ಬೆಂ.ಗ್ರಾ: ಕಳೆದ ಎಂಟು ತಿಂಗಳಲ್ಲಿ 18 ಶಿಶುಗಳ ಸಾವು- ಡಿ.21 ರಿಂದ 24 ವರೆಗೆ ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ

ಜಿಲ್ಲೆಯಲ್ಲಿ ಡಿಸೆಂಬರ್ 21 ರಿಂದ 24 ರವರೆಗೆ 2025ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ಪೋಷಕರು ತಮ್ಮ 0-5 ವರ್ಷದೊಳಗಿನ ಮಕ್ಕಳನ್ನು ಹತ್ತಿರದ ಪೊಲಿಯೋ ಬೂತ್‌ಗಳಿಗೆ ಕರೆದುಕೊಂಡು ಬಂದು ಉಚಿತ ಪೊಲಿಯೋ ಲಸಿಕೆಯನ್ನು ತಪ್ಪದೆ ಹಾಕಿಸಿ ಎಂದು ಜಿಲ್ಲಾಧಿಕಾರಿ ಎಬಿ ಬಸವರಾಜು ಅವರು ತಿಳಿಸಿದ್ದಾರೆ.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೊಲಿಯೋ ಲಸಿಕಾ ಕಾರ್ಯಕ್ರಮದ ಅನುಷ್ಠಾನದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಎಲ್ಲಾ ಸರ್ಕಾರಿ ತಾಲ್ಲೂಕು ಆಸ್ಪತ್ರೆಗಳಲ್ಲಿ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ, 24/7 ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ, ನಮ್ಮ ಕ್ಲಿನಿಕ್‌ಗಳಲ್ಲಿ ಹಾಗೂ ಆಯ್ದ ಶಾಲಾ, ಅಂಗನವಾಡಿ ಕೇಂದ್ರಗಳಲ್ಲಿ ಪೊಲಿಯೋ ಬೂತ್ ತೆರೆಯಲಾಗುವುದು.

ಜೊತೆಗೆ ಸಾರ್ವಜನಿಕ ಸ್ಥಳಗಳಾದ ಬಸ್‌ ನಿಲ್ದಾಣ, ರೈಲು ನಿಲ್ದಾಣ, ಮಾರುಕಟ್ಟೆ, ರಸ್ತೆ ಟೋಲ್‌ ಗೇಟ್‌ಗಳಲ್ಲಿ ಪೊಲಿಯೋ ಬೂತ್ ಗಳನ್ನು ತೆರೆಯಲಾಗುತ್ತದೆ ಎಂದರು.

ಪೊಲಿಯೋ ಲಸಿಕೆ ಹಾಕಲು ಜಿಲ್ಲೆಯಲ್ಲಿ ಅವಶ್ಯಕತೆ ಇರುವಷ್ಟು ಪೋಲಿಯೋ ಬೂತ್ ತೆರೆಯಬೇಕು, ಲಸಿಕೆ ಹಾಕುವವರಿಗೆ ಸೂಕ್ತ ತರಬೇತಿ ನೀಡಿ, ಟಾರ್ಗೆಟ್ ಫಿಕ್ಸ್ ಮಾಡಿ. ಲಸಿಕೆ ವಂಚಿತ ಮಕ್ಕಳಿಗೆ ಮನೆಮನೆಗೆ ತೆರಳಿ ಲಸಿಕೆ ಹಾಕಬೇಕು, ವಲಸೆ ಕಾರ್ಮಿಕರ ಮಕ್ಕಳಿಗೂ ಕೂಡ ಲಸಿಕೆ ಹಾಕಿಸಬೇಕು. ಒಟ್ಟಾರೆಯಾಗಿ ಪೋಲಿಯೋ ಲಸಿಕೆಯಿಂದ ಮಕ್ಕಳು ವಂಚಿತರಾಗದೆ ನೋಡಿಕೊಂಡು ಜಿಲ್ಲೆಯಲ್ಲಿ ಶೇಕಡ 100% ರಷ್ಟು ಪ್ರಗತಿ ಸಾಧಿಸಿ ಎಂದು ಆರೋಗ್ಯಾಧಿಕಾರಿಗಳಿಗೆ ತಿಳಿಸಿದರು.

