ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಡ್ರಗ್ಸ್, ಆಭರಣ, ಲ್ಯಾಪ್ ಟಾಪ್, ವಿದೇಶಿ ವಾಚ್ ಜಪ್ತಿ..!

ಬೆಂಗಳೂರು ನಗರ ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿ ತಂಡವು ಮಾದಕವಸ್ತು ಮಾರಾಟಗಾರರನ್ನು ಬಂಧಿಸಿರುವ ಬಗ್ಗೆ ತಿಳಿಸಿದರು. ಅದರ ಭಾಗವಾಗಿ ಕಾರ್ಯಾಚರಣೆಯನ್ನು ಕೈಗೊಂಡು, ಮೂರು ವಿದೇಶಿ ಮೂಲದ ಡ್ರಗ್ ಪೆಡ್ಲರ್‌ಗಳು ಹಾಗೂ ಹೊರ ರಾಜ್ಯದ 03 ಡ್ರಗ್ ಪೆಡ್ಲರ್‌ಗಳು ಸೇರಿದಂತೆ ಒಟ್ಟು 06 ಜನರನ್ನು ವಶಕ್ಕೆ ಪಡೆದುಕೊಳ್ಳಲಾಗಿರುತ್ತದೆ. ಅವರಿಂದ ಒಟ್ಟು ₹ 44 ಲಕ್ಷ ಮೌಲ್ಯದ 54 ಗ್ರಾಂ, ಎಂ.ಡಿ.ಎಂ.ಎ ಕ್ರಿಸ್ಟೆಲ್, 410 ಗ್ರಾಂ. ಹೈಡ್ರೋ ಗಾಂಜಾ. 18 ಕೆಜಿ. ಗಾಂಜಾ ಹಾಗೂ ಕೃತ್ಯಕ್ಕೆ ಬಳಸಲಾಗುತ್ತಿದ್ದ 4 ಮೊಬೈಲ್ ಫೋನ್‌ಗಳು ಹಾಗೂ 4 ಎಲೆಕ್ಟ್ರಾನಿಕ್ ವಸ್ತುಗಳನ್ನ ವಶಪಡಿಸಿಕೊಳ್ಳಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್ ಅವರು ತಿಳಿಸಿದರು.

ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯ ಪೊಲೀಸರು ಲ್ಯಾಪ್ ಟಾಪ್ ಮತ್ತು ಕ್ರೋಮ್ ಬಾಕ್ಸ್‌ಗಳು ಕಳ್ಳತನದ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆ.16 ರಂದು ಐದು ವ್ಯಕ್ತಿಗಳನ್ನು ಬಂದಿಸಿದ್ದಾರೆ. ಈ ಪೈಕಿ ಇಬ್ಬರು ವ್ಯಕ್ತಿಗಳು ಅದೇ ಕಂಪನಿಯಲ್ಲಿ ಲ್ಯಾಪ್‌ ಟಾಪ್ ಟೆಕ್ನಿಷಿಯನ್ ಆಗಿ ಕೆಲಸ ಮಾಡಿಕೊಂಡಿದ್ದು, ಉಳಿದ ಮೂರು ವ್ಯಕ್ತಿಗಳು ಇವರ ಸಹಚರರಾಗಿರುತ್ತಾರೆಂದು ತಿಳಿದುಬಂದಿದೆ. ಒಟ್ಟು ₹16,00,000/- ಮೌಲ್ಯದ ವಿವಿಧ ಕಂಪನಿಯ 29  ಲ್ಯಾಪ್ ಟಾಪ್ ಗಳು ಮತ್ತು 59 ಕ್ರೋಮ್ ಬಾಕ್ಸ್ ಗಳನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ  ಪೊಲೀಸ್‌ ಅಧಿಕಾರಿಗಳು ಯಶಸ್ವಿಯಾಗಿರುತ್ತಾರೆ ಎಂದು ಮಾಹಿತಿ‌ ನೀಡಿದರು.

ಬೆಂಗಳೂರಿನ ಜೆ.ಪಿ ನಗರ ಪೊಲೀಸ್ ಠಾಣೆಯಲ್ಲಿ ಮಾ.9ರಂದು ಎರಡು ಪ್ರತ್ಯೇಕ ಮನೆ ದರೋಡೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೂವರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅವರಿಂದ 414 ಗ್ರಾಂ ಚಿನ್ನದ ವಡವೆಗಳನ್ನು ಮತ್ತು 104 ಗ್ರಾಂ ತೂಕದ ಬೆಳ್ಳಿ ವಸ್ತುಗಳನ್ನು ಹಾಗೂ 04 ವಿದೇಶಿ ಬ್ರಾಂಡ್‌ನ ವಾಚ್ ಗಳನ್ನು ವಶಪಡಿಸಿಕೊಂಡಿರುತ್ತಾರೆ. ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ ₹ 28,00.000/- ಆಗಿರುತ್ತದೆ ಎಂದರು.

Ramesh Babu

Journalist

Recent Posts

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

3 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

3 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

11 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

22 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago