ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಅಪ್ಪೇಗೌಡನಹಳ್ಳಿ ಗ್ರಾಮದ ಲೋಹಿತ್ ಹಾಗೂ ವತ್ಸಲ ಎಂಬ ಯುವ ದಂಪತಿ ಜೀವನದಲ್ಲಿ ಏನಾದರೂ ಒಂದು ಸಾಧನೆ ಮಾಡಬೇಕು ಎಂಬ ಹಂಬಲದಿಂದ ಬೆಂಗಳೂರು ಬಿಟ್ಟು ಹಳ್ಳಿಗೆ ಬಂದು ವಿನೂತನ ಪ್ರಯೋಗಕ್ಕೆ ಮುಂದಾಗಿ ಸೈ ಎನಿಸಿಕೊಂಡಿದ್ದಾರೆ. ಇಷ್ಟಕ್ಕೂ ಅದೇನಪ್ಪಾ ಅಂತೀರಾ… ಈ ಸ್ಟೋರಿ ಓದಿ…!
ಹೌದು, ಅಪ್ಪೇಗೌಡನಹಳ್ಳಿ ಗ್ರಾಮದ ಲೋಹಿತ್ ಹಾಗೂ ವತ್ಸಲ ಎಂಬ ಯುವ ರೈತರು ಬಿಳಿ ಸಾಸಿವೆ ಬೆಳೆದು ಇದೀಗ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕೇವಲ ಬಿಳಿ ಸಾಸಿವೆ ಮಾತ್ರವಲ್ಲದೇ ವಿವಿಧ ರೀತಿಯ ಹಣ್ಣಿನ ಗಿಡಗಳು, ತೆಂಗು, ಕುರಿ ಸಾಕಾಣಿಕೆ, ಕೋಳಿ ಸಾಕಾಣಿಕೆ ಸೇರಿದಂತೆ ಇನ್ನೂ ಅನೇಕ ರೀತಿಯ ನೂತನ ಕೃಷಿಗಾರಿಕೆಗೆ ಮುಂದಾಗಿದ್ದು ಸುತ್ತಮುತ್ತಲ ರೈತರು ಇವರ ವಿನೂತನ ಪ್ರಯೋಗಕ್ಕೆ ಫಿದಾ ಆಗಿದ್ದಾರೆ.
ಇನ್ನೂ, ಈ ಬಗ್ಗೆ ಮಾತನಾಡಿದ ರೈತ ಮಹಿಳೆ ವತ್ಸಲಾ, ನಾವು ನಮ್ಮ ಸ್ನೇಹಿತರೊಬ್ಬರಿಂದ ಬಿಳಿ ಸಾಸಿವೆ ಬಿತ್ತನೆ ತರಿಸಿಕೊಂಡು ನಾಟಿ ಮಾಡಿದೆವು. ನಮಗೆ ಇದು ಇಷ್ಟರ ಮಟ್ಟಿಗೆ ಯಶಸ್ಸು ತಂದುಕೊಡುತ್ತದೆ ಎಂದುಕೊಂಡಿರಲಿಲ್ಲ. ನಮ್ಮ ಊಹೆಗೂ ಮೀರಿ ಫಸಲು ಬಂದಿದೆ. ಕೇವಲ ಬಿಳಿ ಸಾಸಿವೆ ಮಾತ್ರವಲ್ಲ ನಾವು ವಿವಿಧ ತಳಿಯ ಹಣ್ಣಿನ ಗಿಡಗಳನ್ನು ಸಹ ನಾಟಿ ಮಾಡಿದ್ದೇವೆ ಎಂದು ತಿಳಿಸಿದರು.
ಒಟ್ಟಾರೆ ಈ ಯುವ ದಂಪತಿಗಳ ವಿನೂತನ ಪ್ರಯತ್ನಕ್ಕೆ ಮತ್ತಷ್ಟು ಯಶಸ್ಸು ಸಿಗಲಿ, ಮುಂದಿನ ಪೀಳಿಗೆಗೆ ಇವರ ವ್ಯವಸಾಯದ ವಿಧಾನ ಮಾದರಿಯಾಗಲಿ ಎಂಬುದು ನಮ್ಮ ಆಶಯ…….
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…