*ಕಳೆದ ಎಂಟು ತಿಂಗಳಲ್ಲಿ 18 ಶಿಶುಗಳ ಸಾವು*

ಕಳೆದ ಏಪ್ರಿಲ್ ನಿಂದ ನವೆಂಬರ್ ವರೆಗೆ 0-1 ವರ್ಷ ದೊಳಗಿನ 18 ಶಿಶುಗಳು ಸಾವನ್ನಪ್ಪಿದ್ದು ಹೊಸಕೋಟೆ 07, ದೇವನಹಳ್ಳಿ 02, ದೊಡ್ಡಬಳ್ಳಾಪುರ 05 ಹಾಗೂ ನೆಲಮಂಗಲ 04 ಶಿಶುಗಳು ಸಾವನ್ನಪ್ಪಿವೆ. ಜೊತೆಗೆ 1-5 ವರ್ಷದೊಳಗಿನ 4 ಮಕ್ಕಳು ಹಾಗೂ ಮೂವರು ಗರ್ಭಿಣಿಯರು ಕಳೆದ ಎಂಟು ತಿಂಗಳಲ್ಲಿ ಸಾವನ್ನಪ್ಪಿದ್ದಾರೆ.

ಜಿಲ್ಲಾಧಿಕಾರಿಗಳು ತಾಯಿ ಮತ್ತು ಶಿಶು ಮರಣ ಪರೀಶೀಲನೆ ಸಭೆ ನಡೆಸಿ ಶಿಶು,ಮಕ್ಕಳು ಮತ್ತು ಗರ್ಭಿಣಿಯರ ಹಾರೈಕೆ, ಆರೋಗ್ಯ ಸಂರಕ್ಷಣೆಯಲ್ಲಿ ಆಶಾ ಕಾರ್ಯಕರ್ತೆಯರು, ನರ್ಸ್ ಗಳು, ವೈದ್ಯರ ಪಾತ್ರ ಬಹಳ ಮುಖ್ಯ. ಜಿಲ್ಲೆಯಲ್ಲಿ ಮಕ್ಕಳ, ಗರ್ಭಿಣಿಯರ ಸಾವು ತಪ್ಪಿಸುವುದು ನಿಮ್ಮ ಕೈಯಲ್ಲಿರುತ್ತದೆ. ಮಕ್ಕಳ ಹಾರೈಕೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ. ಮುಂದೆ ಈ ರೀತಿಯ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಿ ಎಂದರು.

ಆಸ್ಪತ್ರೆಗಳಲ್ಲಿ ಸರಿಯಾದ ಸಮಯಕ್ಕೆ ಮಕ್ಕಳ ಆರೋಗ್ಯ ತಪಾಸಣೆ ನಡೆಸಬೇಕು, ಅವಶ್ಯಕತೆ ಇದ್ದಲ್ಲಿ ಅಡ್ಮಿಟ್ ಮಾಡಿಕೊಂಡು ಚಿಕಿತ್ಸೆ ಆರಂಭಿಸಬೇಕು. ಆಶಾ ಕಾರ್ಯಕರ್ತೆಯರು ಮಗು, ತಾಯಿಯ ಆರೋಗ್ಯದ ಬಗ್ಗೆ ನಿಗಾ ವಹಿಸಿ ಕಾಲ ಕಾಲಕ್ಕೆ ಲಸಿಕೆ ಪಡೆಯುತ್ತಿದ್ದಾರೆ ಇಲ್ಲವೇ, ಆರೋಗ್ಯದ ಬಗ್ಗೆ ವಿಚಾರಿಸಬೇಕು. ಆಸ್ಪತ್ರೆಗಳಲ್ಲಿ ಸೂಕ್ತ ಸಮಯಕ್ಕೆ ವೈದ್ಯರು ಇಲ್ಲದಿರುವುದು, ಚಿಕಿತ್ಸೆ ಸಿಗದಿರುವುದು, ಮಾಹಿತಿ-ಅನುಭವದ ಕೊರತೆ, ನಿರ್ಲಕ್ಷ್ಯದಿಂದ ಈ ರೀತಿ ಮಕ್ಕಳ-ಗರ್ಭಿಣಿಯರ ಸಾವು ಸಂಭವಿಸುತ್ತದೆ. ಹೀಗೆ ಮುಂದುವರೆದರೆ ಘಟನೆಗೆ ಕಾರಣರಾಗುವ ಎಲ್ಲರ ಮೇಲೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿಗಳಾದ ಡಾ.ಸೀಮಾ ರುದ್ರಪ್ಪ ಮಾಬಳೆ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ಹೇಮಾವತಿ, ತಾಲ್ಲೂಕು ಆರೋಗ್ಯಾಧಿಕಾರಿಗಳು, ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

2 hours ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

22 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago