ಬೆಂಗಳೂರು ನಗರಕ್ಕೆ ಕೂಗಳತೆ ದೂರದಲ್ಲಿರುವ ಊರಲ್ಲಿ ಒಂದು ಸಣ್ಣ ತಂಗುದಾಣವಿಲ್ಲ: ತಂಗುದಾಣ ನಿರ್ಮಿಸಲು ದಾನಿ ಮುಂದೆ ಬಂದರೆ ಗ್ರಾಮ ಪಂಚಾಯಿತಿ ಅನುಮತಿ ನೀಡದೇ ಅಡ್ಡಗಾಲು

ಬೆಂಗಳೂರು ನಗರಕ್ಕೆ ಕೂಗಳತೆ ದೂರದಲ್ಲಿರುವ ಊರಲ್ಲಿ ಒಂದು ಸಣ್ಣ ತಂಗುದಾಣವಿಲ್ಲ. ಬಸ್ ನಿಲ್ದಾಣ ಕಟ್ಟಿಕೊಡಲು ದಾನಿಯೇ ಮುಂದೆ ಬಂದರು ಗ್ರಾಮ ಪಂಚಾಯಿತಿ ಅನುಮತಿ ನೀಡದೇ ಅಡ್ಡಗಾಲು ಹಾಕುತ್ತಿದೆ. ತಂಗುದಾಣವಿಲ್ಲದೆ ಬಿಸಿಲು, ಮಳೆಯಲ್ಲಿ ಜನರು ಬಸ್ ಗಾಗಿ ಕಾಯುತ್ತಾರೆ. ಅದು ಎಲ್ಲಿ ಅಂತೀರಾ ಈ ಸ್ಟೋರಿ ಓದಿ….

ಯೆಸ್…. ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ಸೊಣ್ಣೇನಹಳ್ಳಿ ಗ್ರಾಮದಲ್ಲಿ ಸುಮಾರು 30-40 ವರ್ಷಗಳಿಂದ ಬಸ್ ಸ್ಟಾಂಡ್ ನಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತಹ ಸುಸಜ್ಜಿತ ತಂಗುದಾಣವಿಲ್ಲ. ವೃದ್ಧರು, ಮಹಿಳೆಯರು, ಶಾಲಾ ಕಾಲೇಜಿನ ವಿದ್ಯಾರ್ಥಿಗಳು, ರೋಗಿಗಳು ಸೇರಿದಂತೆ ಇತರೆ ಪ್ರಯಾಣಿಕರು ಮಳೆ, ಗಾಳಿ, ಬಿಸಿಲನಲ್ಲಿ ನೊಂದು, ಬೆಂದು, ತೋಯ್ದು ಬಸ್ ಹತ್ತಿ, ಇಳಿದು ಮನೆಗಳು ಹಾಗೂ ಇತರೆ ಸ್ಥಳಗಳಿಗೆ ತೆರಳುತ್ತಾರೆ, ಆಗಮಿಸುತ್ತಾರೆ.

ಇದನ್ನ ಮನಗೊಂಡ ಊರಿನ‌ ಯುವಕ ಪ್ರಯಾಣಿಕರ ಅನೂಕಲಕ್ಕಾಗಿ ಸ್ವಂತ ಹಣದಲ್ಲಿ‌ ತಂಗುದಾಣ ನಿರ್ಮಿಸಲು ಮುಂದಾಗಿದ್ದು, ಆದರೆ, ಇದಕ್ಕೆ ಸೊಣ್ಣೇನಹಳ್ಳಿ ಗ್ರಾಮ ಪಂಚಾಯಿತಿ ಅನುಮತಿ ನೀಡದೇ ಅಡ್ಡಗಾಲು ಹಾಕುತ್ತಿದೆ.

ಸೊಣ್ಣೇನಹಳ್ಳಿ ಗ್ರಾಮದಲ್ಲಿ NH7 – NH4 ಹೆದ್ದಾರಿ‌ ಹಾದುಹೋಗುತ್ತದೆ. ಈ ಹೆದ್ದಾರಿ ಮೂಲಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಮಧುರೆ ದೇವಸ್ಥಾನ, ಬೆಂಗಳೂರು, ಯಲಹಂಕ, ರಾಜಾನುಕುಂಟೆ ಸೇರಿದಂತೆ ಇತರೆ ಊರುಗಳಿಗೆ ನೂರಾರು ಬಸ್ ಗಳು ಓಡಾಡುತ್ತವೆ.

ಈ ವೇಳೆ ನರಸಿಂಹಮೂರ್ತಿ ಮಾತನಾಡಿ, ದೀಪದ ಬುಡದಲ್ಲಿ ಕತ್ತಲು ಎಂಬಂತೆ ನಮ್ಮ ಗ್ರಾಮ ಸೊಣ್ಣೇನಹಳ್ಳಿ ರಾಜಧಾನಿಗೆ ಕೂಗಳತೆ ದೂರದಲ್ಲೇ ಇದ್ದರೂ ಅಭಿವೃದ್ಧಿ ಹಾಗೂ ಮೂಲಭೂತ‌ ಸೌಕರ್ಯ ಕೊರತೆಯಿಂದಾಗಿ  ಸೊರಗುತ್ತಿದೆ.

