ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಅಪ್ಪೇಗೌಡನಹಳ್ಳಿ ಗ್ರಾಮದ ಲೋಹಿತ್ ಹಾಗೂ ವತ್ಸಲ ಎಂಬ ಯುವ ದಂಪತಿ ಜೀವನದಲ್ಲಿ ಏನಾದರೂ ಒಂದು ಸಾಧನೆ ಮಾಡಬೇಕು ಎಂಬ ಹಂಬಲದಿಂದ ಬೆಂಗಳೂರು ಬಿಟ್ಟು ಹಳ್ಳಿಗೆ ಬಂದು ವಿನೂತನ ಪ್ರಯೋಗಕ್ಕೆ ಮುಂದಾಗಿ ಸೈ ಎನಿಸಿಕೊಂಡಿದ್ದಾರೆ. ಇಷ್ಟಕ್ಕೂ ಅದೇನಪ್ಪಾ ಅಂತೀರಾ… ಈ ಸ್ಟೋರಿ ಓದಿ…!
ಹೌದು, ಅಪ್ಪೇಗೌಡನಹಳ್ಳಿ ಗ್ರಾಮದ ಲೋಹಿತ್ ಹಾಗೂ ವತ್ಸಲ ಎಂಬ ಯುವ ರೈತರು ಬಿಳಿ ಸಾಸಿವೆ ಬೆಳೆದು ಇದೀಗ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕೇವಲ ಬಿಳಿ ಸಾಸಿವೆ ಮಾತ್ರವಲ್ಲದೇ ವಿವಿಧ ರೀತಿಯ ಹಣ್ಣಿನ ಗಿಡಗಳು, ತೆಂಗು, ಕುರಿ ಸಾಕಾಣಿಕೆ, ಕೋಳಿ ಸಾಕಾಣಿಕೆ ಸೇರಿದಂತೆ ಇನ್ನೂ ಅನೇಕ ರೀತಿಯ ನೂತನ ಕೃಷಿಗಾರಿಕೆಗೆ ಮುಂದಾಗಿದ್ದು ಸುತ್ತಮುತ್ತಲ ರೈತರು ಇವರ ವಿನೂತನ ಪ್ರಯೋಗಕ್ಕೆ ಫಿದಾ ಆಗಿದ್ದಾರೆ.
ಇನ್ನೂ, ಈ ಬಗ್ಗೆ ಮಾತನಾಡಿದ ರೈತ ಮಹಿಳೆ ವತ್ಸಲಾ, ನಾವು ನಮ್ಮ ಸ್ನೇಹಿತರೊಬ್ಬರಿಂದ ಬಿಳಿ ಸಾಸಿವೆ ಬಿತ್ತನೆ ತರಿಸಿಕೊಂಡು ನಾಟಿ ಮಾಡಿದೆವು. ನಮಗೆ ಇದು ಇಷ್ಟರ ಮಟ್ಟಿಗೆ ಯಶಸ್ಸು ತಂದುಕೊಡುತ್ತದೆ ಎಂದುಕೊಂಡಿರಲಿಲ್ಲ. ನಮ್ಮ ಊಹೆಗೂ ಮೀರಿ ಫಸಲು ಬಂದಿದೆ. ಕೇವಲ ಬಿಳಿ ಸಾಸಿವೆ ಮಾತ್ರವಲ್ಲ ನಾವು ವಿವಿಧ ತಳಿಯ ಹಣ್ಣಿನ ಗಿಡಗಳನ್ನು ಸಹ ನಾಟಿ ಮಾಡಿದ್ದೇವೆ ಎಂದು ತಿಳಿಸಿದರು.
ಒಟ್ಟಾರೆ ಈ ಯುವ ದಂಪತಿಗಳ ವಿನೂತನ ಪ್ರಯತ್ನಕ್ಕೆ ಮತ್ತಷ್ಟು ಯಶಸ್ಸು ಸಿಗಲಿ, ಮುಂದಿನ ಪೀಳಿಗೆಗೆ ಇವರ ವ್ಯವಸಾಯದ ವಿಧಾನ ಮಾದರಿಯಾಗಲಿ ಎಂಬುದು ನಮ್ಮ ಆಶಯ…….
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…