ಬೆಂಗಳೂರು ಲೋಕಾಯುಕ್ತ ನ್ಯಾಯಾಲಯಕ್ಕೆ ಸಾರ್ವಜನಿಕರು‌ ದೂರು: ಖುದ್ದು ಲೋಕಾಯುಕ್ತ ನ್ಯಾಯಾಧೀಶರೇ ಎಸಿ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ

ಬೆಂಗಳೂರು ಲೋಕಾಯುಕ್ತ ನ್ಯಾಯಾಲಯಕ್ಕೆ ಸಾರ್ವಜನಿಕರು‌ ದೂರು ನೀಡಿರುವ ಹಿನ್ನೆಲೆ ಖುದ್ದು ಲೋಕಾಯುಕ್ತ ನ್ಯಾಯಾಧೀಶರೇ ನಗರದಲ್ಲಿರುವ ಎಸಿ ಕಚೇರಿಯ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಗೆ ಆಗಮಿಸಿ ಪ್ರತಿಯೊಂದು ದಾಖಲೆಗಳನ್ನ ಪರಿಶೀಲನೆ‌ ನಡೆಸುತ್ತಿದ್ದಾರೆ.

ಸಾರ್ವಜನಿಕರ ದೂರು ಆಧರಿಸಿ ದೊಡ್ಡಬಳ್ಳಾಪುರ ಸೇರಿದ ರಾಜ್ಯದ 11 ಕಡೆ ಎಡಿಎಲ್ ಆರ್ ಹಾಗೂ ಡಿಡಿಎಲ್ ಆರ್ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಯಲಹಂಕ, ಕೆ.ಆರ್.ಪುರಂ, ದೊಡ್ಡಬಳ್ಳಾಪುರ ಸೇರಿ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ಜೊತೆಗೆ ಸಾರ್ವಜನಿಕರ ಅಹವಾಲನ್ನು ಸ್ವೀಕಾರ ‌ಮಾಡುತ್ತಿರುವ ಅಧಿಕಾರಿಗಳ ತಂಡ

ಈ ವೇಳೆ ಡೆಪ್ಯುಟಿ ರಿಜಿಸ್ಟರ್ ಅನಿತಾ, ಚಿಕ್ಕಬಳ್ಳಾಪುರ ಲೋಕಾಯುಕ್ತ ಎಸ್ಪಿ ಡಾ.ರಾಮ್ ಹರಸಿದ್ದಿ, ಲೋಕಾಯುಕ್ತ ಲೋಕಾಯುಕ್ತಾ ಡಿವೈಎಸ್ಪಿ ವೀರೇಂದ್ರ ಕುಮಾರ್ , ಇನ್ಸ್ ಪೆಕ್ಟರ್ ಸೇರಿದಂತೆ‌ ಸಿಬ್ಬಂದಿ ದಾಖಲೆಗಳ ಪರಿಶೀಲನೆ ನಡೆಸುವಲ್ಲಿ ನಿರತರಾಗಿದ್ದಾರೆ.

ಲೋಕಾಯುಕ್ತ ದಾಳಿ ವೇಳೆ ಸಾರ್ವಜನಿಕರೊಬ್ಬರು ಜೋರು ದನಿಯಲ್ಲಿ ಅಧಿಕಾರಿಗಳ ವಿಳಂಬ ನೀತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪೋಡಿ ದರಕಾಸ್ತು ಮಾಡಿಸಲು ಅರ್ಜಿ ನೀಡಿ ಎರಡು ವರ್ಷ ಕಳೆದರೂ ಅಧಿಕಾರಿಗಳು ಸ್ಪಂದಿಸಿಲ್ಲ‌ ಎಂದು ತರಾಟೆಗೆ ತೆಗೆದುಕೊಂಡರು. ಆಗ ಡಿವೈಎಸ್ಪಿ ವೀರೇಂದ್ರ ಅವರು ಆ ವ್ಯಕ್ತಿಯನ್ನು ಮನವೊಲಿಸಿ ದೂರು ವಿವರಿಸುವಂತೆ ಕೇಳಿ ಕರೆದೋಯ್ದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

22 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

1 day ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago