ಬೆಂ.ಗ್ರಾಜಿಲ್ಲೆಯಲ್ಲಿ 49559.57 ಹೆಕ್ಟೇರ್ ಬೆಳೆಹಾನಿ

ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಎದುರಾಗಿರುವ ತೀವ್ರ ಬರ ಪರಿಸ್ಥಿತಿಯನ್ನು ಕೇಂದ್ರ ಜಲ ಆಯೋಗದ ನಿರ್ದೇಶಕರಾದ ಅಶೋಕ್ ಕುಮಾರ್ ವಿ, ಎಂ.ಎನ್.ಸಿ.ಎಫ್.ಸಿ ಯ ಉಪನಿರ್ದೇಶಕ ಕರಣ್ ಚೌಧರಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧೀನ ಕಾರ್ಯದರ್ಶಿ ಸಂಗೀತ್ ಕುಮಾರ್, ರಾಜ್ಯ ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರದ ಹಿರಿಯ ಸಲಹೆಗಾರರಾದ ಡಾ.ಜಿ.ಎಸ್ ಶ್ರೀನಿವಾಸ ರೆಡ್ಡಿ ನೇತೃತ್ವದ ತಂಡವು ಇಂದು ಪರಿಶೀಲಿಸಿತು.

ಬೀರಸಂದ್ರದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೊದಲಿಗೆ ವಿಶ್ವನಾಥಪುರ ಬಳಿಯ ರೈತರ ಜಮೀನಿನಲ್ಲಿ ರಾಗಿ ಬೆಳೆಹಾನಿಯನ್ನು ವೀಕ್ಷಣೆ ಪ್ರಾರಂಭ ಮಾಡಲಾಯಿತು. ಮಳೆ ಇಲ್ಲದೆ ತೆನೆ ಬರದ ರಾಗಿ ಬೆಳೆ ಕುರಿತು ರೈತರು ಅಳಲು ತೋಡಿಕೊಂಡರು. ಅಂತರ್ಜಲ ಬತ್ತಿರುವ ಕಾರಣ ಕಲ್ಲು ಬಾವಿಯಲ್ಲಿ ನೀರಿಲ್ಲ, ಸಾವಿರ ಅಡಿ ಕೊರೆದರೂ ಕೊಳವೆ ಬಾವಿಯಲ್ಲಿ ನೀರಿಲ್ಲ ಎಂದು ರೈತರು ಸಮಸ್ಯೆ ವಿವರಿಸಿದರು.

ತಂಡದ ಮುಖ್ಯಸ್ಥರು ಹಾಗೂ ಸದಸ್ಯರು ಸ್ವತಃ ರೈತರೊಂದಿಗೆ ಚರ್ಚಿಸಿ, ಬೆಳೆಹಾನಿಯ ಕುರಿತು ಮಾಹಿತಿ ಸಂಗ್ರಹಿಸಿದರು.

ನಂತರ ದೊಡ್ಡಬಳ್ಳಾಪುರ ತಾಲ್ಲೂಕಿನ ಕೋಳೂರು ಹಾಗೂ ಹೊನ್ನಘಟ್ಟ ಗ್ರಾಮಗಳಲ್ಲಿ ರಾಗಿ, ನವಣೆ, ಮುಸುಕಿನ ಜೋಳ ಬೆಳೆ ಹಾನಿ ವೀಕ್ಷಿಸಿದರು.

ಕೋಳೂರು ರೈತರು ಮಾತನಾಡಿ ರಾಗಿ ಬೆಳೆಗೆ ಬೀಜ, ಬಿತ್ತನೆ, ರಸಗೊಬ್ಬರ ಸೇರಿದಂತೆ ಎಕರೆಗೆ 30,000 ಸಾವಿರ ಅಧಿಕ ಖರ್ಚು ಮಾಡಲಾಗಿದೆ, ಮಳೆ ಇಲ್ಲದೆ ಎರಡು ಬಾರಿ ಬಿತ್ತನೆ ಮಾಡಲಾಗಿದೆ ಎಂದು ಅಳಲು ತೋಡಿಕೊಂಡರು. ಮುಸುಕಿನ ಜೋಳ ಬೆಳೆಗೆ 25000 ಖರ್ಚು ಮಾಡಲಾಗಿದೆ. ಬೆಳೆ ಹಾನಿಯಾಗಿರುವುದರಿಂದ ಸಂಕಷ್ಟಕ್ಕೆ ಸಿಲುಕಿದ್ದೇವೆ ಎಂದು ರೈತರು ಸಮಸ್ಯೆ ವಿವರಿಸಿದರು. ನೆಲಮಂಗಲದ ಸೀರಗಾನಹಳ್ಳಿಯಲ್ಲಿ ರಾಗಿ ಬೆಳೆ ವೀಕ್ಷಿಸಿದರು.

