ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಡ್ರಗ್ಸ್, ಆಭರಣ, ಲ್ಯಾಪ್ ಟಾಪ್, ವಿದೇಶಿ ವಾಚ್ ಜಪ್ತಿ..!

ಬೆಂಗಳೂರು ನಗರ ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿ ತಂಡವು ಮಾದಕವಸ್ತು ಮಾರಾಟಗಾರರನ್ನು ಬಂಧಿಸಿರುವ ಬಗ್ಗೆ ತಿಳಿಸಿದರು. ಅದರ ಭಾಗವಾಗಿ ಕಾರ್ಯಾಚರಣೆಯನ್ನು ಕೈಗೊಂಡು, ಮೂರು ವಿದೇಶಿ ಮೂಲದ ಡ್ರಗ್ ಪೆಡ್ಲರ್‌ಗಳು ಹಾಗೂ ಹೊರ ರಾಜ್ಯದ 03 ಡ್ರಗ್ ಪೆಡ್ಲರ್‌ಗಳು ಸೇರಿದಂತೆ ಒಟ್ಟು 06 ಜನರನ್ನು ವಶಕ್ಕೆ ಪಡೆದುಕೊಳ್ಳಲಾಗಿರುತ್ತದೆ. ಅವರಿಂದ ಒಟ್ಟು ₹ 44 ಲಕ್ಷ ಮೌಲ್ಯದ 54 ಗ್ರಾಂ, ಎಂ.ಡಿ.ಎಂ.ಎ ಕ್ರಿಸ್ಟೆಲ್, 410 ಗ್ರಾಂ. ಹೈಡ್ರೋ ಗಾಂಜಾ. 18 ಕೆಜಿ. ಗಾಂಜಾ ಹಾಗೂ ಕೃತ್ಯಕ್ಕೆ ಬಳಸಲಾಗುತ್ತಿದ್ದ 4 ಮೊಬೈಲ್ ಫೋನ್‌ಗಳು ಹಾಗೂ 4 ಎಲೆಕ್ಟ್ರಾನಿಕ್ ವಸ್ತುಗಳನ್ನ ವಶಪಡಿಸಿಕೊಳ್ಳಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್ ಅವರು ತಿಳಿಸಿದರು.

ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯ ಪೊಲೀಸರು ಲ್ಯಾಪ್ ಟಾಪ್ ಮತ್ತು ಕ್ರೋಮ್ ಬಾಕ್ಸ್‌ಗಳು ಕಳ್ಳತನದ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆ.16 ರಂದು ಐದು ವ್ಯಕ್ತಿಗಳನ್ನು ಬಂದಿಸಿದ್ದಾರೆ. ಈ ಪೈಕಿ ಇಬ್ಬರು ವ್ಯಕ್ತಿಗಳು ಅದೇ ಕಂಪನಿಯಲ್ಲಿ ಲ್ಯಾಪ್‌ ಟಾಪ್ ಟೆಕ್ನಿಷಿಯನ್ ಆಗಿ ಕೆಲಸ ಮಾಡಿಕೊಂಡಿದ್ದು, ಉಳಿದ ಮೂರು ವ್ಯಕ್ತಿಗಳು ಇವರ ಸಹಚರರಾಗಿರುತ್ತಾರೆಂದು ತಿಳಿದುಬಂದಿದೆ. ಒಟ್ಟು ₹16,00,000/- ಮೌಲ್ಯದ ವಿವಿಧ ಕಂಪನಿಯ 29  ಲ್ಯಾಪ್ ಟಾಪ್ ಗಳು ಮತ್ತು 59 ಕ್ರೋಮ್ ಬಾಕ್ಸ್ ಗಳನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ  ಪೊಲೀಸ್‌ ಅಧಿಕಾರಿಗಳು ಯಶಸ್ವಿಯಾಗಿರುತ್ತಾರೆ ಎಂದು ಮಾಹಿತಿ‌ ನೀಡಿದರು.

ಬೆಂಗಳೂರಿನ ಜೆ.ಪಿ ನಗರ ಪೊಲೀಸ್ ಠಾಣೆಯಲ್ಲಿ ಮಾ.9ರಂದು ಎರಡು ಪ್ರತ್ಯೇಕ ಮನೆ ದರೋಡೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೂವರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅವರಿಂದ 414 ಗ್ರಾಂ ಚಿನ್ನದ ವಡವೆಗಳನ್ನು ಮತ್ತು 104 ಗ್ರಾಂ ತೂಕದ ಬೆಳ್ಳಿ ವಸ್ತುಗಳನ್ನು ಹಾಗೂ 04 ವಿದೇಶಿ ಬ್ರಾಂಡ್‌ನ ವಾಚ್ ಗಳನ್ನು ವಶಪಡಿಸಿಕೊಂಡಿರುತ್ತಾರೆ. ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ ₹ 28,00.000/- ಆಗಿರುತ್ತದೆ ಎಂದರು.

Ramesh Babu

Journalist

Recent Posts

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

25 minutes ago

Arizona’s New Wave of Home‑Buying Assistance: What Buyers Need to Know

The desert sun has always promised a bright future for Arizona residents, but the rising…

7 hours ago

ರಾಜಕೀಯ ಮತ್ತು ಸಾಂಸ್ಕೃತಿಕ ಜನಜೀವನದಲ್ಲಿ ಅತಿಮುಖ್ಯ ಪಾತ್ರವಹಿಸಿದ ಕೆಲವೇ ಪ್ರಮುಖರಲ್ಲಿ ಲಂಕೇಶ್ ಒಬ್ಬರು

ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…

8 hours ago

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

21 hours ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

21 hours ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

24 hours ago