ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯುವ ಉಪಚುನಾವಣೆ 2024ರ ಪ್ರಯುಕ್ತ ಫೆಬ್ರವರಿ 16 ರಂದು ನಡೆಯಲಿರುವ ಮತದಾನ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮತದಾನ ಕೇಂದ್ರಗಳ ಅಂತಿಮ ಪಟ್ಟಿ ಪ್ರಕಟಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕಸಬಾ ಟೌನ್, ಮಧುರೆ ಹೋಬಳಿ, ತೂಬಗೆರೆ ಹೋಬಳಿ ವ್ಯಾಪ್ತಿಯ ಶಿಕ್ಷಕ ಮತದಾರರು ದೊಡ್ಡಬಳ್ಳಾಪುರ ತಾಲೂಕು ಕಚೇರಿಯ ಮಿನಿ ವಿಧಾನ ಸೌಧದ ನ್ಯಾಯಾಲಯ ಸಭಾಂಗಣದಲ್ಲಿನ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ.
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಳ ಹೋಬಳಿ, ಸಾಸಲು ಹೋಬಳಿ ವ್ಯಾಪ್ತಿಯ ಶಿಕ್ಷಕ ಮತದಾರರು ದೊಡ್ಡಬೆಳವಂಗಲ ಸರ್ಕಾರಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೊಠಡಿ ಸಂಖ್ಯೆ-2ರ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ.
ದೇವನಹಳ್ಳಿ ತಾಲೂಕಿನ ಕಸಬಾ ಟೌನ್, ಚನ್ನರಾಯಪಟ್ಟಣ ಹೋಬಳಿ, ಕುಂದಾಣ ಹೋಬಳಿ, ವಿಜಯಪುರ ಹೋಬಳಿ ವ್ಯಾಪ್ತಿಯ ಶಿಕ್ಷಕ ಮತದಾರರು ದೇವನಹಳ್ಳಿ ತಾಲೂಕು ಕಚೇರಿಯ ಮಿನಿ ವಿಧಾನ ಸೌಧದ ನ್ಯಾಯಾಲಯ ಸಭಾಂಗಣದ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ. ಹೊಸಕೋಟೆ ತಾಲೂಕಿನ ಕಸಬಾ ಟೌನ್, ಅನುಗೊಂಡನಹಳ್ಳಿ, ಜಡಿಗೇನಹಳ್ಳಿ, ನಂದಗುಡಿ, ಸೂಲಿಬೆಲೆ ವ್ಯಾಪ್ತಿಯ ಶಿಕ್ಷಕ ಮತದಾರರು ಹೊಸಕೋಟೆ ತಾಲೂಕು ಕಚೇರಿಯ ಮಿನಿ ವಿಧಾನ ಸೌಧದ ನ್ಯಾಯಾಲಯ ಸಭಾಂಗಣದ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ.
ನೆಲಮಂಗಲ ತಾಲೂಕಿನ ಕಸಬಾ ವ್ಯಾಪ್ತಿಯ ಶಿಕ್ಷಕ ಮತದಾರರು ನೆಲಮಂಗಲ ತಾಲೂಕು ಕಚೇರಿಯ ಮಿನಿ ವಿಧಾನ ಸೌಧದ ನ್ಯಾಯಾಲಯ ಸಭಾಂಗಣದ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ.
ನೆಲಮಂಗಲ ತಾಲೂಕಿನ ಸೋಂಪುರ ಹೋಬಳಿಯ ಸೋಂಪುರ, ತ್ಯಾಮಗೊಂಡ್ಲು ವ್ಯಾಪ್ತಿಯ ಶಿಕ್ಷಕ ಮತದಾರರು ಸೋಂಪುರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಕೊಠಡಿ ಸಂಖ್ಯೆ-2ರ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…
ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…
ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…
ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…
ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…
ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…