ಮಳೆಕೊರತೆಯಿಂದ ಬೆಳೆಯು ಸಂಪೂರ್ಣ ಹಾನಿಯಾಗಿದೆ. ಸ್ಚಲ್ಪ ಮಳೆಯಾಗಿರುವುದರಿಂದ ಹಸಿರು ಕಾಣಿಸುತ್ತಿದೆ. ಆದರೆ ಇಳುವರಿ ಇಲ್ಲ ಎಂದು ರೈತರು ಹೇಳಿದರು.

ಕೇಂದ್ರ ಅಧ್ಯಯನ ತಂಡದ ಮುಖ್ಯಸ್ಥರು, ಬೆಳೆವಿಮೆ ಪಾವತಿ, ಬೀಜ-ಗೊಬ್ಬರ, ಕೃಷಿ ಕೂಲಿಕಾರರ ಖರ್ಚು-ವೆಚ್ಚಗಳ ಬಗ್ಗೆ ಸ್ವತಃ ರೈತರಿಂದಲೇ ಮಾಹಿತಿಯನ್ನು ಪಡೆದುಕೊಂಡರು.

ಜಿಲ್ಲೆಯಲ್ಲಿ 49559.57 ಹೆಕ್ಟೇರ್ ಬೆಳೆಹಾನಿ: 

ಜಿಲ್ಲೆಯಲ್ಲಿ ಮಳೆಕೊರತೆಯಿಂದ  49559.57 ಹೆಕ್ಟೇರ್ ಬೆಳೆಹಾನಿಯಾಗಿದೆ. ಈ ಕುರಿತು ಸಮಗ್ರ ಮಾಹಿತಿ ಹಾಗೂ ಛಾಯಾಚಿತ್ರಗಳ ಮೂಲಕ ಪ್ರಾತ್ಯಕ್ಷಿಕೆ ನೀಡಲಾಗಿದೆ. ವಾಸ್ತವದಲ್ಲಿ ಕೃಷಿ ಹಾಗೂ ತೋಟಗಾರಿಕೆ ಸೇರಿದಂತೆ ಅಪಾರ ಬೆಳೆಹಾನಿಯಾಗಿದೆ. ಆದರೆ ಎನ್.ಡಿ.ಆರ್.ಎಫ್. ಮಾರ್ಗಸೂಚಿ ಪ್ರಕಾರ 85 ಕೋಟಿ ಆಗಲಿದೆ. ಈ ಕುರಿತು ಈಗಾಗಲೇ ಕೇಂದ್ರ ಸರಕಾರಕ್ಕೆ ಮನವಿತ್ರ ಸಲ್ಲಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಅವರು ತಿಳಿಸಿದರು.

ರಾಗಿ 460003.44 ಹೆಕ್ಟೇರ್, ಮುಸುಕಿನ ಜೋಳ 3477.68 ಹೆಕ್ಟೇರ್, ತೊಗರಿ 68.95 ಹೆಕ್ಟೇರ್, ನೆಲಗಡಲೆ 9.50 ಹೆಕ್ಟೇರ್ ಸೇರಿದಂತೆ ಒಟ್ಟು 49559.57 ಹೆಕ್ಟೇರ್ ಪ್ರದೇಶದಲ್ಲಿ ವಿವಿಧ ಬಗೆಯ ಬೆಳೆಗಳು ಹಾನಿಯಾಗಿರುತ್ತವೆ ಎಂದು ತಿಳಿಸಿದರು.

ಬರ ಪರಿಸ್ಥಿತಿ-ಕೇಂದ್ರ ತಂಡಕ್ಕೆ ಮನವರಿಕೆ

ಜಿಲ್ಲೆಯ ಬರ ಪರಿಸ್ಥಿತಿಯ ಅಧ್ಯಯನಕ್ಕಾಗಿ ಆಗಮಿಸಿರುವ  ಕೇಂದ್ರ ತಂಡಕ್ಕೆ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಅವರು ಅಂಕಿ-ಅಂಶಗಳು ಮತ್ತು ಛಾಯಾಚಿತ್ರ ಸಮೇತ ಮಾಹಿತಿಯನ್ನು ಬರಪರಿಸ್ಥಿತಿಯನ್ನು ಮನವರಿಕೆ ಮಾಡಿದರು.

