ಬೆಂಗಳೂರು ಲೋಕಾಯುಕ್ತ ನ್ಯಾಯಾಲಯಕ್ಕೆ ಸಾರ್ವಜನಿಕರು‌ ದೂರು: ಖುದ್ದು ಲೋಕಾಯುಕ್ತ ನ್ಯಾಯಾಧೀಶರೇ ಎಸಿ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ

ಬೆಂಗಳೂರು ಲೋಕಾಯುಕ್ತ ನ್ಯಾಯಾಲಯಕ್ಕೆ ಸಾರ್ವಜನಿಕರು‌ ದೂರು ನೀಡಿರುವ ಹಿನ್ನೆಲೆ ಖುದ್ದು ಲೋಕಾಯುಕ್ತ ನ್ಯಾಯಾಧೀಶರೇ ನಗರದಲ್ಲಿರುವ ಎಸಿ ಕಚೇರಿಯ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಗೆ ಆಗಮಿಸಿ ಪ್ರತಿಯೊಂದು ದಾಖಲೆಗಳನ್ನ ಪರಿಶೀಲನೆ‌ ನಡೆಸುತ್ತಿದ್ದಾರೆ.

ಸಾರ್ವಜನಿಕರ ದೂರು ಆಧರಿಸಿ ದೊಡ್ಡಬಳ್ಳಾಪುರ ಸೇರಿದ ರಾಜ್ಯದ 11 ಕಡೆ ಎಡಿಎಲ್ ಆರ್ ಹಾಗೂ ಡಿಡಿಎಲ್ ಆರ್ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಯಲಹಂಕ, ಕೆ.ಆರ್.ಪುರಂ, ದೊಡ್ಡಬಳ್ಳಾಪುರ ಸೇರಿ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ಜೊತೆಗೆ ಸಾರ್ವಜನಿಕರ ಅಹವಾಲನ್ನು ಸ್ವೀಕಾರ ‌ಮಾಡುತ್ತಿರುವ ಅಧಿಕಾರಿಗಳ ತಂಡ

ಈ ವೇಳೆ ಡೆಪ್ಯುಟಿ ರಿಜಿಸ್ಟರ್ ಅನಿತಾ, ಚಿಕ್ಕಬಳ್ಳಾಪುರ ಲೋಕಾಯುಕ್ತ ಎಸ್ಪಿ ಡಾ.ರಾಮ್ ಹರಸಿದ್ದಿ, ಲೋಕಾಯುಕ್ತ ಲೋಕಾಯುಕ್ತಾ ಡಿವೈಎಸ್ಪಿ ವೀರೇಂದ್ರ ಕುಮಾರ್ , ಇನ್ಸ್ ಪೆಕ್ಟರ್ ಸೇರಿದಂತೆ‌ ಸಿಬ್ಬಂದಿ ದಾಖಲೆಗಳ ಪರಿಶೀಲನೆ ನಡೆಸುವಲ್ಲಿ ನಿರತರಾಗಿದ್ದಾರೆ.

ಲೋಕಾಯುಕ್ತ ದಾಳಿ ವೇಳೆ ಸಾರ್ವಜನಿಕರೊಬ್ಬರು ಜೋರು ದನಿಯಲ್ಲಿ ಅಧಿಕಾರಿಗಳ ವಿಳಂಬ ನೀತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪೋಡಿ ದರಕಾಸ್ತು ಮಾಡಿಸಲು ಅರ್ಜಿ ನೀಡಿ ಎರಡು ವರ್ಷ ಕಳೆದರೂ ಅಧಿಕಾರಿಗಳು ಸ್ಪಂದಿಸಿಲ್ಲ‌ ಎಂದು ತರಾಟೆಗೆ ತೆಗೆದುಕೊಂಡರು. ಆಗ ಡಿವೈಎಸ್ಪಿ ವೀರೇಂದ್ರ ಅವರು ಆ ವ್ಯಕ್ತಿಯನ್ನು ಮನವೊಲಿಸಿ ದೂರು ವಿವರಿಸುವಂತೆ ಕೇಳಿ ಕರೆದೋಯ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ತಾಲೂಕು ಯಾದವ ಯುವ ವೇದಿಕೆಗೆ ನೂತನ ಪದಾಧಿಕಾರಿಗಳ ನೇಮಕ

ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…

9 hours ago

‘ಕೆಐಎಡಿಬಿ ಮಧ್ಯವರ್ತಿ ಸಂಸ್ಥೆ’: ಜೂ.5ಕ್ಕೆ ಭೂಸ್ವಾಧೀನ ವಿರೋಧಿಸಿ ರೈತರ ವಿಧಾನಸೌಧ ಚಲೋ: ರೈತ ಸಂಘದ ಜಿಲ್ಲಾ ಘಟಕ ಬೆಂಬಲ

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…

9 hours ago

ಇಂಧನ ಬೆಲೆ ಏರಿಕೆ ಖಂಡಿಸಿ ಕನ್ನಡ ಪಕ್ಷ ಪ್ರತಿಭಟನೆ

  ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…

9 hours ago

ಘನ ತ್ಯಾಜ್ಯ ಸಮರ್ಪಕ ನಿರ್ವಹಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಕರೆ

ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…

9 hours ago

ಮೀನಿನ ಬಲೆಯಲ್ಲಿ ಸಿಲುಕಿ ಒದ್ದಾಡಿದ ಬೃಹತ್ ಹೆಬ್ಬಾವು; ಗ್ರಾಮಸ್ಥರಿಂದ ರಕ್ಷಣೆ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…

12 hours ago

ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಆರೋಪ: ಚಾಲಕ, ಮಣ್ಣು ಸಮೇತ ಟಿಪ್ಪರ್ ಲಾರಿಗಳ ವಶ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…

16 hours ago