ಬೆಂಗಳೂರು ಬಿಟ್ಟು ಹಳ್ಳಿಗೆ ಬಂದು ಬಿಳಿ ಸಾಸಿವೆ ಬೆಳೆದು ಸೈ ಎನಿಸಿಕೊಂಡ ಯುವ ರೈತ ದಂಪತಿ..!

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಅಪ್ಪೇಗೌಡನಹಳ್ಳಿ ಗ್ರಾಮದ ಲೋಹಿತ್ ಹಾಗೂ ವತ್ಸಲ ಎಂಬ ಯುವ ದಂಪತಿ ಜೀವನದಲ್ಲಿ ಏನಾದರೂ ಒಂದು ಸಾಧನೆ ಮಾಡಬೇಕು ಎಂಬ ಹಂಬಲದಿಂದ ಬೆಂಗಳೂರು ಬಿಟ್ಟು ಹಳ್ಳಿಗೆ ಬಂದು ವಿನೂತನ ಪ್ರಯೋಗಕ್ಕೆ ಮುಂದಾಗಿ ಸೈ ಎನಿಸಿಕೊಂಡಿದ್ದಾರೆ. ಇಷ್ಟಕ್ಕೂ ಅದೇನಪ್ಪಾ ಅಂತೀರಾ… ಈ ಸ್ಟೋರಿ ಓದಿ…!

ಹೌದು, ಅಪ್ಪೇಗೌಡನಹಳ್ಳಿ ಗ್ರಾಮದ ಲೋಹಿತ್ ಹಾಗೂ ವತ್ಸಲ ಎಂಬ ಯುವ ರೈತರು ಬಿಳಿ ಸಾಸಿವೆ ಬೆಳೆದು ಇದೀಗ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕೇವಲ ಬಿಳಿ ಸಾಸಿವೆ ಮಾತ್ರವಲ್ಲದೇ ವಿವಿಧ ರೀತಿಯ ಹಣ್ಣಿನ ಗಿಡಗಳು, ತೆಂಗು, ಕುರಿ ಸಾಕಾಣಿಕೆ, ಕೋಳಿ ಸಾಕಾಣಿಕೆ ಸೇರಿದಂತೆ ಇನ್ನೂ ಅನೇಕ ರೀತಿಯ ನೂತನ ಕೃಷಿಗಾರಿಕೆಗೆ ಮುಂದಾಗಿದ್ದು ಸುತ್ತಮುತ್ತಲ ರೈತರು ಇವರ ವಿನೂತನ ಪ್ರಯೋಗಕ್ಕೆ ಫಿದಾ ಆಗಿದ್ದಾರೆ.

ಇನ್ನೂ, ಈ ಬಗ್ಗೆ ಮಾತನಾಡಿದ ರೈತ ಮಹಿಳೆ ವತ್ಸಲಾ, ನಾವು ನಮ್ಮ ಸ್ನೇಹಿತರೊಬ್ಬರಿಂದ ಬಿಳಿ ಸಾಸಿವೆ ಬಿತ್ತನೆ ತರಿಸಿಕೊಂಡು ನಾಟಿ ಮಾಡಿದೆವು. ನಮಗೆ ಇದು ಇಷ್ಟರ ಮಟ್ಟಿಗೆ ಯಶಸ್ಸು ತಂದುಕೊಡುತ್ತದೆ ಎಂದುಕೊಂಡಿರಲಿಲ್ಲ. ನಮ್ಮ ಊಹೆಗೂ ಮೀರಿ ಫಸಲು ಬಂದಿದೆ. ಕೇವಲ ಬಿಳಿ ಸಾಸಿವೆ ಮಾತ್ರವಲ್ಲ ನಾವು ವಿವಿಧ ತಳಿಯ ಹಣ್ಣಿನ ಗಿಡಗಳನ್ನು ಸಹ ನಾಟಿ ಮಾಡಿದ್ದೇವೆ ಎಂದು ತಿಳಿಸಿದರು.

ಒಟ್ಟಾರೆ ಈ ಯುವ ದಂಪತಿಗಳ ವಿನೂತನ ಪ್ರಯತ್ನಕ್ಕೆ ಮತ್ತಷ್ಟು ಯಶಸ್ಸು ಸಿಗಲಿ, ಮುಂದಿನ ಪೀಳಿಗೆಗೆ ಇವರ ವ್ಯವಸಾಯದ ವಿಧಾನ ಮಾದರಿಯಾಗಲಿ ಎಂಬುದು ನಮ್ಮ ಆಶಯ…….

Ramesh Babu

Journalist

Recent Posts

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಭ್ರಷ್ಟ ಗ್ರಾಮ ಆಡಳಿತಾಧಿಕಾರಿ

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…

6 minutes ago

ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…

2 hours ago

ವಾರದೊಳಗೆ ಸಹಜ ಸ್ಥಿತಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…

3 hours ago

“ಗೃಹಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನು ಕ್ರಮ”

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…

3 hours ago

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಏನಂದ್ರು ಗೊತ್ತಾ….?

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…

5 hours ago

ಅಬಕಾರಿ ಡಿಸಿ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣ : ಅಕ್ರಮ ಆಸ್ತಿ ಕಂಡು ಬೆಚ್ಚಿದ ಅಧಿಕಾರಿಗಳು.!

ಉಡುಪಿ : ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ…

8 hours ago