ತೀವ್ರ ಕುತೂಹಲ ಕೆರಳಿಸಿರುವ ಬೆಂಗಳೂರು ಹಾಲು ಒಕ್ಕೂಟದ (ಬಮೂಲ್) ಅಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆದಿದ್ದು, ಬಮೂಲ್ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಡಿ.ಕೆ ಸುರೇಶ್ ಇಂದು ಬಮೂಲ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಲು ನಾಮಪತ್ರ ಸಲ್ಲಿಸಿದ್ದರು. ಬೆಂಗಳೂರಿನ ಡೇರಿ ಸರ್ಕಲ್ನಲ್ಲಿರುವ ಬಮೂಲ್ ಕಚೇರಿಯಲ್ಲಿ ಚುನಾವಣಾಧಿಕಾರಿಗಳಿಗೆ ತಮ್ಮ ಉಮೇದುವಾರಿಕೆಯನ್ನು ದಾಖಲಿಸಿದ್ದರು. ಇದೀಗ ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಕ್ರಮ ಡಿಕೆ ಸಹೋದರರ ರಾಜಕೀಯ ತಂತ್ರಗಾರಿಕೆಯನ್ನು ಮತ್ತಷ್ಟು ಬಲಗೊಳಿಸಿದ್ದು, ಕೆಎಂಎಫ್ನಂತಹ ಪ್ರತಿಷ್ಠಿತ ಸಂಸ್ಥೆಯ ನಿಯಂತ್ರಣಕ್ಕೆ ಸ್ಪಷ್ಟ ದಾಪುಗಾಲಿಡುವಂತಿದೆ.
ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಮೂಲ್ ಸಂಸ್ಥೆಗೆ ಸುಮಾರು 65 ವರ್ಷಗಳ ಇತಿಹಾಸವಿದೆ. ಈ ಸಹಕಾರ ಸಂಸ್ಥೆಯನ್ನು ಉಳಿಸಿ ಬೆಳೆಸಬೇಕು. ಏನಾದರು ಹೊಸ ಬದಲಾವಣೆ ತರಲೆಂದು ರೈತರು ನಮ್ಮನ್ನು ಆಯ್ಕೆ ಮಾಡಿದ್ದಾರೆ. ಅವರ ಆಶಯದಂತೆ ರೈತರಿಗೆ ಅನುಕೂಲವಾಗುವ ಹೊಸ ಬದಲಾವಣೆ ತರಲು ಪ್ರಯತ್ನ ಪಡುತ್ತೇವೆ ಎಂದರು.
ಪರಿಸರ ಸ್ನೇಹಿ ಹಾಲಿನ ಪ್ಯಾಕೆಟ್ ನ್ನು ಕರ್ನಾಟಕ ಎಲ್ಲಾ ಭಾಗಗಳಿಗೂ ವಿಸ್ತರಣೆ ಮಾಡಬೇಕು ಎಂಬ ಚಿಂತನೆಯಲ್ಲಿದ್ದೇವೆ. ರೈತರ ಬದುಕು ಹಾಲಿನಲ್ಲಿದೆ. ಅವರಿಗೆ ನ್ಯಾಯ ಕೊಡಲು ನಾವು ಪ್ರಯತ್ನಿಸುತ್ತೇವೆ ಎಂದರು.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…