ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕೂ ತಾಲೂಕುಗಳ ಮೂಲಕ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 207 ಕಾಮಾಗಾರಿ ನಡೆಯುತ್ತಿದ್ದು, ಕಾಮಗಾರಿ ಸ್ಥಳಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ ನೀಡಿ ಪರಿಶೀಲನೆ ನಡೆಸಿದರು
ನೆಲಮಂಗಲ ತಾಲೂಕಿನ ದಾಬಸ್ ಪೇಟೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಾಗಾರಿಯ ಪರಿಶೀಲನೆಯನ್ನ ಸಚಿವ ಸತೀಶ್ ಜಾರಕಿಹೊಳಿ ನಡೆಸಿದರು, ಇದೇ ವೇಳೆ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರು ಮತ್ತು ಅಧಿಕಾರಿಗಳು ಹಾಜರಿದ್ದರು.
ನಂತನ ಮಾಧ್ಯಮದೊಂದಿಗೆ ಮತನಾಡಿದ ಅವರು, ಬೆಂಗಳೂರು ಸಿಟಿಗೆ ಹೋಗದೆ ಚೆನೈ ಮತ್ತು ಹೈದರಬಾದ್ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕಿಸುವ ರಸ್ತೆ ನಿರ್ಮಿಸುವುದು ಬಹಳ ಹಿಂದಿನ ಕನಸು, ಅಂತಹದೊಂದು ರಸ್ತೆ ರಾಷ್ಟ್ರೀಯ ಹೆದ್ದಾರಿ 207, ಇಡೀ ದಿನ ಹೆದ್ದಾರಿಯ ವೀಕ್ಷಣೆ ಮಾಡಲಾಗುವುದು, ಹೆದ್ದಾರಿಯ ಪ್ರಗತಿಯ ಬಗ್ಗೆ ತಿಳಿಯಲಿದ್ದು ಕಾಮಾಗಾರಿಯ ವೇಗ ಹೆಚ್ಚಿಸುವ ಬಗ್ಗೆಯೂ ಚರ್ಚೆ ಮಾಡಲಾಗುವುದು ಎಂದರು.
ಬೆಂಗಳೂರು ಟ್ರಾಫಿಕ್ ತಡೆಯಲು ಈ ಹೆದ್ದಾರಿ ಬಹಳ ಮುಖ್ಯವಾಗಿದ್ದು ಮೊದಲ ಆದ್ಯತೆಯನ್ನ ಹೊಸೂರು-ದಾಬಸ್ ಪೇಟೆ ಹೆದ್ದಾರಿಗೆ ನೀಡಲಾಗುವುದು, ಹೆದ್ದಾರಿಯಲ್ಲಿ ಅಂಡರ್ ಪಾಸ್ ನಿರ್ಮಾಣದ ಬಗ್ಗೆಯೂ ಬೇಡಿಕೆ ಇದ್ದು ಅವುಗಳ ಬಗ್ಗೆಯೂ ಅಧಿಕಾರಿಗ ಜೊತೆ ಚರ್ಚೆ ಮಾಡಲಾಗುವುದು ಎಂದರು.
ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ, ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ, ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಜಿಲ್ಲಾಧಿಕಾರಿ ಡಾ.ಎನ್.ಶಿವಂಶಕರ್, ಅಪರ ಜಿಲ್ಲಾಧಿಕಾರಿ, ತಾ.ಪಂ ಇಒ, ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…