ಬೆಂಗಳೂರು ನಗರಕ್ಕೆ ಕೂಗಳತೆ ದೂರದಲ್ಲಿರುವ ಊರಲ್ಲಿ ಒಂದು ಸಣ್ಣ ತಂಗುದಾಣವಿಲ್ಲ: ತಂಗುದಾಣ ನಿರ್ಮಿಸಲು ದಾನಿ ಮುಂದೆ ಬಂದರೆ ಗ್ರಾಮ ಪಂಚಾಯಿತಿ ಅನುಮತಿ ನೀಡದೇ ಅಡ್ಡಗಾಲು

ಬೆಂಗಳೂರು ನಗರಕ್ಕೆ ಕೂಗಳತೆ ದೂರದಲ್ಲಿರುವ ಊರಲ್ಲಿ ಒಂದು ಸಣ್ಣ ತಂಗುದಾಣವಿಲ್ಲ. ಬಸ್ ನಿಲ್ದಾಣ ಕಟ್ಟಿಕೊಡಲು ದಾನಿಯೇ ಮುಂದೆ ಬಂದರು ಗ್ರಾಮ ಪಂಚಾಯಿತಿ ಅನುಮತಿ ನೀಡದೇ ಅಡ್ಡಗಾಲು ಹಾಕುತ್ತಿದೆ. ತಂಗುದಾಣವಿಲ್ಲದೆ ಬಿಸಿಲು, ಮಳೆಯಲ್ಲಿ ಜನರು ಬಸ್ ಗಾಗಿ ಕಾಯುತ್ತಾರೆ. ಅದು ಎಲ್ಲಿ ಅಂತೀರಾ ಈ ಸ್ಟೋರಿ ಓದಿ….

ಯೆಸ್…. ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ಸೊಣ್ಣೇನಹಳ್ಳಿ ಗ್ರಾಮದಲ್ಲಿ ಸುಮಾರು 30-40 ವರ್ಷಗಳಿಂದ ಬಸ್ ಸ್ಟಾಂಡ್ ನಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತಹ ಸುಸಜ್ಜಿತ ತಂಗುದಾಣವಿಲ್ಲ. ವೃದ್ಧರು, ಮಹಿಳೆಯರು, ಶಾಲಾ ಕಾಲೇಜಿನ ವಿದ್ಯಾರ್ಥಿಗಳು, ರೋಗಿಗಳು ಸೇರಿದಂತೆ ಇತರೆ ಪ್ರಯಾಣಿಕರು ಮಳೆ, ಗಾಳಿ, ಬಿಸಿಲನಲ್ಲಿ ನೊಂದು, ಬೆಂದು, ತೋಯ್ದು ಬಸ್ ಹತ್ತಿ, ಇಳಿದು ಮನೆಗಳು ಹಾಗೂ ಇತರೆ ಸ್ಥಳಗಳಿಗೆ ತೆರಳುತ್ತಾರೆ, ಆಗಮಿಸುತ್ತಾರೆ.

ಇದನ್ನ ಮನಗೊಂಡ ಊರಿನ‌ ಯುವಕ ಪ್ರಯಾಣಿಕರ ಅನೂಕಲಕ್ಕಾಗಿ ಸ್ವಂತ ಹಣದಲ್ಲಿ‌ ತಂಗುದಾಣ ನಿರ್ಮಿಸಲು ಮುಂದಾಗಿದ್ದು, ಆದರೆ, ಇದಕ್ಕೆ ಸೊಣ್ಣೇನಹಳ್ಳಿ ಗ್ರಾಮ ಪಂಚಾಯಿತಿ ಅನುಮತಿ ನೀಡದೇ ಅಡ್ಡಗಾಲು ಹಾಕುತ್ತಿದೆ.

