ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ನಾಳೆ(ಶುಕ್ರವಾರ) ಮತದಾನ: ಮತದಾನ ಕೇಂದ್ರಗಳ ವಿವರ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯುವ ಉಪಚುನಾವಣೆ 2024ರ ಪ್ರಯುಕ್ತ ಫೆಬ್ರವರಿ 16 ರಂದು ನಡೆಯಲಿರುವ ಮತದಾನ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮತದಾನ ಕೇಂದ್ರಗಳ ಅಂತಿಮ ಪಟ್ಟಿ ಪ್ರಕಟಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕಸಬಾ ಟೌನ್, ಮಧುರೆ ಹೋಬಳಿ, ತೂಬಗೆರೆ ಹೋಬಳಿ ವ್ಯಾಪ್ತಿಯ ಶಿಕ್ಷಕ ಮತದಾರರು ದೊಡ್ಡಬಳ್ಳಾಪುರ ತಾಲೂಕು ಕಚೇರಿಯ ಮಿನಿ ವಿಧಾನ ಸೌಧದ ನ್ಯಾಯಾಲಯ ಸಭಾಂಗಣದಲ್ಲಿನ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ.

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಳ ಹೋಬಳಿ, ಸಾಸಲು ಹೋಬಳಿ ವ್ಯಾಪ್ತಿಯ ಶಿಕ್ಷಕ ಮತದಾರರು ದೊಡ್ಡಬೆಳವಂಗಲ ಸರ್ಕಾರಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೊಠಡಿ ಸಂಖ್ಯೆ-2ರ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ.

ದೇವನಹಳ್ಳಿ ತಾಲೂಕಿನ ಕಸಬಾ ಟೌನ್, ಚನ್ನರಾಯಪಟ್ಟಣ ಹೋಬಳಿ, ಕುಂದಾಣ ಹೋಬಳಿ, ವಿಜಯಪುರ ಹೋಬಳಿ ವ್ಯಾಪ್ತಿಯ ಶಿಕ್ಷಕ ಮತದಾರರು ದೇವನಹಳ್ಳಿ ತಾಲೂಕು ಕಚೇರಿಯ ಮಿನಿ ವಿಧಾನ ಸೌಧದ ನ್ಯಾಯಾಲಯ ಸಭಾಂಗಣದ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ. ಹೊಸಕೋಟೆ ತಾಲೂಕಿನ ಕಸಬಾ ಟೌನ್, ಅನುಗೊಂಡನಹಳ್ಳಿ, ಜಡಿಗೇನಹಳ್ಳಿ, ನಂದಗುಡಿ, ಸೂಲಿಬೆಲೆ ವ್ಯಾಪ್ತಿಯ ಶಿಕ್ಷಕ ಮತದಾರರು ಹೊಸಕೋಟೆ ತಾಲೂಕು ಕಚೇರಿಯ ಮಿನಿ ವಿಧಾನ ಸೌಧದ ನ್ಯಾಯಾಲಯ ಸಭಾಂಗಣದ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ.

ನೆಲಮಂಗಲ ತಾಲೂಕಿನ ಕಸಬಾ ವ್ಯಾಪ್ತಿಯ ಶಿಕ್ಷಕ ಮತದಾರರು ನೆಲಮಂಗಲ ತಾಲೂಕು ಕಚೇರಿಯ ಮಿನಿ ವಿಧಾನ ಸೌಧದ ನ್ಯಾಯಾಲಯ ಸಭಾಂಗಣದ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ.

ನೆಲಮಂಗಲ ತಾಲೂಕಿನ ಸೋಂಪುರ ಹೋಬಳಿಯ ಸೋಂಪುರ, ತ್ಯಾಮಗೊಂಡ್ಲು ವ್ಯಾಪ್ತಿಯ ಶಿಕ್ಷಕ ಮತದಾರರು ಸೋಂಪುರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಕೊಠಡಿ ಸಂಖ್ಯೆ-2ರ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

5 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

16 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

17 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

17 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

19 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

22 hours ago