ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಅಪ್ಪೇಗೌಡನಹಳ್ಳಿ ಗ್ರಾಮದ ಲೋಹಿತ್ ಹಾಗೂ ವತ್ಸಲ ಎಂಬ ಯುವ ದಂಪತಿ ಜೀವನದಲ್ಲಿ ಏನಾದರೂ ಒಂದು ಸಾಧನೆ ಮಾಡಬೇಕು ಎಂಬ ಹಂಬಲದಿಂದ ಬೆಂಗಳೂರು ಬಿಟ್ಟು ಹಳ್ಳಿಗೆ ಬಂದು ವಿನೂತನ ಪ್ರಯೋಗಕ್ಕೆ ಮುಂದಾಗಿ ಸೈ ಎನಿಸಿಕೊಂಡಿದ್ದಾರೆ. ಇಷ್ಟಕ್ಕೂ ಅದೇನಪ್ಪಾ ಅಂತೀರಾ… ಈ ಸ್ಟೋರಿ ಓದಿ…!
ಹೌದು, ಅಪ್ಪೇಗೌಡನಹಳ್ಳಿ ಗ್ರಾಮದ ಲೋಹಿತ್ ಹಾಗೂ ವತ್ಸಲ ಎಂಬ ಯುವ ರೈತರು ಬಿಳಿ ಸಾಸಿವೆ ಬೆಳೆದು ಇದೀಗ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕೇವಲ ಬಿಳಿ ಸಾಸಿವೆ ಮಾತ್ರವಲ್ಲದೇ ವಿವಿಧ ರೀತಿಯ ಹಣ್ಣಿನ ಗಿಡಗಳು, ತೆಂಗು, ಕುರಿ ಸಾಕಾಣಿಕೆ, ಕೋಳಿ ಸಾಕಾಣಿಕೆ ಸೇರಿದಂತೆ ಇನ್ನೂ ಅನೇಕ ರೀತಿಯ ನೂತನ ಕೃಷಿಗಾರಿಕೆಗೆ ಮುಂದಾಗಿದ್ದು ಸುತ್ತಮುತ್ತಲ ರೈತರು ಇವರ ವಿನೂತನ ಪ್ರಯೋಗಕ್ಕೆ ಫಿದಾ ಆಗಿದ್ದಾರೆ.
ಇನ್ನೂ, ಈ ಬಗ್ಗೆ ಮಾತನಾಡಿದ ರೈತ ಮಹಿಳೆ ವತ್ಸಲಾ, ನಾವು ನಮ್ಮ ಸ್ನೇಹಿತರೊಬ್ಬರಿಂದ ಬಿಳಿ ಸಾಸಿವೆ ಬಿತ್ತನೆ ತರಿಸಿಕೊಂಡು ನಾಟಿ ಮಾಡಿದೆವು. ನಮಗೆ ಇದು ಇಷ್ಟರ ಮಟ್ಟಿಗೆ ಯಶಸ್ಸು ತಂದುಕೊಡುತ್ತದೆ ಎಂದುಕೊಂಡಿರಲಿಲ್ಲ. ನಮ್ಮ ಊಹೆಗೂ ಮೀರಿ ಫಸಲು ಬಂದಿದೆ. ಕೇವಲ ಬಿಳಿ ಸಾಸಿವೆ ಮಾತ್ರವಲ್ಲ ನಾವು ವಿವಿಧ ತಳಿಯ ಹಣ್ಣಿನ ಗಿಡಗಳನ್ನು ಸಹ ನಾಟಿ ಮಾಡಿದ್ದೇವೆ ಎಂದು ತಿಳಿಸಿದರು.
ಒಟ್ಟಾರೆ ಈ ಯುವ ದಂಪತಿಗಳ ವಿನೂತನ ಪ್ರಯತ್ನಕ್ಕೆ ಮತ್ತಷ್ಟು ಯಶಸ್ಸು ಸಿಗಲಿ, ಮುಂದಿನ ಪೀಳಿಗೆಗೆ ಇವರ ವ್ಯವಸಾಯದ ವಿಧಾನ ಮಾದರಿಯಾಗಲಿ ಎಂಬುದು ನಮ್ಮ ಆಶಯ…….
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…
ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…
ಪೊಲೀಸ್ ಇಲಾಖೆಯಲ್ಲಿ 1000 ಸಬ್ ಇನ್ಸ್ಪೆಕ್ಟರ್ ಹಾಗೂ 8000 ಕಾನ್ಸ್ಟೇಬಲ್ ಗಳನ್ನು ಆದಷ್ಟು ಶೀಘ್ರ ನೇಮಕ ಮಾಡಲಾಗುವುದು ಎಂದು…
ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…
2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…
ಯುವಕರು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ವೈಯಕ್ತಿಕ ಬೆಳವಣಿಗೆಗೆ ಮಾತ್ರವಲ್ಲದೆ, ಆರೋಗ್ಯಕರ ಮತ್ತು ಸಮೃದ್ಧ ಸಮಾಜದ ನಿರ್ಮಾಣಕ್ಕೂ ಅತ್ಯಗತ್ಯವಾಗಿದೆ ಎಂದು ಹೈಕೋರ್ಟ್…