ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯುವ ಉಪಚುನಾವಣೆ 2024ರ ಪ್ರಯುಕ್ತ ಫೆಬ್ರವರಿ 16 ರಂದು ನಡೆಯಲಿರುವ ಮತದಾನ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮತದಾನ ಕೇಂದ್ರಗಳ ಅಂತಿಮ ಪಟ್ಟಿ ಪ್ರಕಟಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕಸಬಾ ಟೌನ್, ಮಧುರೆ ಹೋಬಳಿ, ತೂಬಗೆರೆ ಹೋಬಳಿ ವ್ಯಾಪ್ತಿಯ ಶಿಕ್ಷಕ ಮತದಾರರು ದೊಡ್ಡಬಳ್ಳಾಪುರ ತಾಲೂಕು ಕಚೇರಿಯ ಮಿನಿ ವಿಧಾನ ಸೌಧದ ನ್ಯಾಯಾಲಯ ಸಭಾಂಗಣದಲ್ಲಿ ಮತ ಚಲಾಯಿಸಬಹುದಾಗಿದೆ.
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಳ ಹೋಬಳಿ, ಸಾಸಲು ಹೋಬಳಿ ವ್ಯಾಪ್ತಿಯ ಶಿಕ್ಷಕ ಮತದಾರರು ದೊಡ್ಡಬೆಳವಂಗಲ ಸರ್ಕಾರಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೊಠಡಿ ಸಂಖ್ಯೆ-2ರಲ್ಲಿ ಮತ ಚಲಾಯಿಸಬಹುದಾಗಿದೆ.
ದೇವನಹಳ್ಳಿ ತಾಲೂಕಿನ ಕಸಬಾ ಟೌನ್, ಚನ್ನರಾಯಪಟ್ಟಣ ಹೋಬಳಿ, ಕುಂದಾಣ ಹೋಬಳಿ, ವಿಜಯಪುರ ಹೋಬಳಿ ವ್ಯಾಪ್ತಿಯ ಶಿಕ್ಷಕ ಮತದಾರರು ದೇವನಹಳ್ಳಿ ತಾಲೂಕು ಕಚೇರಿಯ ಮಿನಿ ವಿಧಾನ ಸೌಧದ ನ್ಯಾಯಾಲಯ ಸಭಾಂಗಣದಲ್ಲಿ ಮತ ಚಲಾಯಿಸಬಹುದಾಗಿದೆ.
ಹೊಸಕೋಟೆ ತಾಲೂಕಿನ ಕಸಬಾ ಟೌನ್, ಅನುಗೊಂಡನಹಳ್ಳಿ, ಜಡಿಗೇನಹಳ್ಳಿ, ನಂದಗುಡಿ, ಸೂಲಿಬೆಲೆ ವ್ಯಾಪ್ತಿಯ ಶಿಕ್ಷಕ ಮತದಾರರು ಹೊಸಕೋಟೆ ತಾಲೂಕು ಕಚೇರಿಯ ಮಿನಿ ವಿಧಾನ ಸೌಧದ ನ್ಯಾಯಾಲಯ ಸಭಾಂಗಣದಲ್ಲಿ ಮತ ಚಲಾಯಿಸಬಹುದಾಗಿದೆ.
ನೆಲಮಂಗಲ ತಾಲೂಕಿನ ಕಸಬಾ ವ್ಯಾಪ್ತಿಯ ಶಿಕ್ಷಕ ಮತದಾರರು ನೆಲಮಂಗಲ ತಾಲೂಕು ಕಚೇರಿಯ ಮಿನಿ ವಿಧಾನ ಸೌಧದ ನ್ಯಾಯಾಲಯ ಸಭಾಂಗಣದಲ್ಲಿ ಮತ ಚಲಾಯಿಸಬಹುದಾಗಿದೆ.
ನೆಲಮಂಗಲ ತಾಲೂಕಿನ ಸೋಂಪುರ ಹೋಬಳಿಯ ಸೋಂಪುರ, ತ್ಯಾಮಗೊಂಡ್ಲು ವ್ಯಾಪ್ತಿಯ ಶಿಕ್ಷಕ ಮತದಾರರು ಸೋಂಪುರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಕೊಠಡಿ ಸಂಖ್ಯೆ-2ರಲ್ಲಿ ಮತ ಚಲಾಯಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್ ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…