ಪ್ರಯಾಣಿಕರು ಬಿಸಿಲು-ಮಳೆಗೆ ಮೈಯೊಡ್ಡಿ ಬಸ್ಸಿಗಾಗಿ ಕಾದು ಕಾದು ನಿತ್ರಾಣರಾಗುವ ಸ್ಥಿತಿ ನಿರ್ಮಾಣವಾಗಿದೆ. ಪ್ರಯಾಣಿಕರು ರಸ್ತೆ ಇಕ್ಕೆಲಗಳಲ್ಲಿ ನಿಂತು ನರಕಯಾತನೆ ಅನುಭವಿಸಬೇಕಾಗಿದೆ. ಬಸ್ಸಿಗಾಗಿ ಕಾಯುವ ಪ್ರಯಾಣಿಕರಲ್ಲಿ ಅಂಗವಿಕಲರು, ಮಕ್ಕಳು, ವೃದ್ಧರು, ಮಹಿಳೆಯರು, ರೋಗಿಗಳು‌, ವಿದ್ಯಾರ್ಥಿಗಳು ಸೇರಿದಂತೆ ಎಲ್ಲರೂ ಬಿಸಿಲಲ್ಲೇ ನಿಲ್ಲಬೇಕಾಗಿದೆ..ಈ ಹಿನ್ನೆಲೆ ನಾನೇ ನನ್ನ ಸ್ವಂತ ಹಣದಿಂದ ತಂಗುದಾಣ ನಿರ್ಮಿಸಲು ಮುಂದಾಗಿದ್ದೆ. ಆದರೆ, ಗ್ರಾಮಪಂಚಾಯಿತಿ ಅಡ್ಡಗಾಲು ಹಾಕುತ್ತಿದೆ ಎಂದರು.

ನಗರದಲ್ಲಿ ತಂಗುದಾಣ ಇಲ್ಲದೇ ಇರುವ ಕಾರಣ ಕೆಲ ಬಸ್ ಗಳು ನಿಲುಗಡೆ ಮಾಡದೇ ಹೋರಟು ಹೋಗುತ್ತವೆ. ಆಗ ಬಸ್ಸಿಗಾಗಿ ಗಂಟೆಗಟ್ಟಲೇ ಕಾದು ಕುಳಿತ ಪ್ರಯಾಣಿಕರು ಮತ್ತೆ ರಸ್ತೆಯಲ್ಲೇ ಇನ್ನಷ್ಟು ಸಮಯ ಕಳೆಯಬೇಕಾದ ದುಸ್ಥಿತಿ ನಿರ್ಮಾಣವಾಗುತ್ತಿದೆ. ಪ್ರಯಾಣಿಕರು ರಸ್ತೆಯಲ್ಲೇ ಬಸ್ಸಿಗೆ ನಿಲ್ಲುತ್ತಿರುವುದರಿಂದ ಕೆಲವೊಮ್ಮೆ ಅಪಘಾತಗಳು ಸಂಭವಿಸುತ್ತಿವೆ ಎಂದು ಹೇಳಿದರು.

ನಗರದ ಅಭಿವೃದ್ಧಿಗೆ ಕೋಟ್ಯಂತರ ರೂ.ಖರ್ಚು ಮಾಡುವ ಜನಪ್ರತಿನಿಧಿಗಳು, ತಾಲೂಕು ಆಡಳಿತ, ನಗರಸಭೆ ಅಧಿಕಾರಿಗಳಿಗೆ ತಂಗುದಾಣ ನಿರ್ಮಿಸಬೇಕೆಂಬ ಕನಿಷ್ಠ ಕಾಳಜಿ ಇಲ್ಲದಿರುವುದು ಸೊಣ್ಣೇನಹಳ್ಳಿ ಜನರ ದೌರ್ಭಾಗ್ಯವೇ ಸರಿ. ಇನ್ನಾದರೂ ಸಂಬಂಧಪಟ್ಟ ಇಲಾಖೆಗಳು ಎಚ್ಚೆತ್ತುಕೊಂಡು ಸೂಕ್ತ ಹಾಗೂ ಪ್ರಯಾಣಿಕ ಸ್ನೇಹಿ ತಂಗುದಾಣ ನಿರ್ಮಿಸಬೇಕೆಂಬುದು ಜನರ ಒಕ್ಕೊರಲ ಆಗ್ರಹವಾಗಿದೆ ಎಂದು ಹೇಳಿದರು.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

2 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

2 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

3 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

3 days ago