ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಗೆ ಜೂನ್ 30ರವರೆಗೆ ಅವಧಿ ವಿಸ್ತರಣೆ

ಕನಿಷ್ಟ ಬೆಂಬಲ ಯೋಜನೆಯಡಿ ನೊಂದಾಯಿತ ರೈತರಿಂದ ರಾಗಿ ಖರೀದಿ ಪ್ರಕ್ರಿಯೆಗೆ ಮಾರ್ಚ್ 01 ರಿಂದ ವಿದ್ಯುಕ್ತವಾಗಿ ಚಾಲನೆ ನೀಡಲಾಗಿದ್ದು, ಮಾರ್ಚ್ 03 ರಿಂದ ಜೂನ್ 30 ರವರೆಗೆ ರಾಗಿ ಖರೀದಿಯ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.

ಜಿಲ್ಲೆಯ ಎಲ್ಲಾ ತಾಲ್ಲೂಕು ಖರೀದಿ ಕೇಂದ್ರಗಳಲ್ಲಿ ರಾಗಿ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದ್ದು, ನೋಂದಾಯಿತ ರೈತರು ಸಂಬಂಧಪಟ್ಟ ತಾಲ್ಲೂಕುಗಳ ಖರೀದಿ ಕೇಂದ್ರಗಳಿಗೆ ರಾಗಿಯನ್ನು ನಿಯಮಾನುಸಾರ ನೀಡಬಹುದಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದ್ದಾರೆ.

2024-25 ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಮಾಡಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳಲ್ಲಿ ರಾಗಿ ಖರೀದಿ ಕೇಂದ್ರಗಳನ್ನು ತೆರೆದು, ರಾಗಿ ಬೆಳೆದಿರುವ ರೈತರಿಂದ ನಿಯಮಾನುಸಾರ ಅಗತ್ಯ ದಾಖಲೆಗಳನ್ನು ಪಡೆದು ನೊಂದಾಯಿಸಿಕೊಳ್ಳಲಾಗಿದೆ.

ರಾಗಿ ಖರೀದಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಖರೀದಿ ಏಜೆನ್ಸಿಯಾದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಖರೀದಿ ಅಧಿಕಾರಿಗಳಾದ ನೆಲಮಂಗಲ ತಾಲ್ಲೂಕು ಖರೀದಿ ಅಧಿಕಾರಿ ವೈ.ಎಸ್ ನಾರಾಯಣಮೂರ್ತಿ (9482991630), ದೊಡ್ಡಬಳ್ಳಾಪುರ ತಾಲ್ಲೂಕು ಖರೀದಿ ಅಧಿಕಾರಿ ಹೆಚ್.ಎನ್ ನಾರಾಯಣ್(9886141435), ದೇವನಹಳ್ಳಿ ತಾಲ್ಲೂಕು ಖರೀದಿ ಅಧಿಕಾರಿ ಎಂ.ಅಚ್ಯೂತ್(9900136687), ಹೊಸಕೋಟೆ ತಾಲ್ಲೂಕು ಖರೀದಿ ಅಧಿಕಾರಿ ಶಿವಕುಮಾರ್ (9880361514) ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

8 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago