ಬೆಂಗಳೂರು ಮೆಟ್ರೊ ರೈಲಿನ ಪ್ರಯಾಣ ದರ ಹೆಚ್ಚಳಕ್ಕೆ ವಿರೋಧ ವ್ಯಕ್ತ ವಿಚಾರ: ಜ‌ನರಿಗೆ ವಾಸ್ತವಾಂಶ ತಿಳಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು ಮೆಟ್ರೊ ರೈಲಿನ ಪ್ರಯಾಣ ದರ ಹೆಚ್ಚಳಕ್ಕೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ವಾಸ್ತವಾಂಶಗಳನ್ನು ಬೆಂಗಳೂರು ಜನತೆಯ ಮುಂದಿಡಲು ಬಯಸುತ್ತೇನೆ.

ಮೆಟ್ರೋ ಪ್ರಯಾಣ ದರ ಹೆಚ್ಚಳವನ್ನು ವಿರೋಧಿಸುತ್ತಿರುವ ವಿರೋಧ ಪಕ್ಷವಾದ ಬಿಜೆಪಿಯ ನಾಯಕರು ಯಥಾಪ್ರಕಾರ ಸುಳ್ಳು ಮತ್ತು ತಿರುಚಿದ ಮಾಹಿತಿಯನ್ನು ಬಳಸಿಕೊಂಡು ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡಿ ಸಾರ್ವಜನಿಕರ ಹಾದಿ ತಪ್ಪಿಸುತ್ತಿದ್ದಾರೆ. ಸರ್ಕಾರದ ಯಾವುದೇ ನೀತಿ-ನಿರ್ಧಾರಗಳನ್ನು ವಿರೋಧಿಸುವ ಅಧಿಕಾರ ಸಾರ್ವಜನಿಕರಿಗೆ ಇದೆ, ಸಂವಿಧಾನಬದ್ಧವಾದ ಅವರ ಹಕ್ಕನ್ನು ನಾನು ಗೌರವಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಆದರೆ ವಿರೋಧ ಪಕ್ಷದ ಸ‍್ಥಾನದಲ್ಲಿ ಜನ ಕೂರಿಸಿರುವ ರಾಜ್ಯದ ಬಿಜೆಪಿ ರಾಜಕೀಯ ದುರುದ್ದೇಶದಿಂದ ಸುಳ್ಳು ಮಾಹಿತಿಗಳನ್ನು ನೀಡಿ ಸಾರ್ವಜನಿಕರ ಪ್ರತಿಭಟನೆಗೆ ಕುಮ್ಮಕ್ಕು ನೀಡುತ್ತಿರುವುದು ಅಕ್ಷಮ್ಯ. ಒಂದೆಡೆ ಮೆಟ್ರೋ ರೈಲು ನಿರ್ಮಾಣದ ಸಾಧನೆ ಕೇಂದ್ರದ ಬಿಜೆಪಿ ಸರ್ಕಾರದ್ದು ಎಂದು ಡಂಗುರ ಬಾರಿಸುತ್ತಿರುವ ಬಿಜೆಪಿ ನಾಯಕರು ದರ ಪರಿಷ್ಕರಣೆ ವಿರುದ್ದ ಜನಾಕ್ರೋಶ ವ್ಯಕ್ತವಾಗುತ್ತಿರುವುದನ್ನು ಕಂಡು ಅದರ ಜವಾಬ್ದಾರಿಯನ್ನು ರಾಜ್ಯ ಸರ್ಕಾರದ ಮೇಲೆ ಹೊರಿಸುತ್ತಿರುವುದು ಆತ್ಮವಂಚಕ ನಡವಳಿಕೆಯಾಗಿದೆ ಎಂದರು.

ಕೇಂದ್ರ ಮತ್ತು ಕರ್ನಾಟಕ ಸರ್ಕಾರ ಜೊತೆಗೂಡಿ ಬೆಂಗಳೂರು ಮೆಟ್ರೊ ರೈಲು ನಿಗಮವನ್ನು ಸ್ಥಾಪಿಸಿದ್ದು, ಇದರಲ್ಲಿ ಎರಡೂ ಸರ್ಕಾರಗಳ ಸಮ (50:50) ಪಾಲುದಾರಿಕೆ ಇದೆ. ಕೇಂದ್ರ ನಗರ ಮತ್ತು ವಸತಿ ವ್ಯವಹಾರ ಇಲಾಖೆಯ ಕಾರ್ಯದರ್ಶಿಯಾಗಿರುವ ಶ್ರೀನಿವಾಸ ಕಟಿಕಿಥಲ ಅವರು ನಿಗಮದ ಈಗಿನ ಅಧ್ಯಕ್ಷರು. ವ್ಯವಸ್ಥಾಪಕ ನಿರ್ದೇಶಕ ಮತ್ತು ನಿರ್ದೇಶಕರ ಸ‍್ಥಾನದಲ್ಲಿ ಕೇಂದ್ರ ಮತ್ತು ರಾಜ್ಯದ ಅಧಿಕಾರಿಗಳಿದ್ದಾರೆ ಎಂದು ಹೇಳಿದ್ದಾರೆ.

