ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ನಾಳೆ(ಶುಕ್ರವಾರ) ಮತದಾನ: ಮತದಾನ ಕೇಂದ್ರಗಳ ವಿವರ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯುವ ಉಪಚುನಾವಣೆ 2024ರ ಪ್ರಯುಕ್ತ ಫೆಬ್ರವರಿ 16 ರಂದು ನಡೆಯಲಿರುವ ಮತದಾನ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮತದಾನ ಕೇಂದ್ರಗಳ ಅಂತಿಮ ಪಟ್ಟಿ ಪ್ರಕಟಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕಸಬಾ ಟೌನ್, ಮಧುರೆ ಹೋಬಳಿ, ತೂಬಗೆರೆ ಹೋಬಳಿ ವ್ಯಾಪ್ತಿಯ ಶಿಕ್ಷಕ ಮತದಾರರು ದೊಡ್ಡಬಳ್ಳಾಪುರ ತಾಲೂಕು ಕಚೇರಿಯ ಮಿನಿ ವಿಧಾನ ಸೌಧದ ನ್ಯಾಯಾಲಯ ಸಭಾಂಗಣದಲ್ಲಿನ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ.

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಳ ಹೋಬಳಿ, ಸಾಸಲು ಹೋಬಳಿ ವ್ಯಾಪ್ತಿಯ ಶಿಕ್ಷಕ ಮತದಾರರು ದೊಡ್ಡಬೆಳವಂಗಲ ಸರ್ಕಾರಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೊಠಡಿ ಸಂಖ್ಯೆ-2ರ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ.

ದೇವನಹಳ್ಳಿ ತಾಲೂಕಿನ ಕಸಬಾ ಟೌನ್, ಚನ್ನರಾಯಪಟ್ಟಣ ಹೋಬಳಿ, ಕುಂದಾಣ ಹೋಬಳಿ, ವಿಜಯಪುರ ಹೋಬಳಿ ವ್ಯಾಪ್ತಿಯ ಶಿಕ್ಷಕ ಮತದಾರರು ದೇವನಹಳ್ಳಿ ತಾಲೂಕು ಕಚೇರಿಯ ಮಿನಿ ವಿಧಾನ ಸೌಧದ ನ್ಯಾಯಾಲಯ ಸಭಾಂಗಣದ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ. ಹೊಸಕೋಟೆ ತಾಲೂಕಿನ ಕಸಬಾ ಟೌನ್, ಅನುಗೊಂಡನಹಳ್ಳಿ, ಜಡಿಗೇನಹಳ್ಳಿ, ನಂದಗುಡಿ, ಸೂಲಿಬೆಲೆ ವ್ಯಾಪ್ತಿಯ ಶಿಕ್ಷಕ ಮತದಾರರು ಹೊಸಕೋಟೆ ತಾಲೂಕು ಕಚೇರಿಯ ಮಿನಿ ವಿಧಾನ ಸೌಧದ ನ್ಯಾಯಾಲಯ ಸಭಾಂಗಣದ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ.

ನೆಲಮಂಗಲ ತಾಲೂಕಿನ ಕಸಬಾ ವ್ಯಾಪ್ತಿಯ ಶಿಕ್ಷಕ ಮತದಾರರು ನೆಲಮಂಗಲ ತಾಲೂಕು ಕಚೇರಿಯ ಮಿನಿ ವಿಧಾನ ಸೌಧದ ನ್ಯಾಯಾಲಯ ಸಭಾಂಗಣದ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ.

ನೆಲಮಂಗಲ ತಾಲೂಕಿನ ಸೋಂಪುರ ಹೋಬಳಿಯ ಸೋಂಪುರ, ತ್ಯಾಮಗೊಂಡ್ಲು ವ್ಯಾಪ್ತಿಯ ಶಿಕ್ಷಕ ಮತದಾರರು ಸೋಂಪುರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಕೊಠಡಿ ಸಂಖ್ಯೆ-2ರ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

3 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

19 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago