ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಅಪ್ಪೇಗೌಡನಹಳ್ಳಿ ಗ್ರಾಮದ ಲೋಹಿತ್ ಹಾಗೂ ವತ್ಸಲ ಎಂಬ ಯುವ ದಂಪತಿ ಜೀವನದಲ್ಲಿ ಏನಾದರೂ ಒಂದು ಸಾಧನೆ ಮಾಡಬೇಕು ಎಂಬ ಹಂಬಲದಿಂದ ಬೆಂಗಳೂರು ಬಿಟ್ಟು ಹಳ್ಳಿಗೆ ಬಂದು ವಿನೂತನ ಪ್ರಯೋಗಕ್ಕೆ ಮುಂದಾಗಿ ಸೈ ಎನಿಸಿಕೊಂಡಿದ್ದಾರೆ. ಇಷ್ಟಕ್ಕೂ ಅದೇನಪ್ಪಾ ಅಂತೀರಾ… ಈ ಸ್ಟೋರಿ ಓದಿ…!
ಹೌದು, ಅಪ್ಪೇಗೌಡನಹಳ್ಳಿ ಗ್ರಾಮದ ಲೋಹಿತ್ ಹಾಗೂ ವತ್ಸಲ ಎಂಬ ಯುವ ರೈತರು ಬಿಳಿ ಸಾಸಿವೆ ಬೆಳೆದು ಇದೀಗ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕೇವಲ ಬಿಳಿ ಸಾಸಿವೆ ಮಾತ್ರವಲ್ಲದೇ ವಿವಿಧ ರೀತಿಯ ಹಣ್ಣಿನ ಗಿಡಗಳು, ತೆಂಗು, ಕುರಿ ಸಾಕಾಣಿಕೆ, ಕೋಳಿ ಸಾಕಾಣಿಕೆ ಸೇರಿದಂತೆ ಇನ್ನೂ ಅನೇಕ ರೀತಿಯ ನೂತನ ಕೃಷಿಗಾರಿಕೆಗೆ ಮುಂದಾಗಿದ್ದು ಸುತ್ತಮುತ್ತಲ ರೈತರು ಇವರ ವಿನೂತನ ಪ್ರಯೋಗಕ್ಕೆ ಫಿದಾ ಆಗಿದ್ದಾರೆ.
ಇನ್ನೂ, ಈ ಬಗ್ಗೆ ಮಾತನಾಡಿದ ರೈತ ಮಹಿಳೆ ವತ್ಸಲಾ, ನಾವು ನಮ್ಮ ಸ್ನೇಹಿತರೊಬ್ಬರಿಂದ ಬಿಳಿ ಸಾಸಿವೆ ಬಿತ್ತನೆ ತರಿಸಿಕೊಂಡು ನಾಟಿ ಮಾಡಿದೆವು. ನಮಗೆ ಇದು ಇಷ್ಟರ ಮಟ್ಟಿಗೆ ಯಶಸ್ಸು ತಂದುಕೊಡುತ್ತದೆ ಎಂದುಕೊಂಡಿರಲಿಲ್ಲ. ನಮ್ಮ ಊಹೆಗೂ ಮೀರಿ ಫಸಲು ಬಂದಿದೆ. ಕೇವಲ ಬಿಳಿ ಸಾಸಿವೆ ಮಾತ್ರವಲ್ಲ ನಾವು ವಿವಿಧ ತಳಿಯ ಹಣ್ಣಿನ ಗಿಡಗಳನ್ನು ಸಹ ನಾಟಿ ಮಾಡಿದ್ದೇವೆ ಎಂದು ತಿಳಿಸಿದರು.
ಒಟ್ಟಾರೆ ಈ ಯುವ ದಂಪತಿಗಳ ವಿನೂತನ ಪ್ರಯತ್ನಕ್ಕೆ ಮತ್ತಷ್ಟು ಯಶಸ್ಸು ಸಿಗಲಿ, ಮುಂದಿನ ಪೀಳಿಗೆಗೆ ಇವರ ವ್ಯವಸಾಯದ ವಿಧಾನ ಮಾದರಿಯಾಗಲಿ ಎಂಬುದು ನಮ್ಮ ಆಶಯ…….
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…