ಜಿಲ್ಲೆಯ ಎಲ್ಲಾ ನಾಲ್ಕು ತಾಲ್ಲೂಕುಗಳಲ್ಲಿ ಬಿತ್ತನೆ ಸಂದರ್ಭದಲ್ಲಿ ಮೂರು ವಾರಕ್ಕಿಂತ ಹೆಚ್ಚು ಅವಧಿಯವರೆಗೆ ಮಳೆಯಾಗಿರಲಿಲ್ಲ. ಆದ್ದರಿಂದ ಬರ‌ ಪರಿಸ್ಥಿತಿ ಎದುರಾಗಿದೆ. ಜಿಲ್ಲೆಯ ನಾಲ್ಕು ತಾಲ್ಲೂಕುಗಳನ್ನು ಬರಪೀಡಿತ ಎಂದು ಸರಕಾರ ಘೋಷಿಸಿದೆ. ಜೂನ್ ಮಾಹೆಯಲ್ಲಿ ಮಳೆ ಬಾರದಿರುವುದರಿಂದ ಯಾವುದೇ ರೀತಿಯ ಬಿತ್ತನೆಕಾರ್ಯ ಆರಂಭಗೊಳ್ಳಲಿಲ್ಲ. ಜುಲೈ ಮೊದಲ ಮೂರು ವಾರ ಮಳೆ ಬಂದಿರಲಿಲ್ಲ, ಕೊನೆಯ ವಾರದಲ್ಲಿ ಮಾತ್ರ ಮಳೆಯಾಗಿದ್ದರಿಂದ ಆಗ ಬಿತ್ತನೆಕಾರ್ಯ ಆರಂಭಗೊಂಡಿತು ಎಂದರು.

 

ಆಗಸ್ಟ್ ಮಾಹೆಯಲ್ಲೂ ಮಳೆಕೊರತೆಯಾಗಿದ್ದರಿಂದ ರಾಜ್ಯ ಸರಕಾರವು ಬರ ಪರಿಸ್ಥಿತಿಯನ್ನು ಘೋಷಿಸಿತು ಎಂದು ಜಿಲ್ಲಾಧಿಕಾರಿ ವಿವರಿಸಿದರು.

ಎಲ್ಲಾ ತಾಲ್ಲೂಕುಗಳಲ್ಲಿ ಮಳೆಕೊರತೆಯಿಂದ ತೀವ್ರ ಬರ ಪರಿಸ್ಥಿತಿ ಎದುರಾಗಿದ್ದು, ಬೆಳೆಹಾನಿಯಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಸಭೆಯಲ್ಲಿ ಮಾಹಿತಿಯನ್ನು ನೀಡಿದರು.

ಬೆಳೆಹಾನಿ, ಕುಡಿಯುವ ನೀರಿನ ಕೊರತೆ, ಮೇವು ಕೊರತೆ ಹಾಗೂ ಸಮಸ್ಯೆ ಪರಿಹಾರಕ್ಕೆ ಕೈಗೊಂಡ ಕ್ರಮಗಳ ಕುರಿತು ಮಾಹಿತಿಯನ್ನು ನೀಡಿದರು.

 ಜೂನ್ ಹಾಗೂ ಜುಲೈ ತಿಂಗಳಿನಲ್ಲಿ ಮಳೆಕೊರತೆಯಿಂದಾಗಿ ಅನೇಕ ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಲಾಗಿತ್ತು ಎಂದು ತಿಳಿಸಿದರು.

ಕೇಂದ್ರ ತಂಡವು ಜಿಲ್ಲೆಗೆ ಭೇಟಿ ನೀಡಿದ್ದು, ಜಿಲ್ಲೆಯ ಮೂರು ತಾಲ್ಲೂಕುಗಳಲ್ಲಿ ಸಂಚರಿಸಿ ಬೆಳೆಹಾನಿಯನ್ನು ವೀಕ್ಷಿಸುವ ಮುಂಚೆ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಜತೆ ಚರ್ಚೆ ನಡೆಸಲಾಯಿತು..

ಇದಾದ ಬಳಿಕ ಜಿಲ್ಲೆಯ ಬರ ಪರಿಸ್ಥಿತಿಯನ್ನು ಪ್ರತಿಬಿಂಬಿಸುವ ಛಾಯಾಚಿತ್ರಗಳನ್ನು ಕೇಂದ್ರ ಅಧ್ಯಯನ ತಂಡವು ವೀಕ್ಷಿಸಿತು.

Ramesh Babu

Journalist

Recent Posts

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

8 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

9 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

9 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

10 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

15 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

15 hours ago