ಬೆಂ. ಗ್ರಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುನೀಲ್ ಕುಮಾರ್ ಎತ್ತಂಗಡಿ: ಪ್ರಭಾರಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಲಕ್ಕಾ ಕೃಷ್ಣಾರೆಡ್ಡಿ ನೇಮಕ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುನೀಲ್ ಕುಮಾರ್ ವಿರುದ್ಧ ಲೋಕಾಯುಕ್ತದಲ್ಲಿ ಅಸಮತೋಲನ ಆಸ್ತಿ ಪ್ರಕರಣ ದಾಖಲಾಗಿದ್ದು, ಅವರು ಅದೇ ಹುದ್ದೆಯಲ್ಲಿ ಮುಂದುವರೆದಲ್ಲಿ ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಅಡ್ಡಿ ಉಂಟುಮಾಡುವ ಅಥವಾ ತನಿಖೆಯಲ್ಲಿ ಹಸ್ತಕ್ಷೇಪ ಮಾಡುವ ಹಾಗೂ ಸಾಕ್ಷಿ ಪುರಾವೆಗಳನ್ನು ನಾಶಗೊಳಿಸುವ ಸಾಧ್ಯತೆಗಳಿರುವುದರಿಂದ ಇವರ ಸ್ಥಳ(ಲೀನ್) ಬದಲಾಯಿಸಲು ಇವರನ್ನು ಕೂಡಲೇ ಜಾರಿಗೆ ಬರುವಂತೆ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಧಿಕಾರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದೆ.

ಈ ಅಧಿಕಾರಿಯು ತಮ್ಮ ಮುಂದಿನ ಸ್ಥಳ ನಿಯುಕ್ತಿಗಾಗಿ ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇವರಲ್ಲಿ ವರದಿ ಮಾಡಿಕೊಳ್ಳಲು ಸೂಚಿಸಿದೆ.

ಡಾ. ಲಕ್ಕಾ ಕೃಷ್ಣಾರೆಡ್ಡಿ ಅವರನ್ನು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಧಿಕಾರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹುದ್ದೆಯಲ್ಲಿ ಹೆಚ್ಚುವರಿ ಪ್ರಭಾರದಲ್ಲಿಸಿ ನೇಮಿಸಲಾಗಿದೆ.

Leave a Reply

Your email address will not be published. Required fields are marked *