ತೀವ್ರ ಕುತೂಹಲ ಕೆರಳಿಸಿರುವ ಬೆಂಗಳೂರು ಹಾಲು ಒಕ್ಕೂಟದ (ಬಮೂಲ್) ಅಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆದಿದ್ದು, ಬಮೂಲ್ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಡಿ.ಕೆ ಸುರೇಶ್ ಇಂದು ಬಮೂಲ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಲು ನಾಮಪತ್ರ ಸಲ್ಲಿಸಿದ್ದರು. ಬೆಂಗಳೂರಿನ ಡೇರಿ ಸರ್ಕಲ್ನಲ್ಲಿರುವ ಬಮೂಲ್ ಕಚೇರಿಯಲ್ಲಿ ಚುನಾವಣಾಧಿಕಾರಿಗಳಿಗೆ ತಮ್ಮ ಉಮೇದುವಾರಿಕೆಯನ್ನು ದಾಖಲಿಸಿದ್ದರು. ಇದೀಗ ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಕ್ರಮ ಡಿಕೆ ಸಹೋದರರ ರಾಜಕೀಯ ತಂತ್ರಗಾರಿಕೆಯನ್ನು ಮತ್ತಷ್ಟು ಬಲಗೊಳಿಸಿದ್ದು, ಕೆಎಂಎಫ್ನಂತಹ ಪ್ರತಿಷ್ಠಿತ ಸಂಸ್ಥೆಯ ನಿಯಂತ್ರಣಕ್ಕೆ ಸ್ಪಷ್ಟ ದಾಪುಗಾಲಿಡುವಂತಿದೆ.
ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಮೂಲ್ ಸಂಸ್ಥೆಗೆ ಸುಮಾರು 65 ವರ್ಷಗಳ ಇತಿಹಾಸವಿದೆ. ಈ ಸಹಕಾರ ಸಂಸ್ಥೆಯನ್ನು ಉಳಿಸಿ ಬೆಳೆಸಬೇಕು. ಏನಾದರು ಹೊಸ ಬದಲಾವಣೆ ತರಲೆಂದು ರೈತರು ನಮ್ಮನ್ನು ಆಯ್ಕೆ ಮಾಡಿದ್ದಾರೆ. ಅವರ ಆಶಯದಂತೆ ರೈತರಿಗೆ ಅನುಕೂಲವಾಗುವ ಹೊಸ ಬದಲಾವಣೆ ತರಲು ಪ್ರಯತ್ನ ಪಡುತ್ತೇವೆ ಎಂದರು.
ಪರಿಸರ ಸ್ನೇಹಿ ಹಾಲಿನ ಪ್ಯಾಕೆಟ್ ನ್ನು ಕರ್ನಾಟಕ ಎಲ್ಲಾ ಭಾಗಗಳಿಗೂ ವಿಸ್ತರಣೆ ಮಾಡಬೇಕು ಎಂಬ ಚಿಂತನೆಯಲ್ಲಿದ್ದೇವೆ. ರೈತರ ಬದುಕು ಹಾಲಿನಲ್ಲಿದೆ. ಅವರಿಗೆ ನ್ಯಾಯ ಕೊಡಲು ನಾವು ಪ್ರಯತ್ನಿಸುತ್ತೇವೆ ಎಂದರು.
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…