನಿಲ್ದಾಣದಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದರು.

ಧಾರವಾಡದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯಪಾಲ ಥಾವರಚಂದ್ ಗೆಲ್ಹೋಟ್, ಶಾಸಕ ಅರವಿಂದ ಬೆಲ್ಲದ್, ಪರಿಷತ್ ಸದಸ್ಯ ಸಂಕನೂರ ಮೇಯರ್ ವೀಣಾ ಭಾರದ್ವಾಡ ಸಹ ಭಾಗಿಯಾಗಿದ್ದರು.

Ramesh Babu

Journalist

Recent Posts

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

3 hours ago

ಎಲ್-ನಿನೋ ಪರಿಣಾಮ, ಮಳೆಯ ಕೊರತೆ, ತಾಪಮಾನದ ಏರಿಕೆ, ಒಣ ಹವಾಮಾನ ಹೆಚ್ಚಳ ಸಾಧ್ಯತೆ: ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಇರಲಿ ಆದ್ಯತೆ

ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…

3 hours ago

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

16 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

18 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

2 days ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

2 days ago