ಬೆಂ.ಗ್ರಾ: ಕಳೆದ ಎಂಟು ತಿಂಗಳಲ್ಲಿ 18 ಶಿಶುಗಳ ಸಾವು- ಡಿ.21 ರಿಂದ 24 ವರೆಗೆ ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ

ಜಿಲ್ಲೆಯಲ್ಲಿ ಡಿಸೆಂಬರ್ 21 ರಿಂದ 24 ರವರೆಗೆ 2025ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ಪೋಷಕರು ತಮ್ಮ 0-5 ವರ್ಷದೊಳಗಿನ ಮಕ್ಕಳನ್ನು ಹತ್ತಿರದ ಪೊಲಿಯೋ ಬೂತ್‌ಗಳಿಗೆ ಕರೆದುಕೊಂಡು ಬಂದು ಉಚಿತ ಪೊಲಿಯೋ ಲಸಿಕೆಯನ್ನು ತಪ್ಪದೆ ಹಾಕಿಸಿ ಎಂದು ಜಿಲ್ಲಾಧಿಕಾರಿ ಎಬಿ ಬಸವರಾಜು ಅವರು ತಿಳಿಸಿದ್ದಾರೆ.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೊಲಿಯೋ ಲಸಿಕಾ ಕಾರ್ಯಕ್ರಮದ ಅನುಷ್ಠಾನದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಎಲ್ಲಾ ಸರ್ಕಾರಿ ತಾಲ್ಲೂಕು ಆಸ್ಪತ್ರೆಗಳಲ್ಲಿ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ, 24/7 ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ, ನಮ್ಮ ಕ್ಲಿನಿಕ್‌ಗಳಲ್ಲಿ ಹಾಗೂ ಆಯ್ದ ಶಾಲಾ, ಅಂಗನವಾಡಿ ಕೇಂದ್ರಗಳಲ್ಲಿ ಪೊಲಿಯೋ ಬೂತ್ ತೆರೆಯಲಾಗುವುದು.

ಜೊತೆಗೆ ಸಾರ್ವಜನಿಕ ಸ್ಥಳಗಳಾದ ಬಸ್‌ ನಿಲ್ದಾಣ, ರೈಲು ನಿಲ್ದಾಣ, ಮಾರುಕಟ್ಟೆ, ರಸ್ತೆ ಟೋಲ್‌ ಗೇಟ್‌ಗಳಲ್ಲಿ ಪೊಲಿಯೋ ಬೂತ್ ಗಳನ್ನು ತೆರೆಯಲಾಗುತ್ತದೆ ಎಂದರು.

ಪೊಲಿಯೋ ಲಸಿಕೆ ಹಾಕಲು ಜಿಲ್ಲೆಯಲ್ಲಿ ಅವಶ್ಯಕತೆ ಇರುವಷ್ಟು ಪೋಲಿಯೋ ಬೂತ್ ತೆರೆಯಬೇಕು, ಲಸಿಕೆ ಹಾಕುವವರಿಗೆ ಸೂಕ್ತ ತರಬೇತಿ ನೀಡಿ, ಟಾರ್ಗೆಟ್ ಫಿಕ್ಸ್ ಮಾಡಿ. ಲಸಿಕೆ ವಂಚಿತ ಮಕ್ಕಳಿಗೆ ಮನೆಮನೆಗೆ ತೆರಳಿ ಲಸಿಕೆ ಹಾಕಬೇಕು, ವಲಸೆ ಕಾರ್ಮಿಕರ ಮಕ್ಕಳಿಗೂ ಕೂಡ ಲಸಿಕೆ ಹಾಕಿಸಬೇಕು. ಒಟ್ಟಾರೆಯಾಗಿ ಪೋಲಿಯೋ ಲಸಿಕೆಯಿಂದ ಮಕ್ಕಳು ವಂಚಿತರಾಗದೆ ನೋಡಿಕೊಂಡು ಜಿಲ್ಲೆಯಲ್ಲಿ ಶೇಕಡ 100% ರಷ್ಟು ಪ್ರಗತಿ ಸಾಧಿಸಿ ಎಂದು ಆರೋಗ್ಯಾಧಿಕಾರಿಗಳಿಗೆ ತಿಳಿಸಿದರು.

