ನಗರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿರುವ ರಾಗಿ ಖರೀದಿ ಕೇಂದ್ರ, ರಾಗಿ ತೂಕ ಹಾಕುವ ಕೇಂದ್ರ(Weighbridge) ಕೇಂದ್ರ, ಸರ್ಕಾರಿ ಆಸ್ಪತ್ರೆ ಬಳಿ ಇರುವ ಉಗ್ರಾಣ ಕೇಂದ್ರಕ್ಕೆ ಉಪಲೋಕಾಯುಕ್ತ ಬಿ.ವೀರಪ್ಪ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ರೈತರು ತಮ್ಮ ಸಮಸ್ಯೆಗಳನ್ನು ಉಪಲೋಕಾಯುಕ್ತ ಬಿ.ವೀರಪ್ಪ ಅವರ ಬಳಿ ಹೇಳಿಕೊಂಡರು.
ಈ ವೇಳೆ ಪಬ್ಲಿಕ್ ಮಿರ್ಚಿ ನ್ಯೂಸ್ ವೆಬ್ ಸೈಟ್ ನೊಂದಿಗೆ ಮಾತನಾಡಿದ ಅವರು, ರೈತರ ಅನುಕೂಲಕ್ಕಾಗಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಗಾಗಿ ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಆವರಣದಲ್ಲಿ ಪ್ರಾರಂಭಿಸಿರುವ ನೋಂದಣಿ ಕೇಂದ್ರದಲ್ಲಿ ಅವ್ಯವಸ್ಥೆಗಳಿಂದ ತುಂಬಿ ತುಳುಕುತ್ತಿದೆ. ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ, ತೂಕದಲ್ಲಿ ಮೋಸ, ಅಧಿಕಾರಿಗಳ ನಿರ್ಲಕ್ಷ್ಯತನದಿಂದ ರೈತರು ಪರದಾಡುತ್ತಿದ್ದಾರೆ ಎಂದು ಉಪಲೋಕಾಯುಕ್ತ ಬಿ.ವೀರಪ್ಪ ಕಿಡಿಕಾರಿದರು.
ರಾಗಿ ಖರೀದಿಗಾಗಿ ತೆರೆದಿರುವ ನೋಂದಣಿ ಕೇಂದ್ರದಲ್ಲಿ ನೋಂದಣಿಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು, ವೃದ್ಧರು, ಅಂಗವಿಕಲ ರೈತರು ಆಗಮಿಸುತ್ತಿದ್ದಾರೆ. ಇವರಿಗೆ ಸ್ಥಳದಲ್ಲಿ ಯಾವುದೇ ಸೂಕ್ತ ವ್ಯವಸ್ಥೆ ಮಾಡಿಲ್ಲ. ಖರೀದಿ ಪ್ರಕ್ರಿಯೆಯನ್ನು ವ್ಯವಸ್ಥಿತವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಹೆಚ್ಚುವರಿ ಅಧಿಕಾರಿಗಳನ್ನು ನಿಯೋಜಿಸಿಲ್ಲ. ರೈತರನ್ನು ಕಾಯಿಸದೆ ನೋಂದಣಿ ಕಾರ್ಯವನ್ನು ಚುರುಕುಗೊಳಿಸಿಲ್ಲ. ಸರ್ಕಾರ ನಿಗದಿಪಡಿಸಿದ ಮಾನದಂಡಗಳನ್ವಯ ರಾಗಿಯನ್ನು ಖರೀದಿಸುತ್ತಿಲ್ಲ ಎಂದು ಅಧಿಕಾರಿಗಳ ವಿರುದ್ಧ ಗರಂ ಆದರು.
ರಾಗಿ ತೂಕ ಹಾಕುವ ಕೇಂದ್ರ(Weighbridge)ದಲ್ಲಿ ತೂಕದಲ್ಲಿ ಏರುಪೇರು ಆಗಿ ರೈತರಿಗೆ ಮೋಸ ಮಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ರಾಗಿ ಉಗ್ರಾಣ ಕೇಂದ್ರದಲ್ಲಿ ಸರ್ಕಾರಿ ಚೀಲ 50ಕೆ.ಜಿ ಎಂದು ಇರುತ್ತದೆ. ಆದರೆ, ತೂಕ ಹಾಕಿದಾಗ 44, 42, 45, 48, 49 ಕೆ.ಜಿ ಬರುತ್ತಿದೆ ಎಂದರು.
ಅಧಿಕಾರಿಗಳ ಬೇಜವಾಬ್ದಾರಿ, ದಲ್ಲಾಳಿಗಳ ಹಾವಳಿಯಿಂದ ರೈತರಿಗೆ ಭಾರೀ ಮೋಸವಾಗುತ್ತಿದೆ. ರೈತರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಅಧಿಕಾರಿಗಳನ್ನು ಪ್ರಶ್ನೆ ಮಾಡಿದರೆ ಅವರ ಮೇಲೆ ಇವರು, ಇವರ ಮೇಲೆ ಅವರು ಹೇಳಿ ಕಡೆಗೆ ಅದಕ್ಕು ನಮಗು ಯಾವ ಸಂಬಂಧವಿಲ್ಲ ಎಂದು ನುಣುಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ರೈತ ಬಿತ್ತನೆ ಬಿತ್ತಿ ಬೆಳೆ ಬೆಳೆದು ಮಾರಾಟ ಮಾಡುವವರಿಗೂ ಇಂತಹ ಅಧಿಕಾರಿಗಳಿಂದ ವಂಚನೆ ಒಳಗಾಗುತ್ತಿದ್ದಾನೆ. ಇಲ್ಲಿ ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ ಎಂದಾಗಿದೆ ಇಲ್ಲಿನ ಪರಿಸ್ಥಿತಿ. ಹೆಜ್ಜೆಹೆಜ್ಜೆಗೂ ರೈತರಿಗೆ ಅಧಿಕಾರಿಗಳು ತೊಂದರೆ ನೀಡುತ್ತಿದ್ದಾರೆ. ಬೇಜವಾಬ್ದಾರಿ ಅಧಿಕಾರಿಗಳ ವಿರುದ್ಧ ಸುಮಟೋ ಕೇಸ್ ದಾಖಲು ಮಾಡುತ್ತಾನೆ. ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಖಂಡಿತ ಕ್ರಮ ಜರುಗಿಸುತ್ತೇನೆ ಎಂದು ಹೇಳಿದರು.
ತೂಕ ನಿಯಮಬದ್ಧವಾಗಿ ಹಾಕಬೇಕು, ರಾಗಿ ಚೀಲದ ತೂಕದಲ್ಲಿ ಮೋಸವಾಗಬಾರದು, ಸರ್ಕಾರದ ಯೋಜನೆಯನ್ನು ರೈತರಿಗೆ ಯಾವುದೇ ಅನ್ಯಾಯ ಮಾಡದೇ ರೈತರಿಗೆ ತಲುಪುವಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಬೆಂ.ಗ್ರಾ ಲೋಕಾಯುಕ್ತ ಎಸ್ಪಿ ಪವನ್ ನೆಜ್ಜೂರ್, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗಶ್ರೀ, ತಹಶೀಲ್ದಾರ್ ವಿಭಾ ವಿದ್ಯಾ ರಾಠೋಡ್, ಡಿವೈಎಸ್ಪಿ ವೆಂಕಟೇಶ್, ಇನ್ಸ್ ಪೆಕ್ಟರ್ ರಮೇಶ್, ಚಂದ್ರಕಾಂತ್, ನಂದಕುಮಾರ್, ಹಾಲಪ್ಪ ಬಾಲದಂಡಿ, ಉಮಾಮಹೇಶ್, ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…