ಬೆಂಗಳೂರು-ನೆಲಮಂಗಲ ಹೆದ್ದಾರಿ ರಸ್ತೆಯಲ್ಲಿ ಮೊಳೆಗಳನ್ನು ಚೆಲ್ಲಿ ಸಂಚಾರಕ್ಕೆ ಅಡಚಣೆ ಉಂಟುಮಾಡುತಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಕಂಡುಬಂದ ಹಿನ್ನೆಲೆ ನೆಲಮಂಗಲ ಉಪವಿಭಾಗದ ಎಲ್ಲಾ ಪೊಲೀಸ್ ಠಾಣೆಗಳ ವತಿಯಿಂದ ರಾಷ್ಟ್ರೀಯ ಹೆದ್ದಾರಿಯ ಪಕ್ಕದ ಪಂಚರ್ ಶಾಪ್ ಗಳನ್ನು ಪರಿಶೀಲನೆ ಮಾಡಿ ಮಾಲೀಕರಿಗೆ ಮೊಳೆಗಳನ್ನು ರಸ್ತೆಯಲ್ಲಿ ಚೆಲ್ಲದಂತೆ ಎಚ್ಚರಿಕೆ ಮತ್ತು ತಿಳುವಳಿಕೆ ನೀಡಲಾಯಿತು.
ಇತ್ತೀಚಿನ ದಿನಗಳಲ್ಲಿ ಹಲವು ವಾಹನಗಳ ಚಕ್ರಗಳು ಮೊಳೆಗಳಿಂದಾಗಿ ಪಂಕ್ಚರ್ ಆಗುತ್ತಿರುವುದರಿಂದ ಮಾಲೀಕರ ಜೇಬಿಗೆ ಕತ್ತರಿ ಬೀಳುತ್ತಿದೆ. ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಮೊಳೆಗಳು ಕಂಡುಬರುತ್ತಿದ್ದು, ಇದರ ಹಿಂದೆ ಪಂಕ್ಚರ್ ಮಾಫಿಯಾದ ಕೈವಾಡವಿದೆ ಎನ್ನಲಾಗುತ್ತಿದೆ. ರಸ್ತೆಗಳಲ್ಲಿ ಓಡಾಡುವ ವಾಹನಗಳ ಚಕ್ರಗಳು, ಮೊಳೆ ಸಿಲುಕಿ ಪಂಕ್ಚರ್ ಆಗುತ್ತಿವೆ. ಮೊಳೆಗಳು ರಸ್ತೆ ಮೇಲೆ ಬಿದ್ದಿರುವುದರ ಹಿಂದೆ ಸುತ್ತಮುತ್ತಲಿನ ಪಂಕ್ಚರ್ ಅಂಗಡಿಗಳ ಕೈವಾಡವಿರುವ ಅನುಮಾನ ವ್ಯಕ್ತವಾಗುತ್ತು. ಈ ಹಿನ್ನೆಲೆ ಪೊಲೀಸ್ ಇಲಾಖೆ ವತಿಯಿಂದ ಪಂಕ್ಚರ್ ಶಾಪ್ ಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ.
ದೊಡ್ಡಬಳ್ಳಾಪುರ: ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…
ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…
ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…