ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯುವ ಉಪಚುನಾವಣೆ 2024ರ ಪ್ರಯುಕ್ತ ಫೆಬ್ರವರಿ 16 ರಂದು ನಡೆಯಲಿರುವ ಮತದಾನ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮತದಾನ ಕೇಂದ್ರಗಳ ಅಂತಿಮ ಪಟ್ಟಿ ಪ್ರಕಟಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕಸಬಾ ಟೌನ್, ಮಧುರೆ ಹೋಬಳಿ, ತೂಬಗೆರೆ ಹೋಬಳಿ ವ್ಯಾಪ್ತಿಯ ಶಿಕ್ಷಕ ಮತದಾರರು ದೊಡ್ಡಬಳ್ಳಾಪುರ ತಾಲೂಕು ಕಚೇರಿಯ ಮಿನಿ ವಿಧಾನ ಸೌಧದ ನ್ಯಾಯಾಲಯ ಸಭಾಂಗಣದಲ್ಲಿನ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ.
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಳ ಹೋಬಳಿ, ಸಾಸಲು ಹೋಬಳಿ ವ್ಯಾಪ್ತಿಯ ಶಿಕ್ಷಕ ಮತದಾರರು ದೊಡ್ಡಬೆಳವಂಗಲ ಸರ್ಕಾರಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೊಠಡಿ ಸಂಖ್ಯೆ-2ರ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ.
ದೇವನಹಳ್ಳಿ ತಾಲೂಕಿನ ಕಸಬಾ ಟೌನ್, ಚನ್ನರಾಯಪಟ್ಟಣ ಹೋಬಳಿ, ಕುಂದಾಣ ಹೋಬಳಿ, ವಿಜಯಪುರ ಹೋಬಳಿ ವ್ಯಾಪ್ತಿಯ ಶಿಕ್ಷಕ ಮತದಾರರು ದೇವನಹಳ್ಳಿ ತಾಲೂಕು ಕಚೇರಿಯ ಮಿನಿ ವಿಧಾನ ಸೌಧದ ನ್ಯಾಯಾಲಯ ಸಭಾಂಗಣದ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ. ಹೊಸಕೋಟೆ ತಾಲೂಕಿನ ಕಸಬಾ ಟೌನ್, ಅನುಗೊಂಡನಹಳ್ಳಿ, ಜಡಿಗೇನಹಳ್ಳಿ, ನಂದಗುಡಿ, ಸೂಲಿಬೆಲೆ ವ್ಯಾಪ್ತಿಯ ಶಿಕ್ಷಕ ಮತದಾರರು ಹೊಸಕೋಟೆ ತಾಲೂಕು ಕಚೇರಿಯ ಮಿನಿ ವಿಧಾನ ಸೌಧದ ನ್ಯಾಯಾಲಯ ಸಭಾಂಗಣದ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ.
ನೆಲಮಂಗಲ ತಾಲೂಕಿನ ಕಸಬಾ ವ್ಯಾಪ್ತಿಯ ಶಿಕ್ಷಕ ಮತದಾರರು ನೆಲಮಂಗಲ ತಾಲೂಕು ಕಚೇರಿಯ ಮಿನಿ ವಿಧಾನ ಸೌಧದ ನ್ಯಾಯಾಲಯ ಸಭಾಂಗಣದ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ.
ನೆಲಮಂಗಲ ತಾಲೂಕಿನ ಸೋಂಪುರ ಹೋಬಳಿಯ ಸೋಂಪುರ, ತ್ಯಾಮಗೊಂಡ್ಲು ವ್ಯಾಪ್ತಿಯ ಶಿಕ್ಷಕ ಮತದಾರರು ಸೋಂಪುರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಕೊಠಡಿ ಸಂಖ್ಯೆ-2ರ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…