ಬೆಂಗಳೂರು ನಗರಕ್ಕೆ ಕೂಗಳತೆ ದೂರದಲ್ಲಿರುವ ಊರಲ್ಲಿ ಒಂದು ಸಣ್ಣ ತಂಗುದಾಣವಿಲ್ಲ. ಬಸ್ ನಿಲ್ದಾಣ ಕಟ್ಟಿಕೊಡಲು ದಾನಿಯೇ ಮುಂದೆ ಬಂದರು ಗ್ರಾಮ ಪಂಚಾಯಿತಿ ಅನುಮತಿ ನೀಡದೇ ಅಡ್ಡಗಾಲು ಹಾಕುತ್ತಿದೆ. ತಂಗುದಾಣವಿಲ್ಲದೆ ಬಿಸಿಲು, ಮಳೆಯಲ್ಲಿ ಜನರು ಬಸ್ ಗಾಗಿ ಕಾಯುತ್ತಾರೆ. ಅದು ಎಲ್ಲಿ ಅಂತೀರಾ ಈ ಸ್ಟೋರಿ ಓದಿ….
ಯೆಸ್…. ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ಸೊಣ್ಣೇನಹಳ್ಳಿ ಗ್ರಾಮದಲ್ಲಿ ಸುಮಾರು 30-40 ವರ್ಷಗಳಿಂದ ಬಸ್ ಸ್ಟಾಂಡ್ ನಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತಹ ಸುಸಜ್ಜಿತ ತಂಗುದಾಣವಿಲ್ಲ. ವೃದ್ಧರು, ಮಹಿಳೆಯರು, ಶಾಲಾ ಕಾಲೇಜಿನ ವಿದ್ಯಾರ್ಥಿಗಳು, ರೋಗಿಗಳು ಸೇರಿದಂತೆ ಇತರೆ ಪ್ರಯಾಣಿಕರು ಮಳೆ, ಗಾಳಿ, ಬಿಸಿಲನಲ್ಲಿ ನೊಂದು, ಬೆಂದು, ತೋಯ್ದು ಬಸ್ ಹತ್ತಿ, ಇಳಿದು ಮನೆಗಳು ಹಾಗೂ ಇತರೆ ಸ್ಥಳಗಳಿಗೆ ತೆರಳುತ್ತಾರೆ, ಆಗಮಿಸುತ್ತಾರೆ.
ಇದನ್ನ ಮನಗೊಂಡ ಊರಿನ ಯುವಕ ಪ್ರಯಾಣಿಕರ ಅನೂಕಲಕ್ಕಾಗಿ ಸ್ವಂತ ಹಣದಲ್ಲಿ ತಂಗುದಾಣ ನಿರ್ಮಿಸಲು ಮುಂದಾಗಿದ್ದು, ಆದರೆ, ಇದಕ್ಕೆ ಸೊಣ್ಣೇನಹಳ್ಳಿ ಗ್ರಾಮ ಪಂಚಾಯಿತಿ ಅನುಮತಿ ನೀಡದೇ ಅಡ್ಡಗಾಲು ಹಾಕುತ್ತಿದೆ.
ಸೊಣ್ಣೇನಹಳ್ಳಿ ಗ್ರಾಮದಲ್ಲಿ NH7 – NH4 ಹೆದ್ದಾರಿ ಹಾದುಹೋಗುತ್ತದೆ. ಈ ಹೆದ್ದಾರಿ ಮೂಲಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಮಧುರೆ ದೇವಸ್ಥಾನ, ಬೆಂಗಳೂರು, ಯಲಹಂಕ, ರಾಜಾನುಕುಂಟೆ ಸೇರಿದಂತೆ ಇತರೆ ಊರುಗಳಿಗೆ ನೂರಾರು ಬಸ್ ಗಳು ಓಡಾಡುತ್ತವೆ.
ಈ ವೇಳೆ ನರಸಿಂಹಮೂರ್ತಿ ಮಾತನಾಡಿ, ದೀಪದ ಬುಡದಲ್ಲಿ ಕತ್ತಲು ಎಂಬಂತೆ ನಮ್ಮ ಗ್ರಾಮ ಸೊಣ್ಣೇನಹಳ್ಳಿ ರಾಜಧಾನಿಗೆ ಕೂಗಳತೆ ದೂರದಲ್ಲೇ ಇದ್ದರೂ ಅಭಿವೃದ್ಧಿ ಹಾಗೂ ಮೂಲಭೂತ ಸೌಕರ್ಯ ಕೊರತೆಯಿಂದಾಗಿ ಸೊರಗುತ್ತಿದೆ.
