ಬೆಂಬಲ ಬೆಲೆ ರಾಗಿ ಖರೀದಿ: ಹೆಜ್ಜೆ ಹೆಜ್ಜೆಗೂ ಅಧಿಕಾರಿಗಳಿಂದ ರೈತರಿಗೆ ಮೋಸ: ಬೇಜವಾಬ್ದಾರಿ ಅಧಿಕಾರಿಗಳ ಮೇಲೆ ಸುಮೊಟೋ ಕೇಸ್ ಫಿಕ್ಸ್

ನಗರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿರುವ ರಾಗಿ ಖರೀದಿ‌ ಕೇಂದ್ರ, ರಾಗಿ ತೂಕ ಹಾಕುವ ಕೇಂದ್ರ(Weighbridge) ಕೇಂದ್ರ, ಸರ್ಕಾರಿ ಆಸ್ಪತ್ರೆ ಬಳಿ ಇರುವ ಉಗ್ರಾಣ ಕೇಂದ್ರಕ್ಕೆ ಉಪಲೋಕಾಯುಕ್ತ ಬಿ.ವೀರಪ್ಪ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ‌ ವೇಳೆ ರೈತರು ತಮ್ಮ ಸಮಸ್ಯೆಗಳನ್ನು ಉಪಲೋಕಾಯುಕ್ತ ಬಿ.ವೀರಪ್ಪ ಅವರ ಬಳಿ ಹೇಳಿಕೊಂಡರು.

ಈ ವೇಳೆ ಪಬ್ಲಿಕ್ ಮಿರ್ಚಿ ನ್ಯೂಸ್ ವೆಬ್ ಸೈಟ್ ನೊಂದಿಗೆ ಮಾತನಾಡಿದ ಅವರು, ರೈತರ ಅನುಕೂಲಕ್ಕಾಗಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಗಾಗಿ ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಆವರಣದಲ್ಲಿ ಪ್ರಾರಂಭಿಸಿರುವ ನೋಂದಣಿ ಕೇಂದ್ರದಲ್ಲಿ ಅವ್ಯವಸ್ಥೆಗಳಿಂದ ತುಂಬಿ‌ ತುಳುಕುತ್ತಿದೆ. ಕುಡಿಯುವ ನೀರಿನ‌ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ, ತೂಕದಲ್ಲಿ ಮೋಸ, ಅಧಿಕಾರಿಗಳ ನಿರ್ಲಕ್ಷ್ಯತನದಿಂದ ರೈತರು ಪರದಾಡುತ್ತಿದ್ದಾರೆ ಎಂದು ಉಪಲೋಕಾಯುಕ್ತ ಬಿ.ವೀರಪ್ಪ ಕಿಡಿಕಾರಿದರು.

ರಾಗಿ ಖರೀದಿಗಾಗಿ ತೆರೆದಿರುವ ನೋಂದಣಿ ಕೇಂದ್ರದಲ್ಲಿ ನೋಂದಣಿಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು, ವೃದ್ಧರು, ಅಂಗವಿಕಲ ರೈತರು ಆಗಮಿಸುತ್ತಿದ್ದಾರೆ. ಇವರಿಗೆ ಸ್ಥಳದಲ್ಲಿ ಯಾವುದೇ ಸೂಕ್ತ ವ್ಯವಸ್ಥೆ ಮಾಡಿಲ್ಲ. ಖರೀದಿ ಪ್ರಕ್ರಿಯೆಯನ್ನು ವ್ಯವಸ್ಥಿತವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಹೆಚ್ಚುವರಿ ಅಧಿಕಾರಿಗಳನ್ನು ನಿಯೋಜಿಸಿಲ್ಲ. ರೈತರನ್ನು ಕಾಯಿಸದೆ ನೋಂದಣಿ ಕಾರ್ಯವನ್ನು ಚುರುಕುಗೊಳಿಸಿಲ್ಲ. ಸರ್ಕಾರ ನಿಗದಿಪಡಿಸಿದ ಮಾನದಂಡಗಳನ್ವಯ ರಾಗಿಯನ್ನು ಖರೀದಿಸುತ್ತಿಲ್ಲ ಎಂದು ಅಧಿಕಾರಿಗಳ ವಿರುದ್ಧ ಗರಂ ಆದರು.

