ಬೆಂಗಳೂರು ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರ ಅಂತಿಮ ಮತದಾರರ ಪಟ್ಟಿ ಪ್ರಕಟ: ಅಂತಿಮ ಮತದಾರರ ಪಟ್ಟಿಗೆ 2006 ಶಿಕ್ಷಕರು, 17648 ಪದವೀಧರರು ನೋಂದಣಿ

ವಿಧಾನ ಪರಿಷತ್ತಿನ ಚುನಾವಣೆ- 2023 ರ ಸಂಬಂಧ ಮತದಾರ ಪಟ್ಟಿಗಳ ಸಮಗ್ರ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳ ಅಂತಿಮ ಮತದಾರರ ಪಟ್ಟಿಗಳ ಪ್ರತಿಯನ್ನು ಇಂದು(ಡಿಸೆಂಬರ್ 30) ಪ್ರಕಟಗೊಳಿಸಿದ್ದು, ಅಂತಿಮ ಮತದಾರ ಪಟ್ಟಿಯಲ್ಲಿ ಯಾವುದೇ ಹಕ್ಕು ಹಾಗೂ ಆಕ್ಷೇಪಣೆ ಇದ್ದಲ್ಲಿ ಲಿಖಿತ ಮೂಲಕ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಡಾ. ಶಿವಶಂಕರ ಎನ್ ಅವರು ತಿಳಿಸಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ವಿಧಾನ ಪರಿಷತ್ತಿನ ಚುನಾವಣೆ-2023  ರ ಸಂಬಂಧ ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ ಬಗ್ಗೆ ಸಾರ್ವಜನಿಕವಾಗಿ 2023 ರ ಸೆಪ್ಟೆಂಬರ್ 30ರಂದು ಪ್ರಕಟಣೆ ಹೊರಡಿಸಲಾಗಿತ್ತು. ನಮೂನೆ 19 ಹಾಗೂ ನಮೂನೆ 18 ರಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅಕ್ಟೋಬರ್ 01 ರಿಂದ ನವೆಂಬರ್ 06 ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಕರಡು ಮತದಾರರ ಪಟ್ಟಿಯನ್ನು ನವೆಂಬರ್ 23 ರಂದು ಪ್ರಕಟಿಸಲಾಗಿತ್ತು. ಕರಡು ಮತದಾರರ ಪಟ್ಟಿಗೆ ಯಾವುದೇ ಹಕ್ಕು ಹಾಗೂ ಆಕ್ಷೇಪಣೆ ಇದ್ದಲ್ಲಿ ಲಿಖಿತ ಮೂಲಕ ಸಲ್ಲಿಸಲು ಡಿಸೆಂಬರ್ 09 ರವರೆಗೆ ಅವಕಾಶ ಕಲ್ಪಿಸಲಾಗಿತ್ತು.

ಅಂತಿಮ ಮತದಾರರ ಪಟ್ಟಿಗಯನ್ನು ಡಿಸೆಂಬರ್ 30 ರಂದು ಪ್ರಕಟಿಸಲಾಗಿದ್ದು ಜಿಲ್ಲೆ, ಉಪವಿಭಾಗ, ತಾಲೂಕು ಕಚೇರಿಗಳಲ್ಲಿ, ನಾಡಕಚೇರಿಗಳಲ್ಲಿ, ಪುರಸಭೆ, ನಗರಸಭೆ ಮತ್ತು ಎಲ್ಲಾ ಸಾರ್ವಜನಿಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿದ್ದು ಅರ್ಜಿದಾರರು ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಇರುವುದನ್ನು ಖಾತರಿ ಪಡಿಸಿಕೊಳ್ಳಬೇಕೆಂದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಶಿಕ್ಷಕರ ಕ್ಷೇತ್ರದ ಅಂತಿಮ ಮತದಾರ ಪಟ್ಟಿಯಂತೆ 1045  ಪುರುಷ ಶಿಕ್ಷಕರು ಹಾಗೂ 961 ಮಹಿಳಾ ಶಿಕ್ಷಕಿಯರು ಸೇರಿ ಒಟ್ಟು 2006 ಶಿಕ್ಷಕರು ಮತದಾರ ಪಟ್ಟಿಯಲ್ಲಿ ನೊಂದಾಯಿಸಿಕೊಂಡಿದ್ದಾರೆ.

ಪದವೀಧರ ಕ್ಷೇತ್ರದ ಕರಡು ಮತದಾರರ ಪಟ್ಟಿಯಲ್ಲಿರುವಂತೆ 9378 ಪುರುಷ ಮತದಾರರು ಹಾಗೂ 8270 ಮಹಿಳಾ ಮತದಾರರು ಸೇರಿ 17648 ಮತದಾರರು ನೋಂದಾಯಿಸಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಅಂತಿಮ ಮತದಾರರ ಪಟ್ಟಿಗೆ ಯಾವುದೇ ಹಕ್ಕು ಹಾಗೂ ಆಕ್ಷೇಪಣೆ ಇದ್ದಲ್ಲಿ ಲಿಖಿತ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ,  ಆಯಾ ತಾಲೂಕಿನ ತಹಶೀಲ್ದಾರ್ ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಡಾ. ಶಿವಶಂಕರ ಎನ್ ಅವರು ತಿಳಿಸಿದರು.

Ramesh Babu

Journalist

Recent Posts

ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ

ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ‌ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…

3 hours ago

ಪೊಲೀಸ್‌ ಡ್ರೆಸ್‌ನಲ್ಲಿ ಬಂದು ದರೋಡೆ – 20 ಲಕ್ಷ ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿ.!

ಸಬ್ ಇನ್ಸ್‌ಪೆಕ್ಟರ್‌ ಡ್ರೆಸ್‌ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…

5 hours ago

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

16 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

17 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

19 hours ago

ಆಸ್ತಿ ವಿವರ ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಕೆ ವಿಚಾರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಚುನಾವಣಾ ಆಯೋಗ…

21 hours ago