ಪ್ರಯಾಣಿಕರು ಬಿಸಿಲು-ಮಳೆಗೆ ಮೈಯೊಡ್ಡಿ ಬಸ್ಸಿಗಾಗಿ ಕಾದು ಕಾದು ನಿತ್ರಾಣರಾಗುವ ಸ್ಥಿತಿ ನಿರ್ಮಾಣವಾಗಿದೆ. ಪ್ರಯಾಣಿಕರು ರಸ್ತೆ ಇಕ್ಕೆಲಗಳಲ್ಲಿ ನಿಂತು ನರಕಯಾತನೆ ಅನುಭವಿಸಬೇಕಾಗಿದೆ. ಬಸ್ಸಿಗಾಗಿ ಕಾಯುವ ಪ್ರಯಾಣಿಕರಲ್ಲಿ ಅಂಗವಿಕಲರು, ಮಕ್ಕಳು, ವೃದ್ಧರು, ಮಹಿಳೆಯರು, ರೋಗಿಗಳು, ವಿದ್ಯಾರ್ಥಿಗಳು ಸೇರಿದಂತೆ ಎಲ್ಲರೂ ಬಿಸಿಲಲ್ಲೇ ನಿಲ್ಲಬೇಕಾಗಿದೆ..ಈ ಹಿನ್ನೆಲೆ ನಾನೇ ನನ್ನ ಸ್ವಂತ ಹಣದಿಂದ ತಂಗುದಾಣ ನಿರ್ಮಿಸಲು ಮುಂದಾಗಿದ್ದೆ. ಆದರೆ, ಗ್ರಾಮಪಂಚಾಯಿತಿ ಅಡ್ಡಗಾಲು ಹಾಕುತ್ತಿದೆ ಎಂದರು.
ನಗರದಲ್ಲಿ ತಂಗುದಾಣ ಇಲ್ಲದೇ ಇರುವ ಕಾರಣ ಕೆಲ ಬಸ್ ಗಳು ನಿಲುಗಡೆ ಮಾಡದೇ ಹೋರಟು ಹೋಗುತ್ತವೆ. ಆಗ ಬಸ್ಸಿಗಾಗಿ ಗಂಟೆಗಟ್ಟಲೇ ಕಾದು ಕುಳಿತ ಪ್ರಯಾಣಿಕರು ಮತ್ತೆ ರಸ್ತೆಯಲ್ಲೇ ಇನ್ನಷ್ಟು ಸಮಯ ಕಳೆಯಬೇಕಾದ ದುಸ್ಥಿತಿ ನಿರ್ಮಾಣವಾಗುತ್ತಿದೆ. ಪ್ರಯಾಣಿಕರು ರಸ್ತೆಯಲ್ಲೇ ಬಸ್ಸಿಗೆ ನಿಲ್ಲುತ್ತಿರುವುದರಿಂದ ಕೆಲವೊಮ್ಮೆ ಅಪಘಾತಗಳು ಸಂಭವಿಸುತ್ತಿವೆ ಎಂದು ಹೇಳಿದರು.
ನಗರದ ಅಭಿವೃದ್ಧಿಗೆ ಕೋಟ್ಯಂತರ ರೂ.ಖರ್ಚು ಮಾಡುವ ಜನಪ್ರತಿನಿಧಿಗಳು, ತಾಲೂಕು ಆಡಳಿತ, ನಗರಸಭೆ ಅಧಿಕಾರಿಗಳಿಗೆ ತಂಗುದಾಣ ನಿರ್ಮಿಸಬೇಕೆಂಬ ಕನಿಷ್ಠ ಕಾಳಜಿ ಇಲ್ಲದಿರುವುದು ಸೊಣ್ಣೇನಹಳ್ಳಿ ಜನರ ದೌರ್ಭಾಗ್ಯವೇ ಸರಿ. ಇನ್ನಾದರೂ ಸಂಬಂಧಪಟ್ಟ ಇಲಾಖೆಗಳು ಎಚ್ಚೆತ್ತುಕೊಂಡು ಸೂಕ್ತ ಹಾಗೂ ಪ್ರಯಾಣಿಕ ಸ್ನೇಹಿ ತಂಗುದಾಣ ನಿರ್ಮಿಸಬೇಕೆಂಬುದು ಜನರ ಒಕ್ಕೊರಲ ಆಗ್ರಹವಾಗಿದೆ ಎಂದು ಹೇಳಿದರು.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…