ಬೆಂಬಲ ಬೆಲೆ ರಾಗಿ ಖರೀದಿ: ಹೆಜ್ಜೆ ಹೆಜ್ಜೆಗೂ ಅಧಿಕಾರಿಗಳಿಂದ ರೈತರಿಗೆ ಮೋಸ: ಬೇಜವಾಬ್ದಾರಿ ಅಧಿಕಾರಿಗಳ ಮೇಲೆ ಸುಮೊಟೋ ಕೇಸ್ ಫಿಕ್ಸ್

ನಗರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿರುವ ರಾಗಿ ಖರೀದಿ‌ ಕೇಂದ್ರ, ರಾಗಿ ತೂಕ ಹಾಕುವ ಕೇಂದ್ರ(Weighbridge) ಕೇಂದ್ರ, ಸರ್ಕಾರಿ ಆಸ್ಪತ್ರೆ ಬಳಿ ಇರುವ ಉಗ್ರಾಣ ಕೇಂದ್ರಕ್ಕೆ ಉಪಲೋಕಾಯುಕ್ತ ಬಿ.ವೀರಪ್ಪ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ‌ ವೇಳೆ ರೈತರು ತಮ್ಮ ಸಮಸ್ಯೆಗಳನ್ನು ಉಪಲೋಕಾಯುಕ್ತ ಬಿ.ವೀರಪ್ಪ ಅವರ ಬಳಿ ಹೇಳಿಕೊಂಡರು.

ಈ ವೇಳೆ ಪಬ್ಲಿಕ್ ಮಿರ್ಚಿ ನ್ಯೂಸ್ ವೆಬ್ ಸೈಟ್ ನೊಂದಿಗೆ ಮಾತನಾಡಿದ ಅವರು, ರೈತರ ಅನುಕೂಲಕ್ಕಾಗಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಗಾಗಿ ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಆವರಣದಲ್ಲಿ ಪ್ರಾರಂಭಿಸಿರುವ ನೋಂದಣಿ ಕೇಂದ್ರದಲ್ಲಿ ಅವ್ಯವಸ್ಥೆಗಳಿಂದ ತುಂಬಿ‌ ತುಳುಕುತ್ತಿದೆ. ಕುಡಿಯುವ ನೀರಿನ‌ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ, ತೂಕದಲ್ಲಿ ಮೋಸ, ಅಧಿಕಾರಿಗಳ ನಿರ್ಲಕ್ಷ್ಯತನದಿಂದ ರೈತರು ಪರದಾಡುತ್ತಿದ್ದಾರೆ ಎಂದು ಉಪಲೋಕಾಯುಕ್ತ ಬಿ.ವೀರಪ್ಪ ಕಿಡಿಕಾರಿದರು.

ರಾಗಿ ಖರೀದಿಗಾಗಿ ತೆರೆದಿರುವ ನೋಂದಣಿ ಕೇಂದ್ರದಲ್ಲಿ ನೋಂದಣಿಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು, ವೃದ್ಧರು, ಅಂಗವಿಕಲ ರೈತರು ಆಗಮಿಸುತ್ತಿದ್ದಾರೆ. ಇವರಿಗೆ ಸ್ಥಳದಲ್ಲಿ ಯಾವುದೇ ಸೂಕ್ತ ವ್ಯವಸ್ಥೆ ಮಾಡಿಲ್ಲ. ಖರೀದಿ ಪ್ರಕ್ರಿಯೆಯನ್ನು ವ್ಯವಸ್ಥಿತವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಹೆಚ್ಚುವರಿ ಅಧಿಕಾರಿಗಳನ್ನು ನಿಯೋಜಿಸಿಲ್ಲ. ರೈತರನ್ನು ಕಾಯಿಸದೆ ನೋಂದಣಿ ಕಾರ್ಯವನ್ನು ಚುರುಕುಗೊಳಿಸಿಲ್ಲ. ಸರ್ಕಾರ ನಿಗದಿಪಡಿಸಿದ ಮಾನದಂಡಗಳನ್ವಯ ರಾಗಿಯನ್ನು ಖರೀದಿಸುತ್ತಿಲ್ಲ ಎಂದು ಅಧಿಕಾರಿಗಳ ವಿರುದ್ಧ ಗರಂ ಆದರು.

ರಾಗಿ ತೂಕ ಹಾಕುವ ಕೇಂದ್ರ(Weighbridge)ದಲ್ಲಿ ತೂಕದಲ್ಲಿ ಏರುಪೇರು ಆಗಿ ರೈತರಿಗೆ ಮೋಸ ಮಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ರಾಗಿ ಉಗ್ರಾಣ ಕೇಂದ್ರದಲ್ಲಿ ಸರ್ಕಾರಿ ಚೀಲ 50ಕೆ.ಜಿ ಎಂದು ಇರುತ್ತದೆ. ಆದರೆ, ತೂಕ ಹಾಕಿದಾಗ 44, 42, 45, 48, 49 ಕೆ.ಜಿ ಬರುತ್ತಿದೆ ಎಂದರು.