ರಾಗಿ ತೂಕ ಹಾಕುವ ಕೇಂದ್ರ(Weighbridge)ದಲ್ಲಿ ತೂಕದಲ್ಲಿ ಏರುಪೇರು ಆಗಿ ರೈತರಿಗೆ ಮೋಸ ಮಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ರಾಗಿ ಉಗ್ರಾಣ ಕೇಂದ್ರದಲ್ಲಿ ಸರ್ಕಾರಿ ಚೀಲ 50ಕೆ.ಜಿ ಎಂದು ಇರುತ್ತದೆ. ಆದರೆ, ತೂಕ ಹಾಕಿದಾಗ 44, 42, 45, 48, 49 ಕೆ.ಜಿ ಬರುತ್ತಿದೆ ಎಂದರು.

ಅಧಿಕಾರಿಗಳ ಬೇಜವಾಬ್ದಾರಿ, ದಲ್ಲಾಳಿಗಳ ಹಾವಳಿಯಿಂದ ರೈತರಿಗೆ ಭಾರೀ ಮೋಸವಾಗುತ್ತಿದೆ. ರೈತರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಅಧಿಕಾರಿಗಳನ್ನು ಪ್ರಶ್ನೆ ಮಾಡಿದರೆ ಅವರ ಮೇಲೆ ಇವರು, ಇವರ ಮೇಲೆ ಅವರು ಹೇಳಿ ಕಡೆಗೆ ಅದಕ್ಕು  ನಮಗು ಯಾವ ಸಂಬಂಧವಿಲ್ಲ ಎಂದು ನುಣುಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ರೈತ ಬಿತ್ತನೆ ಬಿತ್ತಿ ಬೆಳೆ ಬೆಳೆದು ಮಾರಾಟ ಮಾಡುವವರಿಗೂ ಇಂತಹ ಅಧಿಕಾರಿಗಳಿಂದ ವಂಚನೆ ಒಳಗಾಗುತ್ತಿದ್ದಾನೆ‌. ಇಲ್ಲಿ ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ ಎಂದಾಗಿದೆ ಇಲ್ಲಿನ ಪರಿಸ್ಥಿತಿ. ಹೆಜ್ಜೆಹೆಜ್ಜೆಗೂ ರೈತರಿಗೆ ಅಧಿಕಾರಿಗಳು ತೊಂದರೆ ನೀಡುತ್ತಿದ್ದಾರೆ. ಬೇಜವಾಬ್ದಾರಿ ಅಧಿಕಾರಿಗಳ ವಿರುದ್ಧ ಸುಮಟೋ ಕೇಸ್ ದಾಖಲು ಮಾಡುತ್ತಾನೆ. ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಖಂಡಿತ ಕ್ರಮ ಜರುಗಿಸುತ್ತೇನೆ ಎಂದು ಹೇಳಿದರು.

ಸ್ಥಳದಲ್ಲಿ ಕುಡಿಯುವ ನೀರು, ಕುಳಿತುಕೊಳ್ಳಲು ಆಸನ ವ್ಯವಸ್ಥೆ, ಪುರುಷ,‌ ಮಹಿಳೆ, ಅಂಗವಿಕಲರಿಗಾಗಿ ಪ್ರತ್ಯೇಕ ಮೂರು ಬಯೋಮೆಟ್ರಿಕ್ ಕೌಂಟರ್ ವ್ಯವಸ್ಥೆ, ಶೌಚಾಲಯ ವ್ಯವಸ್ಥೆಯನ್ನು ಮೂರು ದಿನಗಳೊಳಗಾಗಿ ಮಾಡಿಸಬೇಕು ಎಂದು ತಾಕೀತು ಮಾಡಿದರು.

ತೂಕ ನಿಯಮಬದ್ಧವಾಗಿ ಹಾಕಬೇಕು, ರಾಗಿ ಚೀಲದ ತೂಕದಲ್ಲಿ ಮೋಸವಾಗಬಾರದು, ಸರ್ಕಾರದ ಯೋಜನೆಯನ್ನು ರೈತರಿಗೆ ಯಾವುದೇ ಅನ್ಯಾಯ ಮಾಡದೇ ರೈತರಿಗೆ ತಲುಪುವಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಬೆಂ.ಗ್ರಾ ಲೋಕಾಯುಕ್ತ ಎಸ್ಪಿ ಪವನ್ ನೆಜ್ಜೂರ್, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗಶ್ರೀ, ತಹಶೀಲ್ದಾರ್ ವಿಭಾ ವಿದ್ಯಾ ರಾಠೋಡ್, ಡಿವೈಎಸ್ಪಿ ವೆಂಕಟೇಶ್, ಇನ್ಸ್ ಪೆಕ್ಟರ್ ರಮೇಶ್, ಚಂದ್ರಕಾಂತ್, ನಂದಕುಮಾರ್, ಹಾಲಪ್ಪ ಬಾಲದಂಡಿ, ಉಮಾ‌ಮಹೇಶ್, ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

11 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

11 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

19 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

1 day ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

2 days ago