ಬೆಂಗಳೂರು ಲೋಕಾಯುಕ್ತ ನ್ಯಾಯಾಲಯಕ್ಕೆ ಸಾರ್ವಜನಿಕರು‌ ದೂರು: ಖುದ್ದು ಲೋಕಾಯುಕ್ತ ನ್ಯಾಯಾಧೀಶರೇ ಎಸಿ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ

ಬೆಂಗಳೂರು ಲೋಕಾಯುಕ್ತ ನ್ಯಾಯಾಲಯಕ್ಕೆ ಸಾರ್ವಜನಿಕರು‌ ದೂರು ನೀಡಿರುವ ಹಿನ್ನೆಲೆ ಖುದ್ದು ಲೋಕಾಯುಕ್ತ ನ್ಯಾಯಾಧೀಶರೇ ನಗರದಲ್ಲಿರುವ ಎಸಿ ಕಚೇರಿಯ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಗೆ ಆಗಮಿಸಿ ಪ್ರತಿಯೊಂದು ದಾಖಲೆಗಳನ್ನ ಪರಿಶೀಲನೆ‌ ನಡೆಸುತ್ತಿದ್ದಾರೆ.

ಸಾರ್ವಜನಿಕರ ದೂರು ಆಧರಿಸಿ ದೊಡ್ಡಬಳ್ಳಾಪುರ ಸೇರಿದ ರಾಜ್ಯದ 11 ಕಡೆ ಎಡಿಎಲ್ ಆರ್ ಹಾಗೂ ಡಿಡಿಎಲ್ ಆರ್ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಯಲಹಂಕ, ಕೆ.ಆರ್.ಪುರಂ, ದೊಡ್ಡಬಳ್ಳಾಪುರ ಸೇರಿ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ಜೊತೆಗೆ ಸಾರ್ವಜನಿಕರ ಅಹವಾಲನ್ನು ಸ್ವೀಕಾರ ‌ಮಾಡುತ್ತಿರುವ ಅಧಿಕಾರಿಗಳ ತಂಡ

ಈ ವೇಳೆ ಡೆಪ್ಯುಟಿ ರಿಜಿಸ್ಟರ್ ಅನಿತಾ, ಚಿಕ್ಕಬಳ್ಳಾಪುರ ಲೋಕಾಯುಕ್ತ ಎಸ್ಪಿ ಡಾ.ರಾಮ್ ಹರಸಿದ್ದಿ, ಲೋಕಾಯುಕ್ತ ಲೋಕಾಯುಕ್ತಾ ಡಿವೈಎಸ್ಪಿ ವೀರೇಂದ್ರ ಕುಮಾರ್ , ಇನ್ಸ್ ಪೆಕ್ಟರ್ ಸೇರಿದಂತೆ‌ ಸಿಬ್ಬಂದಿ ದಾಖಲೆಗಳ ಪರಿಶೀಲನೆ ನಡೆಸುವಲ್ಲಿ ನಿರತರಾಗಿದ್ದಾರೆ.

ಲೋಕಾಯುಕ್ತ ದಾಳಿ ವೇಳೆ ಸಾರ್ವಜನಿಕರೊಬ್ಬರು ಜೋರು ದನಿಯಲ್ಲಿ ಅಧಿಕಾರಿಗಳ ವಿಳಂಬ ನೀತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪೋಡಿ ದರಕಾಸ್ತು ಮಾಡಿಸಲು ಅರ್ಜಿ ನೀಡಿ ಎರಡು ವರ್ಷ ಕಳೆದರೂ ಅಧಿಕಾರಿಗಳು ಸ್ಪಂದಿಸಿಲ್ಲ‌ ಎಂದು ತರಾಟೆಗೆ ತೆಗೆದುಕೊಂಡರು. ಆಗ ಡಿವೈಎಸ್ಪಿ ವೀರೇಂದ್ರ ಅವರು ಆ ವ್ಯಕ್ತಿಯನ್ನು ಮನವೊಲಿಸಿ ದೂರು ವಿವರಿಸುವಂತೆ ಕೇಳಿ ಕರೆದೋಯ್ದರು.

Ramesh Babu

Journalist

Recent Posts

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

13 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

21 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago