ಬೆಂಬಲ ಬೆಲೆ ರಾಗಿ ಖರೀದಿ: ಹೆಜ್ಜೆ ಹೆಜ್ಜೆಗೂ ಅಧಿಕಾರಿಗಳಿಂದ ರೈತರಿಗೆ ಮೋಸ: ಬೇಜವಾಬ್ದಾರಿ ಅಧಿಕಾರಿಗಳ ಮೇಲೆ ಸುಮೊಟೋ ಕೇಸ್ ಫಿಕ್ಸ್

ನಗರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿರುವ ರಾಗಿ ಖರೀದಿ‌ ಕೇಂದ್ರ, ರಾಗಿ ತೂಕ ಹಾಕುವ ಕೇಂದ್ರ(Weighbridge) ಕೇಂದ್ರ, ಸರ್ಕಾರಿ ಆಸ್ಪತ್ರೆ ಬಳಿ ಇರುವ ಉಗ್ರಾಣ ಕೇಂದ್ರಕ್ಕೆ ಉಪಲೋಕಾಯುಕ್ತ ಬಿ.ವೀರಪ್ಪ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ‌ ವೇಳೆ ರೈತರು ತಮ್ಮ ಸಮಸ್ಯೆಗಳನ್ನು ಉಪಲೋಕಾಯುಕ್ತ ಬಿ.ವೀರಪ್ಪ ಅವರ ಬಳಿ ಹೇಳಿಕೊಂಡರು.

ಈ ವೇಳೆ ಪಬ್ಲಿಕ್ ಮಿರ್ಚಿ ನ್ಯೂಸ್ ವೆಬ್ ಸೈಟ್ ನೊಂದಿಗೆ ಮಾತನಾಡಿದ ಅವರು, ರೈತರ ಅನುಕೂಲಕ್ಕಾಗಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಗಾಗಿ ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಆವರಣದಲ್ಲಿ ಪ್ರಾರಂಭಿಸಿರುವ ನೋಂದಣಿ ಕೇಂದ್ರದಲ್ಲಿ ಅವ್ಯವಸ್ಥೆಗಳಿಂದ ತುಂಬಿ‌ ತುಳುಕುತ್ತಿದೆ. ಕುಡಿಯುವ ನೀರಿನ‌ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ, ತೂಕದಲ್ಲಿ ಮೋಸ, ಅಧಿಕಾರಿಗಳ ನಿರ್ಲಕ್ಷ್ಯತನದಿಂದ ರೈತರು ಪರದಾಡುತ್ತಿದ್ದಾರೆ ಎಂದು ಉಪಲೋಕಾಯುಕ್ತ ಬಿ.ವೀರಪ್ಪ ಕಿಡಿಕಾರಿದರು.

ರಾಗಿ ಖರೀದಿಗಾಗಿ ತೆರೆದಿರುವ ನೋಂದಣಿ ಕೇಂದ್ರದಲ್ಲಿ ನೋಂದಣಿಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು, ವೃದ್ಧರು, ಅಂಗವಿಕಲ ರೈತರು ಆಗಮಿಸುತ್ತಿದ್ದಾರೆ. ಇವರಿಗೆ ಸ್ಥಳದಲ್ಲಿ ಯಾವುದೇ ಸೂಕ್ತ ವ್ಯವಸ್ಥೆ ಮಾಡಿಲ್ಲ. ಖರೀದಿ ಪ್ರಕ್ರಿಯೆಯನ್ನು ವ್ಯವಸ್ಥಿತವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಹೆಚ್ಚುವರಿ ಅಧಿಕಾರಿಗಳನ್ನು ನಿಯೋಜಿಸಿಲ್ಲ. ರೈತರನ್ನು ಕಾಯಿಸದೆ ನೋಂದಣಿ ಕಾರ್ಯವನ್ನು ಚುರುಕುಗೊಳಿಸಿಲ್ಲ. ಸರ್ಕಾರ ನಿಗದಿಪಡಿಸಿದ ಮಾನದಂಡಗಳನ್ವಯ ರಾಗಿಯನ್ನು ಖರೀದಿಸುತ್ತಿಲ್ಲ ಎಂದು ಅಧಿಕಾರಿಗಳ ವಿರುದ್ಧ ಗರಂ ಆದರು.

ರಾಗಿ ತೂಕ ಹಾಕುವ ಕೇಂದ್ರ(Weighbridge)ದಲ್ಲಿ ತೂಕದಲ್ಲಿ ಏರುಪೇರು ಆಗಿ ರೈತರಿಗೆ ಮೋಸ ಮಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ರಾಗಿ ಉಗ್ರಾಣ ಕೇಂದ್ರದಲ್ಲಿ ಸರ್ಕಾರಿ ಚೀಲ 50ಕೆ.ಜಿ ಎಂದು ಇರುತ್ತದೆ. ಆದರೆ, ತೂಕ ಹಾಕಿದಾಗ 44, 42, 45, 48, 49 ಕೆ.ಜಿ ಬರುತ್ತಿದೆ ಎಂದರು.

ಅಧಿಕಾರಿಗಳ ಬೇಜವಾಬ್ದಾರಿ, ದಲ್ಲಾಳಿಗಳ ಹಾವಳಿಯಿಂದ ರೈತರಿಗೆ ಭಾರೀ ಮೋಸವಾಗುತ್ತಿದೆ. ರೈತರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಅಧಿಕಾರಿಗಳನ್ನು ಪ್ರಶ್ನೆ ಮಾಡಿದರೆ ಅವರ ಮೇಲೆ ಇವರು, ಇವರ ಮೇಲೆ ಅವರು ಹೇಳಿ ಕಡೆಗೆ ಅದಕ್ಕು  ನಮಗು ಯಾವ ಸಂಬಂಧವಿಲ್ಲ ಎಂದು ನುಣುಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ರೈತ ಬಿತ್ತನೆ ಬಿತ್ತಿ ಬೆಳೆ ಬೆಳೆದು ಮಾರಾಟ ಮಾಡುವವರಿಗೂ ಇಂತಹ ಅಧಿಕಾರಿಗಳಿಂದ ವಂಚನೆ ಒಳಗಾಗುತ್ತಿದ್ದಾನೆ‌. ಇಲ್ಲಿ ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ ಎಂದಾಗಿದೆ ಇಲ್ಲಿನ ಪರಿಸ್ಥಿತಿ. ಹೆಜ್ಜೆಹೆಜ್ಜೆಗೂ ರೈತರಿಗೆ ಅಧಿಕಾರಿಗಳು ತೊಂದರೆ ನೀಡುತ್ತಿದ್ದಾರೆ. ಬೇಜವಾಬ್ದಾರಿ ಅಧಿಕಾರಿಗಳ ವಿರುದ್ಧ ಸುಮಟೋ ಕೇಸ್ ದಾಖಲು ಮಾಡುತ್ತಾನೆ. ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಖಂಡಿತ ಕ್ರಮ ಜರುಗಿಸುತ್ತೇನೆ ಎಂದು ಹೇಳಿದರು.

ಸ್ಥಳದಲ್ಲಿ ಕುಡಿಯುವ ನೀರು, ಕುಳಿತುಕೊಳ್ಳಲು ಆಸನ ವ್ಯವಸ್ಥೆ, ಪುರುಷ,‌ ಮಹಿಳೆ, ಅಂಗವಿಕಲರಿಗಾಗಿ ಪ್ರತ್ಯೇಕ ಮೂರು ಬಯೋಮೆಟ್ರಿಕ್ ಕೌಂಟರ್ ವ್ಯವಸ್ಥೆ, ಶೌಚಾಲಯ ವ್ಯವಸ್ಥೆಯನ್ನು ಮೂರು ದಿನಗಳೊಳಗಾಗಿ ಮಾಡಿಸಬೇಕು ಎಂದು ತಾಕೀತು ಮಾಡಿದರು.

ತೂಕ ನಿಯಮಬದ್ಧವಾಗಿ ಹಾಕಬೇಕು, ರಾಗಿ ಚೀಲದ ತೂಕದಲ್ಲಿ ಮೋಸವಾಗಬಾರದು, ಸರ್ಕಾರದ ಯೋಜನೆಯನ್ನು ರೈತರಿಗೆ ಯಾವುದೇ ಅನ್ಯಾಯ ಮಾಡದೇ ರೈತರಿಗೆ ತಲುಪುವಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಬೆಂ.ಗ್ರಾ ಲೋಕಾಯುಕ್ತ ಎಸ್ಪಿ ಪವನ್ ನೆಜ್ಜೂರ್, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗಶ್ರೀ, ತಹಶೀಲ್ದಾರ್ ವಿಭಾ ವಿದ್ಯಾ ರಾಠೋಡ್, ಡಿವೈಎಸ್ಪಿ ವೆಂಕಟೇಶ್, ಇನ್ಸ್ ಪೆಕ್ಟರ್ ರಮೇಶ್, ಚಂದ್ರಕಾಂತ್, ನಂದಕುಮಾರ್, ಹಾಲಪ್ಪ ಬಾಲದಂಡಿ, ಉಮಾ‌ಮಹೇಶ್, ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

1 hour ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

2 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

3 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

4 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

6 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

12 hours ago