ಬೆಂಗಳೂರು ಪದವೀಧರರ ಕ್ಷೇತ್ರ ಚುನಾವಣೆಗೆ ದಿನಾಂಕ ಘೋಷಣೆ: ಜೂನ್ 03 ಕ್ಕೆ ಮತದಾನ

ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಗೆ ಜೂ. 03 ರಂದು ಮತದಾನ ನಡೆಯಲಿದ್ದು, ಅರ್ಹ ಪದವೀಧರರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಮೇ. 06 ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎನ್.ಶಿವಶಂಕರ ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಭಾರತ ಚುನಾವಣಾ ಆಯೋಗವು, ಬೆಂಗಳೂರು ಪದವೀಧರರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದ್ದು ದಿನಾಂಕ: 09 ಮೇ. 2024 (ಗುರುವಾರ) ಅಧಿಸೂಚನೆ ಹೊರಡಿಸಲಾಗುತ್ತದೆ. ನಾಮಪತ್ರ ಸಲ್ಲಿಸಲು ಕೊನೆಯ ದಿನ 16 ಮೇ. 2024 (ಗುರುವಾರ), ನಾಮಪತ್ರಗಳ ಪರಿಶೀಲನೆ ದಿನಾಂಕ- 17 ಮೇ. 2024 (ಶುಕ್ರವಾರ), ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನಾಂಕ – 20 ಮೇ. 2024 (ಸೋಮವಾರ), ಮತದಾನದ ದಿನಾಂಕ -03 ಜೂನ್.

2024 (ಸೋಮವಾರ), ಮತದಾನದ ಸಮಯ- ಬೆಳಿಗ್ಗೆ 8:00 ರಿಂದ ಸಂಜೆ 4:00 ಗಂಟೆ, ಮತ ಎಣಿಕೆ ದಿನಾಂಕ- ಜೂನ್ 06. 2024 (ಗುರುವಾರ), ಚುನಾವಣಾ ಪ್ರಕ್ರಿಯೆ ಕೊನೆಗೊಳ್ಳುವ ದಿನಾಂಕ- ಜೂನ್12. 2024 ( ಬುಧವಾರ). ಮತದಾನದ ಸಮಯ ಬೆಳಿಗ್ಗೆ 8.00 ರಿಂದ ಸಂಜೆ 4.00 ಗಂಟೆಯವರೆಗೆ ನಡೆಯಲಿದೆ.

ಚುನಾವಣೆಯ ಮಾದರಿ ನೀತಿ ಸಂಹಿತೆಯು ಮೇ 02 ರಿಂದಲೇ ಚುನಾವಣೆ ನಡೆಯುವ ಕ್ಷೇತ್ರ ವ್ಯಾಪ್ತಿಯಲ್ಲಿ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಪದವೀಧರರ ಕ್ಷೇತ್ರದ ಅಂತಿಮ ಮತದಾರ ಪಟ್ಟಿಯಂತೆ 9378 ಪುರುಷ ಪದವೀಧರರು ಹಾಗೂ 8270 ಮಹಿಳಾ ಪದವೀಧರರು ಸೇರಿ ಒಟ್ಟು 17648 ಪದವೀಧರ ಮತದಾರರು ಪಟ್ಟಿಯಲ್ಲಿ ನೊಂದಾಯಿಸಿಕೊಂಡಿದ್ದಾರೆ.

*ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿ*

ಮತದಾರರ ನಿರಂತರ ನೋಂದಣಿ ಪ್ರಕ್ರಿಯೆಯು ಜಾರಿಯಲ್ಲಿರುತ್ತದೆ. ಈಗಾಗಲೇ 30.12.2023 ರಂದು ಅಂತಿಮ ಮತದಾರರ ‘ಪಟ್ಟಿಯನ್ನು ಪ್ರಚೂರ ಪಡಿಸಲಾಗಿರುತ್ತದೆ. ಮುಂದುವರೆಸುತ್ತಾ ಹೊಸದಾಗಿ ನೋಂದಾಯಿಸಬೇಕಾದ ಮತದಾರರಿಗೆ ದಿನಾಂಕ: 06.05.2024ರ ಸಂಜೆ 5.30 ರವರೆಗೆ ನೋಂದಣಿಗಾಗಿ ಅರ್ಜಿಯನ್ನು ಸ್ವೀಕರಿಸುವ ಪ್ರಕ್ರಿಯೆ ನಿರಂತರವಾಗಿ ಜಾರಿಯಲ್ಲಿರುತ್ತದೆ. ಕಾರಣ ಅರ್ಹರಿರುವ ಮತದಾರರು ನಿಗದಿ ಪಡಿಸಿದ ಕಾಲ ಮಿತಿಯೊಳಗೆ ನೋಂದಣಿ ಪ್ರಕ್ರಿಯೆಗಾಗಿ ತಮ್ಮ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಿ ತಮ್ಮ ಹೆಸರನ್ನು ನೊಂದಾಯಿಸಿಕೊಂಡು ಮತದಾನ ಹಕ್ಕನ್ನು ಚಲಾಯಿಸಿ ಸುಭದ್ರವಾದ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಕಲ್ಪಿಸುವಲ್ಲಿ ಸೂಕ್ತ ಪಾತ್ರವಹಿಸಲು ಸಾರ್ವಜನಿಕರಲ್ಲಿ ವಿನಂತಿಸಲಾಗಿದೆ.

ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಬಗ್ಗೆ ಹಾಗೂ ಚುನಾವಣೆಗೆ ಸಂಬಂಧಿಸಿದಂತೆ ಇತರೆ ವಿಷಯಗಳ ಬಗ್ಗೆ ಸಾರ್ವಜನಿಕರಿಂದ ಸ್ವೀಕರಿಸುವ ದೂರು / ಅಹವಾಲುಗಳನ್ನು ನಿವಾರಿಸುವ ಸಲುವಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ರವರ ಕಛೇರಿ ಹಾಗೂ ಜಿಲ್ಲೆಯ ಉಪವಿಭಾಗಾಧಿಕಾರರಿಗಳ ಕಚೇರಿ & ತಹಸೀಲ್ದಾರ್ ಕಛೇರಿಗಳಲ್ಲಿ ದೂರು ನಿವಾರಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಈ ಕೆಳಕಾಣಿಸಿದ ಸಹಾಯವಾಣಿ ಸಂಖ್ಯೆಗಳನ್ನು ನಿಗದಿಪಡಿಸಲಾಗಿದೆ.

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರವರ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಸಹಾಯವಾಣಿ ಸಂಖ್ಯೆ. 080-29902025, ಉಪವಿಭಾಗಾಧಿಕಾರಿ ರವರ ಕಚೇರಿ (ದೊಡ್ಡಬಳ್ಳಾಪುರ ಉಪವಿಭಾಗ) ಸಹಾಯವಾಣಿ ಸಂಖ್ಯೆ. 080-27622037, ತಹಶೀಲ್ದಾರ್ ಕಚೇರಿ(ಹೊಸಕೋಟೆ ವಿಧಾನಸಭಾ ಕ್ಷೇತ್ರ) ಸಹಾಯವಾಣಿ ಸಂಖ್ಯೆ. 080-27931237, ತಹಶೀಲ್ದಾರ್ ಕಚೇರಿ (ದೇವನಹಳ್ಳಿ ವಿಧಾನಸಭಾ ಕ್ಷೇತ್ರ) ಸಹಾಯವಾಣಿ ಸಂಖ್ಯೆ. 080-22122999, ತಹಶೀಲ್ದಾರ್ ಕಚೇರಿ (ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ) ಸಹಾಯವಾಣಿ ಸಂಖ್ಯೆ. 080-27622002, ತಹಶೀಲ್ದಾರ್ ಕಚೇರಿ (ನೆಲಮಂಗಲ ವಿಧಾನಸಭಾ ಕ್ಷೇತ್ರ) ಸಹಾಯವಾಣಿ ಸಂಖ್ಯೆ. 080-27722126 ಮೇಲಿನ ಸಹಾಯವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಪರಿಹಾರವನ್ನು ಪಡೆದುಕೊಳ್ಳಬಹುದಾಗಿದೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಯು ಒಂದು ಅತ್ಯಂತ ಮಹತ್ವಪೂರ್ಣ ಹಾಗೂ ಪವಿತ್ರ ಕಾರ್ಯವಾಗಿರುತ್ತದೆ. ಕಾರಣ ಈ ಚುನಾವಣೆಯನ್ನು, ಮುಕ್ತ, ನ್ಯಾಯಸಮ್ಮತ ಹಾಗೂ ನಿಷ್ಪಕ್ಷಪಾತವಾಗಿ ಜರುಗುವಲ್ಲಿ ಪ್ರತಿಯೊಬ್ಬ ಮತದಾರರು ಹಾಗೂ ಎಲ್ಲಾ ರಾಜಕೀಯ ಪಕ್ಷದವರು ಹಾಗೂ ವರ್ಗದವರು ಸಕಾರತ್ಮಕವಾಗಿ ಕಾರ್ಯನಿರ್ವಹಿಸಿ ದೋಷರಹಿತವಾಗಿರುವಂತಹ ಚುನಾವಣೆಯನ್ನು ಯಶಸ್ವಿಯಾಗಿ ನಿರ್ವಹಿಸುವಲ್ಲಿ ಎಲ್ಲರು ತಮ್ಮ ಜವಾಬ್ದಾರಿಯನ್ನು ಅರಿತುಕೊಂಡು ಅದಕ್ಕನುಗುಣವಾಗಿ ಕಾರ್ಯನಿರ್ವಹಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಬೆಂಗಳೂರು ಪದವೀಧರರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಡಾ. ಎನ್. ಶಿವಶಂಕರ ಅವರು ತಿಳಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಅಪರ ಜಿಲ್ಲಾಧಿಕಾರಿ ಸಂಗಪ್ಪ ಉಪಸ್ಥಿತರಿದ್ದರು.

Ramesh Babu

Journalist

Recent Posts

ಬೆಳೆ ವಿಮೆ ಮಾಡಿಸಲು ಆ.14 ಕೊನೆಯ ದಿನ: ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…

7 hours ago

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

9 hours ago

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

10 hours ago

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

18 hours ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

1 day ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

1 day ago