ಇಂದು ಹಾವೇರಿ ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ ಸರ್ಕಾರದ ವತಿಯಿಂದ ತಲಾ ರೂ.2 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ.
ಇಂದು ನಸುಕಿನ ಜಾವ 4 ಗಂಟೆ ಸುಮಾರಿಗೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಟ್ರಕ್ ಗೆ ಹಿಂದಿನಿಂದ ಟಿಟಿ ವಾಹನ ಬಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಟಿಟಿ ವಾಹನದಲ್ಲಿದ್ದ 7 ಮಂದಿ ಮಹಿಳೆಯರು ಸೇರಿ 13 ಜನ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮೃತಪಟ್ಟವರನ್ನು ಪರಶುರಾಮ್(45), ಭಾಗ್ಯ(40), ನಾಗೇಶ(50), ವಿಶಾಲಾಕ್ಷಿ(40), ಅರ್ಪಿತಾ(18), ಸುಭದ್ರಾ ಬಾಯಿ(65), ಪುಣ್ಯ(50), ಮಂಜುಳಾಬಾಯಿ, ಚಾಲಕ ಆದರ್ಶ್(23), ಮಾನಸ(24), ರೂಪಾ(40), ಮಂಜುಳಾ(50) ಎಂದು ಗುರುತಿಸಲಾಗಿದೆ. ಎಲ್ಲರೂ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಎಹಟ್ಟಿ ಗ್ರಾಮದ ನಿವಾಸಿಗಳಾಗಿದ್ದಾರೆ.
ಟಿಟಿ ವಾಹನದಲ್ಲಿದ್ದ ಒಟ್ಟು 15 ಜನರು ಸವದತ್ತಿ ರೇಣುಕಾ ಯಲ್ಲಮ್ಮ ದರ್ಶನ ಪಡೆದು ಮರಳಿ ಊರಿಗೆ ಹೋಗುತ್ತಿರುವಾಗ ಅಪಘಾತ ಸಂಭವಿಸಿದೆ.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…