ಬೆಂಗಳೂರು-ನೆಲಮಂಗಲ ಹೆದ್ದಾರಿ ರಸ್ತೆಯಲ್ಲಿ ಮೊಳೆಗಳನ್ನು ಚೆಲ್ಲಿ ಸಂಚಾರಕ್ಕೆ ಅಡಚಣೆ ಉಂಟುಮಾಡುತಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಕಂಡುಬಂದ ಹಿನ್ನೆಲೆ ನೆಲಮಂಗಲ ಉಪವಿಭಾಗದ ಎಲ್ಲಾ ಪೊಲೀಸ್ ಠಾಣೆಗಳ ವತಿಯಿಂದ ರಾಷ್ಟ್ರೀಯ ಹೆದ್ದಾರಿಯ ಪಕ್ಕದ ಪಂಚರ್ ಶಾಪ್ ಗಳನ್ನು ಪರಿಶೀಲನೆ ಮಾಡಿ ಮಾಲೀಕರಿಗೆ ಮೊಳೆಗಳನ್ನು ರಸ್ತೆಯಲ್ಲಿ ಚೆಲ್ಲದಂತೆ ಎಚ್ಚರಿಕೆ ಮತ್ತು ತಿಳುವಳಿಕೆ ನೀಡಲಾಯಿತು.
ಇತ್ತೀಚಿನ ದಿನಗಳಲ್ಲಿ ಹಲವು ವಾಹನಗಳ ಚಕ್ರಗಳು ಮೊಳೆಗಳಿಂದಾಗಿ ಪಂಕ್ಚರ್ ಆಗುತ್ತಿರುವುದರಿಂದ ಮಾಲೀಕರ ಜೇಬಿಗೆ ಕತ್ತರಿ ಬೀಳುತ್ತಿದೆ. ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಮೊಳೆಗಳು ಕಂಡುಬರುತ್ತಿದ್ದು, ಇದರ ಹಿಂದೆ ಪಂಕ್ಚರ್ ಮಾಫಿಯಾದ ಕೈವಾಡವಿದೆ ಎನ್ನಲಾಗುತ್ತಿದೆ. ರಸ್ತೆಗಳಲ್ಲಿ ಓಡಾಡುವ ವಾಹನಗಳ ಚಕ್ರಗಳು, ಮೊಳೆ ಸಿಲುಕಿ ಪಂಕ್ಚರ್ ಆಗುತ್ತಿವೆ. ಮೊಳೆಗಳು ರಸ್ತೆ ಮೇಲೆ ಬಿದ್ದಿರುವುದರ ಹಿಂದೆ ಸುತ್ತಮುತ್ತಲಿನ ಪಂಕ್ಚರ್ ಅಂಗಡಿಗಳ ಕೈವಾಡವಿರುವ ಅನುಮಾನ ವ್ಯಕ್ತವಾಗುತ್ತು. ಈ ಹಿನ್ನೆಲೆ ಪೊಲೀಸ್ ಇಲಾಖೆ ವತಿಯಿಂದ ಪಂಕ್ಚರ್ ಶಾಪ್ ಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…