ಆಂಧ್ರಪ್ರದೇಶದ ಕರ್ನೂಲ್ನ ಬೆಂಗಳೂರು – ಹೈದರಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಇಡೀ ಬಸ್ ಬೆಂಕಿಗೆ ಆಹುತಿಯಾಗಿದೆ.
ಇದರ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರು ಮೃತಪಟ್ಟಿದ್ದಾರೆ.
ಹೈದರಾಬಾದ್ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಐಷಾರಾಮಿ ಬಸ್ ಕರ್ನೂಲ್ ಜಿಲ್ಲೆಯ ಚಿನ್ನತೆಕುರು ಗ್ರಾಮದ ಬಳಿ ಶುಕ್ರವಾರ ಬೆಳಗಿನ ಜಾವ 3.30ರ ಸುಮಾರಿಗೆ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿಗೆ ಆಹುತಿಯಾಗಿ 25ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ ಎಂದು ವರದಿಯಾಗಿದೆ.
ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಸುಮಾರು 40 ಪ್ರಯಾಣಿಕರನ್ನು ಹೊತ್ತಿದ್ದ ಈ ಸ್ಲೀಪರ್ ಕೋಚ್ ಬಸ್, ವಿರುದ್ಧ ದಿಕ್ಕಿನಿಂದ ಬಂದ ಮೋಟಾರ್ ಬೈಕ್ಗೆ ಡಿಕ್ಕಿ ಹೊಡೆದ ಕೂಡಲೇ ಬಸ್ನ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಕೆಲವೇ ಕ್ಷಣಗಳಲ್ಲಿ ಬೆಂಕಿ ವೇಗವಾಗಿ ಹರಡಿ ಇಂಧನ ಟ್ಯಾಂಕ್ ಸ್ಫೋಟಗೊಂಡಿದೆ. ಈ ಘಟನೆಯ ತೀವ್ರತೆಯಿಂದಾಗಿ ಬಸ್ ಕ್ಷಣಾರ್ಧದಲ್ಲಿ ಜ್ವಾಲೆಗಳಿಂದ ಕೂಡಿತ್ತು. ಬಸ್ನೊಳಗೆ ಗಾಢ ನಿದ್ದೆಯಲ್ಲಿದ್ದ ಪ್ರಯಾಣಿಕರು ಆಘಾತದಿಂದ ಎಚ್ಚರಗೊಂಡು, ಕಿರುಚಾಟ ಮತ್ತು ಗೊಂದಲದ ಮಧ್ಯೆ ಸಿಲುಕಿಕೊಂಡರು. ದಟ್ಟವಾದ ಹೊಗೆ ಮತ್ತು ಬೆಂಕಿಯಿಂದಾಗಿ ಹೊರಬರಲು ದಾರಿಯಿಲ್ಲದೆ ಅನೇಕರು ಬಸ್ನೊಳಗೆ ಸಿಲುಕಿಕೊಂಡರು. ಕೆಲವರು ತುರ್ತು ನಿರ್ಗಮನ ದ್ವಾರದ ಮೂಲಕ ತಪ್ಪಿಸಿಕೊಂಡರೂ, ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…