ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆಡಳಿತದ ಚುಕ್ಕಾಣಿ ಹಿಡಿದಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದಕೂಡಲೇ ರಾಜ್ಯದಲ್ಲಿ ಹಲವು ಬದಲಾವಣೆ ಮಾಡುವ ಬರದಲ್ಲಿ ತೊಡಗಿದೆ. ಅದೇರೀತಿ ಹಲವು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಮಂಗಳವಾರ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಗುಪ್ತಚರ ಇಲಾಖೆ ಹೆಚ್ಚುವರಿ ಡಿಜಿಪಿಯಾಗಿದ್ದ ಬಿ. ದಯಾನಂದ ಅವರನ್ನು ಎತ್ತಂಗಡಿ ಮಾಡಿ, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ನೇಮಕ ಮಾಡಲಾಗಿದೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಪ್ರತಾಪ್ ರೆಡ್ಡಿ ಅವರನ್ನು ಆಂತರಿಕ ಭದ್ರತೆ ಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಎಡಿಜಿಪಿ ಮತ್ತು ಬೆಂಗಳೂರು ನಗರದ ಸಂಚಾರ ವಿಭಾಗದ ವಿಶೇಷ ಆಯುಕ್ತರಾಗಿದ್ದ ಎಂ.ಎ. ಸಲೀಂ ಅವರನ್ನು ಸಿಐಡಿ ಡಿಜಿಯಾಗಿ ನೇಮಿಸಲಾಗಿದೆ.
ಕ್ರಿಮಿನಲ್ ತನಿಖೆ ವಿಭಾಗದ ಎಡಿಜಿಪಿ ಆಗಿದ್ದ ಶರತ್ ಚಂದ್ರ ಅವರನ್ನು ಕೂಡಲೇ ಜಾರಿಗೆ ಬರುವಂತೆ ಗುಪ್ತಚರ ಇಲಾಖೆ ಎಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…