*ಕಳೆದ ಎಂಟು ತಿಂಗಳಲ್ಲಿ 18 ಶಿಶುಗಳ ಸಾವು*

ಕಳೆದ ಏಪ್ರಿಲ್ ನಿಂದ ನವೆಂಬರ್ ವರೆಗೆ 0-1 ವರ್ಷ ದೊಳಗಿನ 18 ಶಿಶುಗಳು ಸಾವನ್ನಪ್ಪಿದ್ದು ಹೊಸಕೋಟೆ 07, ದೇವನಹಳ್ಳಿ 02, ದೊಡ್ಡಬಳ್ಳಾಪುರ 05 ಹಾಗೂ ನೆಲಮಂಗಲ 04 ಶಿಶುಗಳು ಸಾವನ್ನಪ್ಪಿವೆ. ಜೊತೆಗೆ 1-5 ವರ್ಷದೊಳಗಿನ 4 ಮಕ್ಕಳು ಹಾಗೂ ಮೂವರು ಗರ್ಭಿಣಿಯರು ಕಳೆದ ಎಂಟು ತಿಂಗಳಲ್ಲಿ ಸಾವನ್ನಪ್ಪಿದ್ದಾರೆ.

ಜಿಲ್ಲಾಧಿಕಾರಿಗಳು ತಾಯಿ ಮತ್ತು ಶಿಶು ಮರಣ ಪರೀಶೀಲನೆ ಸಭೆ ನಡೆಸಿ ಶಿಶು,ಮಕ್ಕಳು ಮತ್ತು ಗರ್ಭಿಣಿಯರ ಹಾರೈಕೆ, ಆರೋಗ್ಯ ಸಂರಕ್ಷಣೆಯಲ್ಲಿ ಆಶಾ ಕಾರ್ಯಕರ್ತೆಯರು, ನರ್ಸ್ ಗಳು, ವೈದ್ಯರ ಪಾತ್ರ ಬಹಳ ಮುಖ್ಯ. ಜಿಲ್ಲೆಯಲ್ಲಿ ಮಕ್ಕಳ, ಗರ್ಭಿಣಿಯರ ಸಾವು ತಪ್ಪಿಸುವುದು ನಿಮ್ಮ ಕೈಯಲ್ಲಿರುತ್ತದೆ. ಮಕ್ಕಳ ಹಾರೈಕೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ. ಮುಂದೆ ಈ ರೀತಿಯ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಿ ಎಂದರು.

ಆಸ್ಪತ್ರೆಗಳಲ್ಲಿ ಸರಿಯಾದ ಸಮಯಕ್ಕೆ ಮಕ್ಕಳ ಆರೋಗ್ಯ ತಪಾಸಣೆ ನಡೆಸಬೇಕು, ಅವಶ್ಯಕತೆ ಇದ್ದಲ್ಲಿ ಅಡ್ಮಿಟ್ ಮಾಡಿಕೊಂಡು ಚಿಕಿತ್ಸೆ ಆರಂಭಿಸಬೇಕು. ಆಶಾ ಕಾರ್ಯಕರ್ತೆಯರು ಮಗು, ತಾಯಿಯ ಆರೋಗ್ಯದ ಬಗ್ಗೆ ನಿಗಾ ವಹಿಸಿ ಕಾಲ ಕಾಲಕ್ಕೆ ಲಸಿಕೆ ಪಡೆಯುತ್ತಿದ್ದಾರೆ ಇಲ್ಲವೇ, ಆರೋಗ್ಯದ ಬಗ್ಗೆ ವಿಚಾರಿಸಬೇಕು. ಆಸ್ಪತ್ರೆಗಳಲ್ಲಿ ಸೂಕ್ತ ಸಮಯಕ್ಕೆ ವೈದ್ಯರು ಇಲ್ಲದಿರುವುದು, ಚಿಕಿತ್ಸೆ ಸಿಗದಿರುವುದು, ಮಾಹಿತಿ-ಅನುಭವದ ಕೊರತೆ, ನಿರ್ಲಕ್ಷ್ಯದಿಂದ ಈ ರೀತಿ ಮಕ್ಕಳ-ಗರ್ಭಿಣಿಯರ ಸಾವು ಸಂಭವಿಸುತ್ತದೆ. ಹೀಗೆ ಮುಂದುವರೆದರೆ ಘಟನೆಗೆ ಕಾರಣರಾಗುವ ಎಲ್ಲರ ಮೇಲೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿಗಳಾದ ಡಾ.ಸೀಮಾ ರುದ್ರಪ್ಪ ಮಾಬಳೆ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ಹೇಮಾವತಿ, ತಾಲ್ಲೂಕು ಆರೋಗ್ಯಾಧಿಕಾರಿಗಳು, ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

50 minutes ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

8 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

9 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

24 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago