ಬೆಂಗಳೂರು ಲೋಕಾಯುಕ್ತ ನ್ಯಾಯಾಲಯಕ್ಕೆ ಸಾರ್ವಜನಿಕರು‌ ದೂರು: ಖುದ್ದು ಲೋಕಾಯುಕ್ತ ನ್ಯಾಯಾಧೀಶರೇ ಎಸಿ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ

ಬೆಂಗಳೂರು ಲೋಕಾಯುಕ್ತ ನ್ಯಾಯಾಲಯಕ್ಕೆ ಸಾರ್ವಜನಿಕರು‌ ದೂರು ನೀಡಿರುವ ಹಿನ್ನೆಲೆ ಖುದ್ದು ಲೋಕಾಯುಕ್ತ ನ್ಯಾಯಾಧೀಶರೇ ನಗರದಲ್ಲಿರುವ ಎಸಿ ಕಚೇರಿಯ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಗೆ ಆಗಮಿಸಿ ಪ್ರತಿಯೊಂದು ದಾಖಲೆಗಳನ್ನ ಪರಿಶೀಲನೆ‌ ನಡೆಸುತ್ತಿದ್ದಾರೆ.

ಸಾರ್ವಜನಿಕರ ದೂರು ಆಧರಿಸಿ ದೊಡ್ಡಬಳ್ಳಾಪುರ ಸೇರಿದ ರಾಜ್ಯದ 11 ಕಡೆ ಎಡಿಎಲ್ ಆರ್ ಹಾಗೂ ಡಿಡಿಎಲ್ ಆರ್ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಯಲಹಂಕ, ಕೆ.ಆರ್.ಪುರಂ, ದೊಡ್ಡಬಳ್ಳಾಪುರ ಸೇರಿ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ಜೊತೆಗೆ ಸಾರ್ವಜನಿಕರ ಅಹವಾಲನ್ನು ಸ್ವೀಕಾರ ‌ಮಾಡುತ್ತಿರುವ ಅಧಿಕಾರಿಗಳ ತಂಡ

ಈ ವೇಳೆ ಡೆಪ್ಯುಟಿ ರಿಜಿಸ್ಟರ್ ಅನಿತಾ, ಚಿಕ್ಕಬಳ್ಳಾಪುರ ಲೋಕಾಯುಕ್ತ ಎಸ್ಪಿ ಡಾ.ರಾಮ್ ಹರಸಿದ್ದಿ, ಲೋಕಾಯುಕ್ತ ಲೋಕಾಯುಕ್ತಾ ಡಿವೈಎಸ್ಪಿ ವೀರೇಂದ್ರ ಕುಮಾರ್ , ಇನ್ಸ್ ಪೆಕ್ಟರ್ ಸೇರಿದಂತೆ‌ ಸಿಬ್ಬಂದಿ ದಾಖಲೆಗಳ ಪರಿಶೀಲನೆ ನಡೆಸುವಲ್ಲಿ ನಿರತರಾಗಿದ್ದಾರೆ.

ಲೋಕಾಯುಕ್ತ ದಾಳಿ ವೇಳೆ ಸಾರ್ವಜನಿಕರೊಬ್ಬರು ಜೋರು ದನಿಯಲ್ಲಿ ಅಧಿಕಾರಿಗಳ ವಿಳಂಬ ನೀತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪೋಡಿ ದರಕಾಸ್ತು ಮಾಡಿಸಲು ಅರ್ಜಿ ನೀಡಿ ಎರಡು ವರ್ಷ ಕಳೆದರೂ ಅಧಿಕಾರಿಗಳು ಸ್ಪಂದಿಸಿಲ್ಲ‌ ಎಂದು ತರಾಟೆಗೆ ತೆಗೆದುಕೊಂಡರು. ಆಗ ಡಿವೈಎಸ್ಪಿ ವೀರೇಂದ್ರ ಅವರು ಆ ವ್ಯಕ್ತಿಯನ್ನು ಮನವೊಲಿಸಿ ದೂರು ವಿವರಿಸುವಂತೆ ಕೇಳಿ ಕರೆದೋಯ್ದರು.

Ramesh Babu

Journalist

Recent Posts

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

15 minutes ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

5 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

11 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

1 day ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

1 day ago