ಇದೊಂದು ಸ್ವಾಯತ್ತ ಸಂಸ್ಥೆಯಾಗಿದ್ದು ಇದರ ಮೇಲೆ ರಾಜ್ಯ ಸರ್ಕಾರಕ್ಕೆ ಪೂರ್ಣ ನಿಯಂತ್ರಣಾಧಿಕಾರ ಇಲ್ಲ. ಉಳಿದೆಲ್ಲ ನಗರಗಳ ಮೆಟ್ರೋ ರೈಲು ನಿಗಮಗಳಂತೆ ಬೆಂಗಳೂರು ಮೆಟ್ರೊ ರೈಲು ನಿಗಮ ಕೂಡಾ ಕೇಂದ್ರ ಸರ್ಕಾರದ ಮೆಟ್ರೋ ರೈಲು (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯ್ದೆ 2002ರ ಅಡಿಯಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ ಎಂದರು.

2017ರ ನಂತರ ಮೆಟ್ರೊ ರೈಲಿನ ಪ್ರಯಾಣ ದರ ಪರಿಷ್ಕರಣೆ ಮಾಡದೆ ಇರುವ ಕಾರಣ ದರ ಪರಿಷ್ಕರಣೆ ನಡೆಸುವಂತೆ ಬಿಎಂಆರ್‌ಸಿಎಲ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿತ್ತು. ಪ್ರಯಾಣ ದರ ಹೆಚ್ಚಳದ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲೇ ಇದ್ದಿದ್ದರೆ ಬಿಎಂಆರ್‌ಸಿಎಲ್ ನಮಗೆ ಪತ್ರ ಬರೆಯದೆ, ಕೇಂದ್ರ ಸರ್ಕಾರಕ್ಕೆ ಯಾಕೆ ಪತ್ರ ಬರೆಯುತ್ತಿತ್ತು? ಎಂದು ಪ್ರಶ್ನೆ ಮಾಡಿದ್ದಾರೆ ಎಂದರು.

ಬಿಎಂಆರ್‌ಸಿಎಲ್ ಪತ್ರಕ್ಕೆ ಪ್ರತಿಕ್ರಿಯಿಸಿದ್ದ ಕೇಂದ್ರ ಸರ್ಕಾರ ಮದ್ರಾಸ್ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಆರ್ ಥರಾನಿ ಅವರ ಅಧ್ಯಕ್ಷತೆಯಲ್ಲಿ ದರ ಪರಿಷ್ಕರಣಾ ಸಮಿತಿ ರಚಿಸಿತ್ತು, ಈ ಸಮಿತಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಪ್ರತಿನಿಧಿಗಳು ಸದಸ್ಯರಾಗಿದ್ದರು. 2024ರ ಸೆಪ್ಟೆಂಬರ್ 16ರಂದು ಅಧಿಕಾರ ಸ್ವೀಕರಿಸಿದ ಈ ಸಮಿತಿಗೆ ಮೂರು ತಿಂಗಳೊಳಗೆ ತನ್ನ ಶಿಫಾರಸನ್ನು ಸಲ್ಲಿಸಬೇಕೆಂದು ಕೇಂದ್ರ ಸರ್ಕಾರ ಪತ್ರದಲ್ಲಿ ತಿಳಿಸಿತ್ತು ಎಂದು ತಿಳಿಸಿದರು.

ಮೂರು ತಿಂಗಳ ಅವಧಿಯಲ್ಲಿ ದರ ಪರಿಷ್ಕರಣ ಸಮಿತಿ ಬಿಎಂಆರ್‌ಸಿಎಲ್ ಅಧಿಕಾರಿಗಳ ಜೊತೆ ಮಾತ್ರವಲ್ಲ ದೆಹಲಿ ಮತ್ತು ಚನ್ನೈಗಳಿಗೆ ತೆರಳಿ ಅಲ್ಲಿನ ಮೆಟ್ರೋ ಸಂಸ್ಥೆಗಳ ಅಧಿಕಾರಿಗಳ ಜೊತೆಯಲ್ಲಿ ಕೂಡಾ ಕಾರ್ಯಾಚರಣೆ ಮತ್ತು ಪ್ರಯಾಣ ದರದ ಬಗ್ಗೆ ಸಮಾಲೋಚನೆ ನಡೆಸಿತ್ತು ಎಂದರು.

2017ರ ಜೂನ್ ನಲ್ಲಿ ಬೆಂಗಳೂರು ಮೆಟ್ರೋ ರೈಲಿಗೆ ನಿಗದಿಗೊಳಿಸಿದ್ದ ಪ್ರಯಾಣದರ, ಮೆಟ್ರೋದಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರ ಅನುಭವಗಳನ್ನು ದರಪರಿಷ್ಕರಣ ಸಮಿತಿ ಕಲೆ ಹಾಕಿತ್ತು. ಇದರ ಜೊತೆಯಲ್ಲಿ ಬಿಎಂಆರ್‌ಸಿಎಲ್ ನ ಹಣಕಾಸು ಸಾಮರ್ಥ್ಯವನ್ನು ಕೂಡಾ ಸಮಿತಿ ಅಧ್ಯಯನ ಮಾಡಿ 2024ರ ಡಿಸೆಬರ್ 16ರಂದು ಸಮಿತಿ ತನ್ನ ವರದಿನ್ನು ಸಲ್ಲಿಸಿತ್ತು. 2017ರ ಜೂನ್ ತಿಂಗಳಲ್ಲಿ ಬಿಎಂಆರ್‌ಸಿಎಲ್ ಪ್ರಯಾಣ ದರ ನಿಗದಿಪಡಿಸಿದಾಗ ಮೆಟ್ರೋ ಪ್ರಥಮ ಹಂತದ 42.30 ಕಿ.ಮೀ ಮಾರ್ಗ ಮಾತ್ರ ಪೂರ್ಣಗೊಂಡಿತ್ತು. ಮೆಟ್ರೋ ಎರಡನೇ ಹಂತ ಭಾಗಶ: ಪೂರ್ಣಗೊಂಡ ನಂತರ ಈಗ ಮೆಟ್ರೋ ಮಾರ್ಗ 42.30 ಕಿ.ಮೀಟರ್ ಗೆ ವಿಸ್ತರಣೆ ಗೊಂಡಿದೆ. ಮೆಟ್ರೋ 2, 2ಎ, ಮತ್ತು 2ಬಿ ಮಾರ್ಗಗಳು (96.60 ಕಿ.ಮೀ.) 2026ರ ಡಿಸೆಂಬರ್ ತಿಂಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದ್ದು ಆಗ ಬೆಂಗಳೂರು ಮೆಟ್ರೋ ಮಾರ್ಗ 175,55 ಕಿ.ಮೀ.ಗೆ ವಿಸ್ತರಣೆಯಾಗಲಿದೆ ಎಂದೂ.

ಬೆಂಗಳೂರು ಮೆಟ್ರೋ ರೈಲಿಗೆ ಸಂಬಂಧಿಸಿದ ಈ ಎಲ್ಲ ಅಂಶಗಳನ್ನು ಗಮನಕ್ಕೆ ತೆಗೆದುಕೊಂಡು ಚರ್ಚೆ ನಡೆಸಿದ ನಂತರ ಹತ್ತು ಅಧ್ಯಾಯಗಳಲ್ಲಿ ತನ್ನ ವರದಿ ನೀಡಿದೆ. ಸಮಿತಿ ದೇಶದ ಉಳಿದ ಮೆಟ್ರೋ ರೈಲಿನ ಪ್ರಯಾಣದರವನ್ನು ಅಧ್ಯಯನ ಮಾಡಿದೆ. ಸದ್ಯ ಬೆಂಗಳೂರು ಮೆಟ್ರೋ ಪ್ರಯಾಣ ದರ ಕನಿಷ್ಠ ರೂ.10 ಮತ್ತು ಗರಿಷ್ಠ ರೂ.60 ಆಗಿದೆ. ಮುಂಬೈ ಮೆಟ್ರೋ ರೈಲಿನ ಕನಿಷ್ಠ ಪ್ರಯಾಣದರ ರೂ.10 ಮತ್ತು ಗರಿಷ್ಠ ಪ್ರಯಾಣ ದರ ರೂ.80 ಆಗಿದೆ ಎಂದು ಹೇಳಿದರು.

ದೆಹಲಿ ಮೆಟ್ರೋವನ್ನು ಹೊರತುಪಡಿಸಿ ಉಳಿದೆಲ್ಲ ರಾಜ್ಯಗಳಲ್ಲಿ ಮೊದಲ ಹಂತದ ಪ್ರಯಾಣದರವನ್ನು ಆಯಾ ರಾಜ್ಯಗಳ ಮೆಟ್ರೊ ನಿಗಮಗಳೇ ನಿಗದಿ ಪಡಿಸಿತ್ತು. ಈಗ ಪ್ರಯಾಣ ದರವನ್ನು ಕೇಂದ್ರ ಸರ್ಕಾರ ನೇಮಿಸುವ ಸಮಿತಿ ನಿಗದಿಪಡಿಸುತ್ತದೆ. ಮೆಟ್ರೋ ರೈಲ್ವೆ (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯಿದೆಯ ಸೆಕ್ಷನ್ 37ರ ಪ್ರಕಾರ ಪ್ರಯಾಣ ದರ ನಿಗದಿ ಸಮಿತಿ ನೀಡಿದ ವರದಿಯನ್ನು ಮೆಟ್ರೋ ರೈಲು ನಿಗಮಗಳು ( ಈ ಪ್ರಕರಣದಲ್ಲಿ ಬಿಎಂಆರ್ ಸಿಎಲ್ ) ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕಾಗಿದೆ ಎಂದರು.

Ramesh Babu

Journalist

Recent Posts

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

8 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

13 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

1 day ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

2 days ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

2 days ago