ವಿಧಾನ ಪರಿಷತ್ತಿನ ಚುನಾವಣೆ- 2023 ರ ಸಂಬಂಧ ಮತದಾರ ಪಟ್ಟಿಗಳ ಸಮಗ್ರ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳ ಅಂತಿಮ ಮತದಾರರ ಪಟ್ಟಿಗಳ ಪ್ರತಿಯನ್ನು ಇಂದು(ಡಿಸೆಂಬರ್ 30) ಪ್ರಕಟಗೊಳಿಸಿದ್ದು, ಅಂತಿಮ ಮತದಾರ ಪಟ್ಟಿಯಲ್ಲಿ ಯಾವುದೇ ಹಕ್ಕು ಹಾಗೂ ಆಕ್ಷೇಪಣೆ ಇದ್ದಲ್ಲಿ ಲಿಖಿತ ಮೂಲಕ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಡಾ. ಶಿವಶಂಕರ ಎನ್ ಅವರು ತಿಳಿಸಿದರು.
ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ವಿಧಾನ ಪರಿಷತ್ತಿನ ಚುನಾವಣೆ-2023 ರ ಸಂಬಂಧ ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ ಬಗ್ಗೆ ಸಾರ್ವಜನಿಕವಾಗಿ 2023 ರ ಸೆಪ್ಟೆಂಬರ್ 30ರಂದು ಪ್ರಕಟಣೆ ಹೊರಡಿಸಲಾಗಿತ್ತು. ನಮೂನೆ 19 ಹಾಗೂ ನಮೂನೆ 18 ರಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅಕ್ಟೋಬರ್ 01 ರಿಂದ ನವೆಂಬರ್ 06 ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಕರಡು ಮತದಾರರ ಪಟ್ಟಿಯನ್ನು ನವೆಂಬರ್ 23 ರಂದು ಪ್ರಕಟಿಸಲಾಗಿತ್ತು. ಕರಡು ಮತದಾರರ ಪಟ್ಟಿಗೆ ಯಾವುದೇ ಹಕ್ಕು ಹಾಗೂ ಆಕ್ಷೇಪಣೆ ಇದ್ದಲ್ಲಿ ಲಿಖಿತ ಮೂಲಕ ಸಲ್ಲಿಸಲು ಡಿಸೆಂಬರ್ 09 ರವರೆಗೆ ಅವಕಾಶ ಕಲ್ಪಿಸಲಾಗಿತ್ತು.
ಅಂತಿಮ ಮತದಾರರ ಪಟ್ಟಿಗಯನ್ನು ಡಿಸೆಂಬರ್ 30 ರಂದು ಪ್ರಕಟಿಸಲಾಗಿದ್ದು ಜಿಲ್ಲೆ, ಉಪವಿಭಾಗ, ತಾಲೂಕು ಕಚೇರಿಗಳಲ್ಲಿ, ನಾಡಕಚೇರಿಗಳಲ್ಲಿ, ಪುರಸಭೆ, ನಗರಸಭೆ ಮತ್ತು ಎಲ್ಲಾ ಸಾರ್ವಜನಿಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿದ್ದು ಅರ್ಜಿದಾರರು ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಇರುವುದನ್ನು ಖಾತರಿ ಪಡಿಸಿಕೊಳ್ಳಬೇಕೆಂದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಶಿಕ್ಷಕರ ಕ್ಷೇತ್ರದ ಅಂತಿಮ ಮತದಾರ ಪಟ್ಟಿಯಂತೆ 1045 ಪುರುಷ ಶಿಕ್ಷಕರು ಹಾಗೂ 961 ಮಹಿಳಾ ಶಿಕ್ಷಕಿಯರು ಸೇರಿ ಒಟ್ಟು 2006 ಶಿಕ್ಷಕರು ಮತದಾರ ಪಟ್ಟಿಯಲ್ಲಿ ನೊಂದಾಯಿಸಿಕೊಂಡಿದ್ದಾರೆ.
ಪದವೀಧರ ಕ್ಷೇತ್ರದ ಕರಡು ಮತದಾರರ ಪಟ್ಟಿಯಲ್ಲಿರುವಂತೆ 9378 ಪುರುಷ ಮತದಾರರು ಹಾಗೂ 8270 ಮಹಿಳಾ ಮತದಾರರು ಸೇರಿ 17648 ಮತದಾರರು ನೋಂದಾಯಿಸಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.
ಅಂತಿಮ ಮತದಾರರ ಪಟ್ಟಿಗೆ ಯಾವುದೇ ಹಕ್ಕು ಹಾಗೂ ಆಕ್ಷೇಪಣೆ ಇದ್ದಲ್ಲಿ ಲಿಖಿತ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ, ಆಯಾ ತಾಲೂಕಿನ ತಹಶೀಲ್ದಾರ್ ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಡಾ. ಶಿವಶಂಕರ ಎನ್ ಅವರು ತಿಳಿಸಿದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…