ಅಧಿಕಾರಿಗಳ ಬೇಜವಾಬ್ದಾರಿ, ದಲ್ಲಾಳಿಗಳ ಹಾವಳಿಯಿಂದ ರೈತರಿಗೆ ಭಾರೀ ಮೋಸವಾಗುತ್ತಿದೆ. ರೈತರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಅಧಿಕಾರಿಗಳನ್ನು ಪ್ರಶ್ನೆ ಮಾಡಿದರೆ ಅವರ ಮೇಲೆ ಇವರು, ಇವರ ಮೇಲೆ ಅವರು ಹೇಳಿ ಕಡೆಗೆ ಅದಕ್ಕು  ನಮಗು ಯಾವ ಸಂಬಂಧವಿಲ್ಲ ಎಂದು ನುಣುಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ರೈತ ಬಿತ್ತನೆ ಬಿತ್ತಿ ಬೆಳೆ ಬೆಳೆದು ಮಾರಾಟ ಮಾಡುವವರಿಗೂ ಇಂತಹ ಅಧಿಕಾರಿಗಳಿಂದ ವಂಚನೆ ಒಳಗಾಗುತ್ತಿದ್ದಾನೆ‌. ಇಲ್ಲಿ ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ ಎಂದಾಗಿದೆ ಇಲ್ಲಿನ ಪರಿಸ್ಥಿತಿ. ಹೆಜ್ಜೆಹೆಜ್ಜೆಗೂ ರೈತರಿಗೆ ಅಧಿಕಾರಿಗಳು ತೊಂದರೆ ನೀಡುತ್ತಿದ್ದಾರೆ. ಬೇಜವಾಬ್ದಾರಿ ಅಧಿಕಾರಿಗಳ ವಿರುದ್ಧ ಸುಮಟೋ ಕೇಸ್ ದಾಖಲು ಮಾಡುತ್ತಾನೆ. ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಖಂಡಿತ ಕ್ರಮ ಜರುಗಿಸುತ್ತೇನೆ ಎಂದು ಹೇಳಿದರು.

ಸ್ಥಳದಲ್ಲಿ ಕುಡಿಯುವ ನೀರು, ಕುಳಿತುಕೊಳ್ಳಲು ಆಸನ ವ್ಯವಸ್ಥೆ, ಪುರುಷ,‌ ಮಹಿಳೆ, ಅಂಗವಿಕಲರಿಗಾಗಿ ಪ್ರತ್ಯೇಕ ಮೂರು ಬಯೋಮೆಟ್ರಿಕ್ ಕೌಂಟರ್ ವ್ಯವಸ್ಥೆ, ಶೌಚಾಲಯ ವ್ಯವಸ್ಥೆಯನ್ನು ಮೂರು ದಿನಗಳೊಳಗಾಗಿ ಮಾಡಿಸಬೇಕು ಎಂದು ತಾಕೀತು ಮಾಡಿದರು.

ತೂಕ ನಿಯಮಬದ್ಧವಾಗಿ ಹಾಕಬೇಕು, ರಾಗಿ ಚೀಲದ ತೂಕದಲ್ಲಿ ಮೋಸವಾಗಬಾರದು, ಸರ್ಕಾರದ ಯೋಜನೆಯನ್ನು ರೈತರಿಗೆ ಯಾವುದೇ ಅನ್ಯಾಯ ಮಾಡದೇ ರೈತರಿಗೆ ತಲುಪುವಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಬೆಂ.ಗ್ರಾ ಲೋಕಾಯುಕ್ತ ಎಸ್ಪಿ ಪವನ್ ನೆಜ್ಜೂರ್, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗಶ್ರೀ, ತಹಶೀಲ್ದಾರ್ ವಿಭಾ ವಿದ್ಯಾ ರಾಠೋಡ್, ಡಿವೈಎಸ್ಪಿ ವೆಂಕಟೇಶ್, ಇನ್ಸ್ ಪೆಕ್ಟರ್ ರಮೇಶ್, ಚಂದ್ರಕಾಂತ್, ನಂದಕುಮಾರ್, ಹಾಲಪ್ಪ ಬಾಲದಂಡಿ, ಉಮಾ‌ಮಹೇಶ್, ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

15 hours ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

18 hours ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

24 hours ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

1 day ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

2 days ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

2 days ago