ಸೊಣ್ಣೇನಹಳ್ಳಿ ಗ್ರಾಮದಲ್ಲಿ NH7 – NH4 ಹೆದ್ದಾರಿ‌ ಹಾದುಹೋಗುತ್ತದೆ. ಈ ಹೆದ್ದಾರಿ ಮೂಲಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಮಧುರೆ ದೇವಸ್ಥಾನ, ಬೆಂಗಳೂರು, ಯಲಹಂಕ, ರಾಜಾನುಕುಂಟೆ ಸೇರಿದಂತೆ ಇತರೆ ಊರುಗಳಿಗೆ ನೂರಾರು ಬಸ್ ಗಳು ಓಡಾಡುತ್ತವೆ.

ಈ ವೇಳೆ ನರಸಿಂಹಮೂರ್ತಿ ಮಾತನಾಡಿ, ದೀಪದ ಬುಡದಲ್ಲಿ ಕತ್ತಲು ಎಂಬಂತೆ ನಮ್ಮ ಗ್ರಾಮ ಸೊಣ್ಣೇನಹಳ್ಳಿ ರಾಜಧಾನಿಗೆ ಕೂಗಳತೆ ದೂರದಲ್ಲೇ ಇದ್ದರೂ ಅಭಿವೃದ್ಧಿ ಹಾಗೂ ಮೂಲಭೂತ‌ ಸೌಕರ್ಯ ಕೊರತೆಯಿಂದಾಗಿ  ಸೊರಗುತ್ತಿದೆ.

ಪ್ರಯಾಣಿಕರು ಬಿಸಿಲು-ಮಳೆಗೆ ಮೈಯೊಡ್ಡಿ ಬಸ್ಸಿಗಾಗಿ ಕಾದು ಕಾದು ನಿತ್ರಾಣರಾಗುವ ಸ್ಥಿತಿ ನಿರ್ಮಾಣವಾಗಿದೆ. ಪ್ರಯಾಣಿಕರು ರಸ್ತೆ ಇಕ್ಕೆಲಗಳಲ್ಲಿ ನಿಂತು ನರಕಯಾತನೆ ಅನುಭವಿಸಬೇಕಾಗಿದೆ. ಬಸ್ಸಿಗಾಗಿ ಕಾಯುವ ಪ್ರಯಾಣಿಕರಲ್ಲಿ ಅಂಗವಿಕಲರು, ಮಕ್ಕಳು, ವೃದ್ಧರು, ಮಹಿಳೆಯರು, ರೋಗಿಗಳು‌, ವಿದ್ಯಾರ್ಥಿಗಳು ಸೇರಿದಂತೆ ಎಲ್ಲರೂ ಬಿಸಿಲಲ್ಲೇ ನಿಲ್ಲಬೇಕಾಗಿದೆ..ಈ ಹಿನ್ನೆಲೆ ನಾನೇ ನನ್ನ ಸ್ವಂತ ಹಣದಿಂದ ತಂಗುದಾಣ ನಿರ್ಮಿಸಲು ಮುಂದಾಗಿದ್ದೆ. ಆದರೆ, ಗ್ರಾಮಪಂಚಾಯಿತಿ ಅಡ್ಡಗಾಲು ಹಾಕುತ್ತಿದೆ ಎಂದರು.

ನಗರದಲ್ಲಿ ತಂಗುದಾಣ ಇಲ್ಲದೇ ಇರುವ ಕಾರಣ ಕೆಲ ಬಸ್ ಗಳು ನಿಲುಗಡೆ ಮಾಡದೇ ಹೋರಟು ಹೋಗುತ್ತವೆ. ಆಗ ಬಸ್ಸಿಗಾಗಿ ಗಂಟೆಗಟ್ಟಲೇ ಕಾದು ಕುಳಿತ ಪ್ರಯಾಣಿಕರು ಮತ್ತೆ ರಸ್ತೆಯಲ್ಲೇ ಇನ್ನಷ್ಟು ಸಮಯ ಕಳೆಯಬೇಕಾದ ದುಸ್ಥಿತಿ ನಿರ್ಮಾಣವಾಗುತ್ತಿದೆ. ಪ್ರಯಾಣಿಕರು ರಸ್ತೆಯಲ್ಲೇ ಬಸ್ಸಿಗೆ ನಿಲ್ಲುತ್ತಿರುವುದರಿಂದ ಕೆಲವೊಮ್ಮೆ ಅಪಘಾತಗಳು ಸಂಭವಿಸುತ್ತಿವೆ ಎಂದು ಹೇಳಿದರು.

ನಗರದ ಅಭಿವೃದ್ಧಿಗೆ ಕೋಟ್ಯಂತರ ರೂ.ಖರ್ಚು ಮಾಡುವ ಜನಪ್ರತಿನಿಧಿಗಳು, ತಾಲೂಕು ಆಡಳಿತ, ನಗರಸಭೆ ಅಧಿಕಾರಿಗಳಿಗೆ ತಂಗುದಾಣ ನಿರ್ಮಿಸಬೇಕೆಂಬ ಕನಿಷ್ಠ ಕಾಳಜಿ ಇಲ್ಲದಿರುವುದು ಸೊಣ್ಣೇನಹಳ್ಳಿ ಜನರ ದೌರ್ಭಾಗ್ಯವೇ ಸರಿ. ಇನ್ನಾದರೂ ಸಂಬಂಧಪಟ್ಟ ಇಲಾಖೆಗಳು ಎಚ್ಚೆತ್ತುಕೊಂಡು ಸೂಕ್ತ ಹಾಗೂ ಪ್ರಯಾಣಿಕ ಸ್ನೇಹಿ ತಂಗುದಾಣ ನಿರ್ಮಿಸಬೇಕೆಂಬುದು ಜನರ ಒಕ್ಕೊರಲ ಆಗ್ರಹವಾಗಿದೆ ಎಂದು ಹೇಳಿದರು.

Ramesh Babu

Journalist

Recent Posts

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

2 hours ago

ಖಾತೆ ಹಂಚಿಕೆ ಕುರಿತು ಸಚಿವ ಕೆ.ಎಚ್. ಮುನಿಯಪ್ಪ ಅಸಮಾಧಾನ: “ಸಿನಿಯಾರಿಟಿಗೆ ಗೌರವ ಸಿಕ್ಕಿಲ್ಲ”- ಕೆ.ಎಚ್ ಮುನಿಯಪ್ಪ

ದೇವನಹಳ್ಳಿ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರವಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ಅವರು…

4 hours ago

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಆರಂಭದಲ್ಲೇ ರಾಜಕೀಯ ಆಘಾತ ಎದುರಾಗಿದೆ. ಸಚಿವ ರಾಮಲಿಂಗ ರೆಡ್ಡಿ ತಮ್ಮ…

7 hours ago

ಭಾರತದ ಮಧ್ಯಮ ವರ್ಗದವರ ಸಿಹಿ-ಕಹಿಗಳು, ನಿರಾಸೆ ಮತ್ತು ಜೀವನೋತ್ಸಾಹ…..

ಭಾರತದ ಬಹಳಷ್ಟು ಮಧ್ಯಮ ವರ್ಗದ ಜನರಲ್ಲಿ ಜೀವನೋತ್ಸಾಹ ಕಡಿಮೆಯಾಗುತ್ತಿದೇಯೇ ಎಂಬ ಅನುಮಾನ ಶುರುವಾಗಿದೆ. ನಿಜಕ್ಕೂ ಬೃಹತ್ ಸಂಖ್ಯೆಯ ಮಧ್ಯಮ ವರ್ಗದವರು…

11 hours ago

ದೊಡ್ಡಬಳ್ಳಾಪುರದಲ್ಲಿ ಕಳ್ಳರ ಹಾವಳಿ: ಸರ, ಬೈಕ್‌ನಿಂದ ಹಸುಗಳವರೆಗೆ ಕಳವು – ಜನರಲ್ಲಿ ಹೆಚ್ಚಿದ ಆತಂಕ

ದೊಡ್ಡಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಜನಸಾಮಾನ್ಯರ ನೆಮ್ಮದಿ ಕದಡಿದೆ. ಮಹಿಳೆಯರ ಚಿನ್ನಾಭರಣ,…

11 hours ago

ಸಿಎಂ, ಡಿಸಿಎಂ, ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ಸಿಗಲಿದೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ…

12 hours ago