ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯುವ ಉಪಚುನಾವಣೆ 2024ರ ಪ್ರಯುಕ್ತ ಫೆಬ್ರವರಿ 16 ರಂದು ನಡೆಯಲಿರುವ ಮತದಾನ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮತದಾನ ಕೇಂದ್ರಗಳ ಅಂತಿಮ ಪಟ್ಟಿ ಪ್ರಕಟಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕಸಬಾ ಟೌನ್, ಮಧುರೆ ಹೋಬಳಿ, ತೂಬಗೆರೆ ಹೋಬಳಿ ವ್ಯಾಪ್ತಿಯ ಶಿಕ್ಷಕ ಮತದಾರರು ದೊಡ್ಡಬಳ್ಳಾಪುರ ತಾಲೂಕು ಕಚೇರಿಯ ಮಿನಿ ವಿಧಾನ ಸೌಧದ ನ್ಯಾಯಾಲಯ ಸಭಾಂಗಣದಲ್ಲಿ ಮತ ಚಲಾಯಿಸಬಹುದಾಗಿದೆ.
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಳ ಹೋಬಳಿ, ಸಾಸಲು ಹೋಬಳಿ ವ್ಯಾಪ್ತಿಯ ಶಿಕ್ಷಕ ಮತದಾರರು ದೊಡ್ಡಬೆಳವಂಗಲ ಸರ್ಕಾರಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೊಠಡಿ ಸಂಖ್ಯೆ-2ರಲ್ಲಿ ಮತ ಚಲಾಯಿಸಬಹುದಾಗಿದೆ.
ದೇವನಹಳ್ಳಿ ತಾಲೂಕಿನ ಕಸಬಾ ಟೌನ್, ಚನ್ನರಾಯಪಟ್ಟಣ ಹೋಬಳಿ, ಕುಂದಾಣ ಹೋಬಳಿ, ವಿಜಯಪುರ ಹೋಬಳಿ ವ್ಯಾಪ್ತಿಯ ಶಿಕ್ಷಕ ಮತದಾರರು ದೇವನಹಳ್ಳಿ ತಾಲೂಕು ಕಚೇರಿಯ ಮಿನಿ ವಿಧಾನ ಸೌಧದ ನ್ಯಾಯಾಲಯ ಸಭಾಂಗಣದಲ್ಲಿ ಮತ ಚಲಾಯಿಸಬಹುದಾಗಿದೆ.
ಹೊಸಕೋಟೆ ತಾಲೂಕಿನ ಕಸಬಾ ಟೌನ್, ಅನುಗೊಂಡನಹಳ್ಳಿ, ಜಡಿಗೇನಹಳ್ಳಿ, ನಂದಗುಡಿ, ಸೂಲಿಬೆಲೆ ವ್ಯಾಪ್ತಿಯ ಶಿಕ್ಷಕ ಮತದಾರರು ಹೊಸಕೋಟೆ ತಾಲೂಕು ಕಚೇರಿಯ ಮಿನಿ ವಿಧಾನ ಸೌಧದ ನ್ಯಾಯಾಲಯ ಸಭಾಂಗಣದಲ್ಲಿ ಮತ ಚಲಾಯಿಸಬಹುದಾಗಿದೆ.
ನೆಲಮಂಗಲ ತಾಲೂಕಿನ ಕಸಬಾ ವ್ಯಾಪ್ತಿಯ ಶಿಕ್ಷಕ ಮತದಾರರು ನೆಲಮಂಗಲ ತಾಲೂಕು ಕಚೇರಿಯ ಮಿನಿ ವಿಧಾನ ಸೌಧದ ನ್ಯಾಯಾಲಯ ಸಭಾಂಗಣದಲ್ಲಿ ಮತ ಚಲಾಯಿಸಬಹುದಾಗಿದೆ.
ನೆಲಮಂಗಲ ತಾಲೂಕಿನ ಸೋಂಪುರ ಹೋಬಳಿಯ ಸೋಂಪುರ, ತ್ಯಾಮಗೊಂಡ್ಲು ವ್ಯಾಪ್ತಿಯ ಶಿಕ್ಷಕ ಮತದಾರರು ಸೋಂಪುರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಕೊಠಡಿ ಸಂಖ್ಯೆ-2ರಲ್ಲಿ ಮತ ಚಲಾಯಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್ ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…